ಕೊಟ್ಟೂರು:- ಪಟ್ಟಣದಲ್ಲಿ ಬೈಕ್ ನ ಹ್ಯಾಂಡ್ ಲಾಕ್ ಮುರಿದು ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆರೋಪಿತನಿಂದ 1,00,000 ರೂ ಬೆಲೆ ಬಾಳುವ ಒಟ್ಟು ಮೂರು ಬೈಕ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ದಿನಾಂಕ 07-05-2025 ರಂದು ರಾತ್ರಿ 8-15 ಘಂಟೆಗೆ ಕೊಟ್ಟೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಕೈಗೆತ್ತಿಕೊಂಡ ಕೊಟ್ಟೂರು ಪೊಲೀಸರು ಆರೋಪಿತನ ಪತ್ತೆಗಾಗಿ ಶ್ರೀ ಮಲ್ಲೇಶ್ ದೊಡ್ಡಮನಿ ಡಿವೈಎಸ್ಪಿ ಕೂಡ್ಲಿಗಿ ರವರ ಮಾರ್ಗದರ್ಶನದಲ್ಲಿ ಶ್ರೀ ವೆಂಕಟಸ್ವಾಮಿ.ಟಿ,ಸಿಪಿಐ ಕೊಟ್ಟೂರು ರವರ ನೇತೃತ್ವದಲ್ಲಿ ಶ್ರೀ ಮತಿ ಗೀತಾಂಜಲಿ ಶಿಂಧೆ ಪಿಎಸ್ಐ,ಸಿಬ್ಬಂದಿಗಳಾದ ಶ್ರೀ ಬಸವರಾಜ್ ಹೆಚ್,ಶ್ರೀ ವೀರೇಶ್,ಶ್ರೀ ಶಶಿಧರ,ಶ್ರೀ ನಾಗಪ್ಪ,ಶ್ರೀ ಯರಿಸ್ವಾಮಿ,ಇವರುಗಳ ನೇತೃತ್ವದಲ್ಲಿ ತಂಡ ರಚಿಸಿ ವಿವಿಧ ಆಯಾಮಗಳಲ್ಲಿ ತನಿಖೆಯನ್ನು ನಡೆಸಿ ಪ್ರಕರಣದ ಆರೋಪಿ ಪತ್ತೆ ಕಾರ್ಯದಲ್ಲಿ ಕಾರ್ಯನಿರತರಾಗಿ ಆರೋಪಿ ಕೆ.ಹನುಮಂತ@ಟಿಂಗು ತಂದೆ ತಿಂದಪ್ಪ 23 ವರ್ಷ ವಾಸ ಉಜ್ಜಿನಿ ಹೊಸ ಪ್ಲಾಟ್ ಉಜ್ಜಿನಿ,ಕೊರವ ಜನಾಂಗಕ್ಕೆ ಸೇರಿದ್ದು ಗಾರೆ ಕೆಲಸ ಮಾಡಿಕೊಂಡಿರುತ್ತಾನೆ.
ಈತನನ್ನು ದಿನಾಂಕ 09-05-2025 ರಂದು ಬೆಳಿಗ್ಗೆ 11-45 ಘಂಟೆಗೆ ಕೊಟ್ಟೂರು ಪಟ್ಟಣದ ಶ್ರೀ ಮರುಳ ಸಿದ್ದೇಶ್ವರ ಕಲ್ಯಾಣ ಮಂಟಪದ ಹತ್ತಿರ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ಆರೋಪಿತನಿಂದ ಅಂದಾಜು 1,00,000 ರೂ ಬೆಲೆ ಬಾಳುವ ಹೀರೋ ಸ್ಪ್ಲೆಂಡರ್ ಪ್ಲಸ್ ಮೂರು ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಈ ಪತ್ತೆ ಕಾರ್ಯಾಚರಣೆಗೆ ಮಾನ್ಯ ಶ್ರೀ ಹರಿಬಾಬು ಪೋಲಿಸ್ ಅಧೀಕ್ಷಕರು ವಿಜಯನಗರ ಜಿಲ್ಲೆ ರವರು ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.
ವರದಿ:- ಮಣಿಕಂಠ. ಬಿ
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…