ಕಲಬುರಗಿ: ಸಕ್ಕರೆ ಕಾರ್ಖಾನೆ ಮತ್ತು ರೈತರೊಂದಿಗೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿ.ಸಿ. ಯಶವಂತ ವಿ. ಗುರುಕರ, ಕಬ್ಬು ನಿಯಂತ್ರಣ ಆದೇಶ-1966ರ ನಿಯಮ 6ರ ಪ್ರಕಾರ ದ್ವಿಪಕ್ಷೀಯ ಒಪ್ಪಂದ ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ ಕಬ್ಬು ಬೆಳೆಯುವ ರೈತರು ಅದನ್ನು ಮಾರಾಟ ಮಾಡುವ ಸಕ್ಕರೆ ಕಾರ್ಖಾನೆಗಳೊಂದಿಗೆ ಎಫ್.ಆರ್.ಪಿ. ದರದನ್ವಯ ಮಾರಾಟ ಮಾಡಲು ಮತ್ತು ಸಕ್ಕರೆ ಆಯುಕ್ತರ ಆದೇಶದಂತೆ ಪ್ರತಿ ಕಿ.ಮೀ. ಅನ್ವಯ ಸಾರಿಗೆ ಮತು ಕಟಾವಿನ ವೆಚ್ಚ ಕಡಿತದೊಂದಿಗೆ ಹಣ ಪಾವತಿಸುವ ಷರತ್ತಿಗೊಳಪಟ್ಟು ದ್ವಿಪಕ್ಷೀಯ ಒಪ್ಪಂದ ಮಾಡುವುದು ಕಡ್ಡಾಯವಾಗಿದ್ದು, ಇದನ್ನು ಕಲಬುರಗಿ ಜಿಲ್ಲೆಯಲ್ಲಿ ಪ್ರಥಮವಾಗಿ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ರೈತರ ಸಹಮತದೊಂದಿಗೆ ಇಂದು ನಡೆದ ಸಭೆಯಲ್ಲಿ ನಿರ್ಧರಿಸಿದೆ. ಒಪ್ಪಂದದ ನಮೂನೆಯನ್ನು ಡಿ.ಸಿ. ಕಚೇರಿಯಿಂದಲೆ ತಯಾರಿಸಿ ತಹಶೀಲ್ದಾರರ ಮೂಲಕ ರೈತರಿಗೆ ಮತ್ತು ಕಾರ್ಖಾನೆಗಳಿಗೆ ನೀಡಲಾಗುವುದು ಎಂದರು ಒಪ್ಪಂದಕ್ಕೆ ಸಹಿ ಹಾಕಲು ರೈತರಲ್ಲಿ ಮನವಿ ಮಾಡಿದ್ದರು.
ಕಬ್ಬು ಬೆಳೆಗಾರರ ಅನೇಕ ಸಮಸ್ಯೆಗಳಿಗೆ ಒಮ್ಮೆಲೆ ತಿಲಾಂಜಲಿ ನೀಡಲು ರೈತರು ಬೆಳೆದ ಕಬ್ಬನ್ನು ಸಕಾಲದಲ್ಲಿ ಕಟಾವು ಮಾಡಿಕೊಂಡು ಹೋಗಲು ಆಯಾ ಸಕ್ಕರೆ ಕಾರ್ಖಾನೆಗಳಿಂದ ಪ್ರದೇಶವಾರು ಇಬ್ಬರು ಸಿಬ್ಬಂದಿಗಳನ್ನು ಮೇಲ್ವಿಚಾರಣೆ ಮಾಡಲಿದ್ದಾರೆ ಇಂದು ನಡೆಸಿದ ರೈತರು ಮತ್ತು ಸಕ್ಕರೆ ಕಾರ್ಖಾನೆ ನಡುವಿನ ಸಭೆ ಫಲಪ್ರಧವಾಗಿದ್ದು, ಕಬ್ಬು ಬೆಳೆಗಾರರ ಹಿತದಲ್ಲಿ ಜಿಲ್ಲೆಯ ಮಟ್ಟಿಗೆ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಕಂಪನಿಗಳಲ್ಲಿ ಲಂಚಾವತಾರಕ್ಕೆ ಬ್ರೇಕ್ ಬೀಳಲಿದ್ದು, ಅನ್ನದಾತ ರೈತನಿಗೆ ಕಿರಿಕಿರಿ ತಪ್ಪಲಿದೆ. ಒಪ್ಪಂದದಂತೆ ಕಾಲಮಿತಿಯಲ್ಲಿ ಹಣ ಸಿಗಲಿದೆ. ಪರಿಹಾರ ಕೊಟ್ಟಿಲ್ಲ, ಕಬ್ಬು ಕಟಾವಾಗಿಲ್ಲ ಎನ್ನುವ ದೂರುಗಳು ಇನ್ನು ಮುಂದೆ ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದೇವೆ ಎಂದು ಯಶವಂತ ವಿ. ಗುರುಕರ್ ವಿವರಿಸಿದರು.
ಕಬ್ಬು ಕಟಾವು ಮಾಡುವ ಮುನ್ನ ಗ್ರಾಮಸ್ಥರಿಗೆ ಮೊದಲೇ ಮಾಹಿತಿ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಮೊಬೈಲ್ ತಂತ್ರಾಂಶ ಸಹ ಸಿದ್ಧಪಡಿಸಲಾಗುತ್ತಿದೆ. ಇನ್ನೂ ಕಬ್ಬು ತೂಕದ ದೂರುಗಳ ನಿವಾರಣೆಗೆ ಕಾನೂನು ಮಾಪನಶಾಸ್ತ್ರ ಇಲಾಖೆಯಿಂದ 2 ರ್ಯಾಪಿಡ್ ತಪಾಸಣಾ ತಂಡಗಳನ್ನು ರಚಿಸಲಾಗಿದೆ. ಅಲ್ಲದೆ ಇದೇ ಇಲಾಖೆಯಡಿ ಕಬ್ಬು ಕಟಾವು ಮತ್ತು ಮಾರಾಟ ಕುರಿತಂತೆ ರೈತರು ದೂರು ಸಲ್ಲಿಸಲು ಸಹಾಯವಾಣಿ ಸ್ಥಾಪಿಸಲಾಗುತ್ತಿದೆ. ರೈತರು ದೂರು ಸಲ್ಲಿಸಿದ 24 ಗಂಟೆಯಲ್ಲಿ ಅಧಿಕಾರಿಗಳ ತಂಡ ಹೊಲಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಲಿದೆ ಎಂದರು.
ವರದಿ: ನಾಗರಾಜ್ ಗೊಬ್ಬುರ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…