ಕೊಟ್ಟೂರು ತಾಲೂಕಿನ ಮೊತಿಕಲ್ ತಾಂಡ ಗ್ರಾಮದ ಮನೋಜ್ ನಾಯ್ಕ್ (32) ಅವರನ್ನು ಅಪರಿಚಿತ ಆಟೋ ಡಿಕ್ಕಿ ಹೊಡೆದು, ಅವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ನಡೆದಿದೆ.
ಘಟನೆ ವಿವರ:
ಮನೋಜ್ ನಾಯ್ಕ್ ತಮ್ಮ ಗ್ರಾಮದಿಂದ ಮಡ್ರಳ್ಳಿ ಗ್ರಾಮದ ತೇರಿಗೆ ತೆರಳಿ, ಪೂಜೆ ಮುಗಿಸಿಕೊಂಡು ವಾಪಸ್ಸು ತಮ್ಮ ಗ್ರಾಮದತ್ತ ಮೋಟರ್ಸೈಕಲ್ನಲ್ಲಿ ಪ್ರಯಾಣಿಸುತ್ತಿದ್ದರು. ತೂಲಹಳ್ಳಿ ಮಾರ್ಗವಾಗಿ ಚಿನ್ನನಹಳ್ಳಿ ರಸ್ತೆಯ ಮಂಗನಹಳ್ಳಿ ಕ್ರಾಸ್ ಬಳಿ, ಎದುರುಗಡೆಯಿಂದ ಬಂದ ಅಜಾಗರೂಕ ಆಟೋ ಚಾಲಕ ಅವರ ಬೈಕ್ಗೆ ಡಿಕ್ಕಿ ಹೊಡೆದಿದ್ದಾನೆ.
ಬಲವಾದ ಪೆಟ್ಟು ಮತ್ತು ತೀವ್ರ ರಕ್ತಗಾಯಗೊಂಡ ಮನೋಜ್ ನಾಯ್ಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆಟೋ ಚಾಲಕ ಪರಾರಿಯಾಗಿದ್ದಾನೆ
ಡಿಕ್ಕಿ ಹೊಡೆಸಿದ ಆಟೋ ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದೆ. ಮಗನ ಸಾವಿಗೆ ಕಾರಣವಾದ ಆಟೋ ಪತ್ತೆ ಮಾಡಿ, ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮೃತನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಅಪರಿಚಿತ ಆಟೋ ಮತ್ತು ಚಾಲಕನ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.
ವರದಿ: ಬಿ. ಮಣಿಕಂಠ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…