ಸಾರ್ವಜನಿಕ ರಸ್ತೆಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ದಿನೇ ದಿನೇ ಹೆಚ್ಚುತ್ತಿರುವ ನಡುವೆಯೇ, ಹೈದರಾಬಾದ್ನಲ್ಲಿ ನಡೆದ ಘಟನೆೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ತಪ್ಪು ದಾರಿಯಲ್ಲಿ ಬಂದ ಸರ್ಕಾರಿ ಬಸ್ಗೆ ಬೈಕ್ ಸವಾರನೊಬ್ಬ ದಾರಿ ಬಿಡದೆ, ಕೊನೆಗೆ ಬಸ್ ಚಾಲಕನನ್ನೇ ಸರಿಯಾದ ಲೇನ್ಗೆ ಹಿಂತಿರುಗುವಂತೆ ಮಾಡಿದ ಘಟನೆ ಇದೀಗ ವೈರಲ್ ಆಗಿದೆ.
ವರದಿಗಳ ಪ್ರಕಾರ, ಹೈದರಾಬಾದ್ನ ವೇವ್ರಾಕ್ ಮತ್ತು ಬಚುಪಲ್ಲಿ ನಡುವಿನ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವೈರಲ್ ವಿಡಿಯೋದಲ್ಲಿ ಸರ್ಕಾರಿ ಬಸ್ ಒಂದು ರಸ್ತೆಯ ತಪ್ಪು ಬದಿಯಲ್ಲಿ ಚಲಿಸುತ್ತಿರುವುದು ಕಾಣಿಸುತ್ತದೆ. ಇದೇ ವೇಳೆ ತನ್ನ ಸರಿಯಾದ ಲೇನ್ನಲ್ಲಿ ಬರುತ್ತಿದ್ದ ಬೈಕ್ ಸವಾರ, ಎದುರುಗಡೆ ಬರುತ್ತಿದ್ದ ಬಸ್ ನೋಡಿ ಹೆದರದೆ ನೇರವಾಗಿ ಬಸ್ ಎದುರಲ್ಲೇ ಬೈಕ್ ನಿಲ್ಲಿಸಿದ್ದಾನೆ.
ಬಸ್ ಚಾಲಕ ನಿರಂತರವಾಗಿ ಹಾರ್ನ್ ಮಾಡುತ್ತಿದ್ದರೂ, ಬೈಕ್ ಸವಾರ ಮಾತ್ರ ಒಂದು ಇಂಚೂ ಹಿಂದೆ ಸರಿಯದೆ ಬಸ್ಗೆ ದಾರಿ ಬಿಡಲು ನಿರಾಕರಿಸಿದ್ದಾನೆ. ಕೆಲಕಾಲ ರಸ್ತೆ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸ್ಥಳದಲ್ಲಿದ್ದವರು ಕೂಡ ಅಚ್ಚರಿಯಿಂದ ಈ ದೃಶ್ಯ ವೀಕ್ಷಿಸಿದ್ದಾರೆ.
ಕೊನೆಗೆ ಪರಿಸ್ಥಿತಿಗೆ ಮಣಿದ ಬಸ್ ಚಾಲಕ ವಾಹನವನ್ನು ಹಿಮ್ಮುಖವಾಗಿ ಚಲಾಯಿಸಿ, ಸರಿಯಾದ ಲೇನ್ಗೆ ಮರಳಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಬೈಕ್ ಸವಾರನ ಧೈರ್ಯ ಮತ್ತು ಸಂಚಾರ ನಿಯಮಗಳ ಬಗ್ಗೆ ತೋರಿದ ಜಾಗೃತಿಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತಪ್ಪು ದಾರಿಯಲ್ಲಿ ವಾಹನ ಚಲಾಯಿಸುವುದು ಅಪಘಾತಗಳಿಗೆ ಕಾರಣವಾಗಬಹುದು. ಇಂತಹ ಉಲ್ಲಂಘನೆಗಳನ್ನು ಸಹಿಸಿಕೊಂಡರೆ ರಸ್ತೆಗಳಲ್ಲಿ ಅಜಾಗರೂಕ ಚಾಲನೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ರಸ್ತೆ ಸುರಕ್ಷತಾ ನಿಯಮಗಳು ಎಲ್ಲರಿಗೂ ಸಮಾನವಾಗಿ ಅನ್ವಯಿಸಬೇಕು ಎಂಬ ಸಂದೇಶವನ್ನು ಈ ಘಟನೆ ಮತ್ತೆ ನೆನಪಿಸಿದೆ.
ಬೆಂಗಳೂರು: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ ಪ್ರೀತಿಗೆ ತಿರುಗಿದ್ದ ಸಂಬಂಧವು ಕೊನೆಗೆ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಪ್ರದೇಶದಲ್ಲಿ…
ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್ಸಿ/ಎಸ್ಟಿ ದೌರ್ಜನ್ಯ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನಿಸಿದ…
ಲಕ್ನೋದಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದ್ದು, ಬನ್ ತಿಂದು ಹಣ ನೀಡದೆ ಹೋಗಲು ಯತ್ನಿಸಿದ ವ್ಯಕ್ತಿಯೊಬ್ಬ ತಾನು ಐಪಿಎಸ್ ಅಧಿಕಾರಿ…
ರಾಜ್ಯ ರಾಜಕಾರಣದಲ್ಲಿ ಭ್ರಷ್ಟಾಚಾರದ ಆರೋಪಗಳು ಮತ್ತೆ ಸದ್ದು ಮಾಡುತ್ತಿದ್ದು, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶಿಕಾರಿಪುರ ಗ್ರಾಮದಲ್ಲಿ ಕುಟುಂಬಗಳನ್ನು ಬೆಚ್ಚಿಬೀಳಿಸುವ ಘಟನೆೊಂದು ಬೆಳಕಿಗೆ ಬಂದಿದೆ. ಸ್ನೇಹದ ಹೆಸರಿನಲ್ಲಿ ಮನೆಗೆ ಆಗಾಗ್ಗೆ…
ಮಂಡ್ಯ: ಆಟವಾಡುತ್ತಿದ್ದ ವೇಳೆ ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದ ದುರ್ಘಟನೆ ಮಂಡ್ಯ ಜಿಲ್ಲೆಯ…