Latest

ಕಬ್ಬು ಮಾರಾಟಕ್ಕೆ ರೈತ-ಸಕ್ಕರೆ ಕಾರ್ಖಾನೆ ನಡುವೆ ದ್ವಿಪಕ್ಷೀಯ ಒಪ್ಪಂದ ಕಡ್ಡಾಯ

ಕಲಬುರಗಿ:  ಸಕ್ಕರೆ ಕಾರ್ಖಾನೆ ಮತ್ತು ರೈತರೊಂದಿಗೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿ.ಸಿ. ಯಶವಂತ ವಿ. ಗುರುಕರ, ಕಬ್ಬು ನಿಯಂತ್ರಣ ಆದೇಶ-1966ರ ನಿಯಮ 6ರ ಪ್ರಕಾರ ದ್ವಿಪಕ್ಷೀಯ ಒಪ್ಪಂದ ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ ಕಬ್ಬು ಬೆಳೆಯುವ ರೈತರು ಅದನ್ನು ಮಾರಾಟ ಮಾಡುವ ಸಕ್ಕರೆ ಕಾರ್ಖಾನೆಗಳೊಂದಿಗೆ ಎಫ್.ಆರ್.ಪಿ. ದರದನ್ವಯ ಮಾರಾಟ ಮಾಡಲು ಮತ್ತು ಸಕ್ಕರೆ ಆಯುಕ್ತರ ಆದೇಶದಂತೆ ಪ್ರತಿ ಕಿ.ಮೀ. ಅನ್ವಯ ಸಾರಿಗೆ ಮತು ಕಟಾವಿನ ವೆಚ್ಚ ಕಡಿತದೊಂದಿಗೆ ಹಣ ಪಾವತಿಸುವ ಷರತ್ತಿಗೊಳಪಟ್ಟು ದ್ವಿಪಕ್ಷೀಯ ಒಪ್ಪಂದ ಮಾಡುವುದು ಕಡ್ಡಾಯವಾಗಿದ್ದು, ಇದನ್ನು ಕಲಬುರಗಿ ಜಿಲ್ಲೆಯಲ್ಲಿ ಪ್ರಥಮವಾಗಿ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ರೈತರ ಸಹಮತದೊಂದಿಗೆ ಇಂದು ನಡೆದ ಸಭೆಯಲ್ಲಿ ನಿರ್ಧರಿಸಿದೆ. ಒಪ್ಪಂದದ ನಮೂನೆಯನ್ನು ಡಿ.ಸಿ. ಕಚೇರಿಯಿಂದಲೆ ತಯಾರಿಸಿ ತಹಶೀಲ್ದಾರರ ಮೂಲಕ ರೈತರಿಗೆ ಮತ್ತು ಕಾರ್ಖಾನೆಗಳಿಗೆ ನೀಡಲಾಗುವುದು ಎಂದರು ಒಪ್ಪಂದಕ್ಕೆ ಸಹಿ ಹಾಕಲು ರೈತರಲ್ಲಿ ಮನವಿ ಮಾಡಿದ್ದರು.
ಕಬ್ಬು ಬೆಳೆಗಾರರ ಅನೇಕ ಸಮಸ್ಯೆಗಳಿಗೆ ಒಮ್ಮೆಲೆ ತಿಲಾಂಜಲಿ ನೀಡಲು ರೈತರು ಬೆಳೆದ ಕಬ್ಬನ್ನು ಸಕಾಲದಲ್ಲಿ ಕಟಾವು ಮಾಡಿಕೊಂಡು ಹೋಗಲು ಆಯಾ ಸಕ್ಕರೆ ಕಾರ್ಖಾನೆಗಳಿಂದ ಪ್ರದೇಶವಾರು ಇಬ್ಬರು ಸಿಬ್ಬಂದಿಗಳನ್ನು ಮೇಲ್ವಿಚಾರಣೆ ಮಾಡಲಿದ್ದಾರೆ ಇಂದು ನಡೆಸಿದ ರೈತರು ಮತ್ತು ಸಕ್ಕರೆ ಕಾರ್ಖಾನೆ ನಡುವಿನ ಸಭೆ ಫಲಪ್ರಧವಾಗಿದ್ದು, ಕಬ್ಬು ಬೆಳೆಗಾರರ ಹಿತದಲ್ಲಿ ಜಿಲ್ಲೆಯ ಮಟ್ಟಿಗೆ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಕಂಪನಿಗಳಲ್ಲಿ ಲಂಚಾವತಾರಕ್ಕೆ ಬ್ರೇಕ್ ಬೀಳಲಿದ್ದು, ಅನ್ನದಾತ ರೈತನಿಗೆ ಕಿರಿಕಿರಿ ತಪ್ಪಲಿದೆ. ಒಪ್ಪಂದದಂತೆ ಕಾಲಮಿತಿಯಲ್ಲಿ ಹಣ ಸಿಗಲಿದೆ. ಪರಿಹಾರ ಕೊಟ್ಟಿಲ್ಲ, ಕಬ್ಬು ಕಟಾವಾಗಿಲ್ಲ ಎನ್ನುವ ದೂರುಗಳು ಇನ್ನು ಮುಂದೆ ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದೇವೆ ಎಂದು ಯಶವಂತ ವಿ. ಗುರುಕರ್ ವಿವರಿಸಿದರು.

ಕಬ್ಬು ಕಟಾವು ಮಾಡುವ ಮುನ್ನ ಗ್ರಾಮಸ್ಥರಿಗೆ ಮೊದಲೇ ಮಾಹಿತಿ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಮೊಬೈಲ್ ತಂತ್ರಾಂಶ ಸಹ ಸಿದ್ಧಪಡಿಸಲಾಗುತ್ತಿದೆ. ಇನ್ನೂ ಕಬ್ಬು ತೂಕದ ದೂರುಗಳ ನಿವಾರಣೆಗೆ ಕಾನೂನು ಮಾಪನಶಾಸ್ತ್ರ ಇಲಾಖೆಯಿಂದ 2 ರ್ಯಾಪಿಡ್ ತಪಾಸಣಾ ತಂಡಗಳನ್ನು ರಚಿಸಲಾಗಿದೆ. ಅಲ್ಲದೆ ಇದೇ ಇಲಾಖೆಯಡಿ ಕಬ್ಬು ಕಟಾವು ಮತ್ತು ಮಾರಾಟ ಕುರಿತಂತೆ ರೈತರು ದೂರು ಸಲ್ಲಿಸಲು ಸಹಾಯವಾಣಿ ಸ್ಥಾಪಿಸಲಾಗುತ್ತಿದೆ. ರೈತರು ದೂರು ಸಲ್ಲಿಸಿದ 24 ಗಂಟೆಯಲ್ಲಿ ಅಧಿಕಾರಿಗಳ ತಂಡ ಹೊಲಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಲಿದೆ ಎಂದರು.
ವರದಿ: ನಾಗರಾಜ್ ಗೊಬ್ಬುರ್

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

4 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

4 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

5 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago