Crime

ಬೈಕ್ ಕಳ್ಳತನ: ಆರೋಪಿಯನ್ನು ಬಂಧಿಸಿದ ಕೊಟ್ಟೂರು ಪೊಲೀಸರು

ಕೊಟ್ಟೂರು:- ಪಟ್ಟಣದಲ್ಲಿ ಬೈಕ್ ನ ಹ್ಯಾಂಡ್ ಲಾಕ್ ಮುರಿದು ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆರೋಪಿತನಿಂದ 1,00,000 ರೂ ಬೆಲೆ ಬಾಳುವ ಒಟ್ಟು ಮೂರು ಬೈಕ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ದಿನಾಂಕ 07-05-2025 ರಂದು ರಾತ್ರಿ 8-15 ಘಂಟೆಗೆ ಕೊಟ್ಟೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಕೈಗೆತ್ತಿಕೊಂಡ ಕೊಟ್ಟೂರು ಪೊಲೀಸರು ಆರೋಪಿತನ ಪತ್ತೆಗಾಗಿ ಶ್ರೀ ಮಲ್ಲೇಶ್ ದೊಡ್ಡಮನಿ ಡಿವೈಎಸ್ಪಿ ಕೂಡ್ಲಿಗಿ ರವರ ಮಾರ್ಗದರ್ಶನದಲ್ಲಿ ಶ್ರೀ ವೆಂಕಟಸ್ವಾಮಿ.ಟಿ,ಸಿಪಿಐ ಕೊಟ್ಟೂರು ರವರ ನೇತೃತ್ವದಲ್ಲಿ ಶ್ರೀ ಮತಿ ಗೀತಾಂಜಲಿ ಶಿಂಧೆ ಪಿಎಸ್ಐ,ಸಿಬ್ಬಂದಿಗಳಾದ ಶ್ರೀ ಬಸವರಾಜ್ ಹೆಚ್,ಶ್ರೀ ವೀರೇಶ್,ಶ್ರೀ ಶಶಿಧರ,ಶ್ರೀ ನಾಗಪ್ಪ,ಶ್ರೀ ಯರಿಸ್ವಾಮಿ,ಇವರುಗಳ ನೇತೃತ್ವದಲ್ಲಿ ತಂಡ ರಚಿಸಿ ವಿವಿಧ ಆಯಾಮಗಳಲ್ಲಿ ತನಿಖೆಯನ್ನು ನಡೆಸಿ ಪ್ರಕರಣದ ಆರೋಪಿ ಪತ್ತೆ ಕಾರ್ಯದಲ್ಲಿ ಕಾರ್ಯನಿರತರಾಗಿ ಆರೋಪಿ ಕೆ.ಹನುಮಂತ@ಟಿಂಗು ತಂದೆ ತಿಂದಪ್ಪ 23 ವರ್ಷ ವಾಸ ಉಜ್ಜಿನಿ ಹೊಸ ಪ್ಲಾಟ್ ಉಜ್ಜಿನಿ,ಕೊರವ ಜನಾಂಗಕ್ಕೆ ಸೇರಿದ್ದು ಗಾರೆ ಕೆಲಸ ಮಾಡಿಕೊಂಡಿರುತ್ತಾನೆ.

ಈತನನ್ನು ದಿನಾಂಕ 09-05-2025 ರಂದು ಬೆಳಿಗ್ಗೆ 11-45 ಘಂಟೆಗೆ ಕೊಟ್ಟೂರು ಪಟ್ಟಣದ ಶ್ರೀ ಮರುಳ ಸಿದ್ದೇಶ್ವರ ಕಲ್ಯಾಣ ಮಂಟಪದ ಹತ್ತಿರ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ಆರೋಪಿತನಿಂದ ಅಂದಾಜು 1,00,000 ರೂ ಬೆಲೆ ಬಾಳುವ ಹೀರೋ ಸ್ಪ್ಲೆಂಡರ್ ಪ್ಲಸ್ ಮೂರು ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಈ ಪತ್ತೆ ಕಾರ್ಯಾಚರಣೆಗೆ ಮಾನ್ಯ ಶ್ರೀ ಹರಿಬಾಬು ಪೋಲಿಸ್ ಅಧೀಕ್ಷಕರು ವಿಜಯನಗರ ಜಿಲ್ಲೆ ರವರು ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.

ವರದಿ:- ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago