Latest

ಕಬ್ಬು ಮಾರಾಟಕ್ಕೆ ರೈತ-ಸಕ್ಕರೆ ಕಾರ್ಖಾನೆ ನಡುವೆ ದ್ವಿಪಕ್ಷೀಯ ಒಪ್ಪಂದ ಕಡ್ಡಾಯ

ಕಲಬುರಗಿ:  ಸಕ್ಕರೆ ಕಾರ್ಖಾನೆ ಮತ್ತು ರೈತರೊಂದಿಗೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿ.ಸಿ. ಯಶವಂತ ವಿ. ಗುರುಕರ, ಕಬ್ಬು ನಿಯಂತ್ರಣ ಆದೇಶ-1966ರ ನಿಯಮ 6ರ ಪ್ರಕಾರ ದ್ವಿಪಕ್ಷೀಯ ಒಪ್ಪಂದ ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ ಕಬ್ಬು ಬೆಳೆಯುವ ರೈತರು ಅದನ್ನು ಮಾರಾಟ ಮಾಡುವ ಸಕ್ಕರೆ ಕಾರ್ಖಾನೆಗಳೊಂದಿಗೆ ಎಫ್.ಆರ್.ಪಿ. ದರದನ್ವಯ ಮಾರಾಟ ಮಾಡಲು ಮತ್ತು ಸಕ್ಕರೆ ಆಯುಕ್ತರ ಆದೇಶದಂತೆ ಪ್ರತಿ ಕಿ.ಮೀ. ಅನ್ವಯ ಸಾರಿಗೆ ಮತು ಕಟಾವಿನ ವೆಚ್ಚ ಕಡಿತದೊಂದಿಗೆ ಹಣ ಪಾವತಿಸುವ ಷರತ್ತಿಗೊಳಪಟ್ಟು ದ್ವಿಪಕ್ಷೀಯ ಒಪ್ಪಂದ ಮಾಡುವುದು ಕಡ್ಡಾಯವಾಗಿದ್ದು, ಇದನ್ನು ಕಲಬುರಗಿ ಜಿಲ್ಲೆಯಲ್ಲಿ ಪ್ರಥಮವಾಗಿ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ರೈತರ ಸಹಮತದೊಂದಿಗೆ ಇಂದು ನಡೆದ ಸಭೆಯಲ್ಲಿ ನಿರ್ಧರಿಸಿದೆ. ಒಪ್ಪಂದದ ನಮೂನೆಯನ್ನು ಡಿ.ಸಿ. ಕಚೇರಿಯಿಂದಲೆ ತಯಾರಿಸಿ ತಹಶೀಲ್ದಾರರ ಮೂಲಕ ರೈತರಿಗೆ ಮತ್ತು ಕಾರ್ಖಾನೆಗಳಿಗೆ ನೀಡಲಾಗುವುದು ಎಂದರು ಒಪ್ಪಂದಕ್ಕೆ ಸಹಿ ಹಾಕಲು ರೈತರಲ್ಲಿ ಮನವಿ ಮಾಡಿದ್ದರು.
ಕಬ್ಬು ಬೆಳೆಗಾರರ ಅನೇಕ ಸಮಸ್ಯೆಗಳಿಗೆ ಒಮ್ಮೆಲೆ ತಿಲಾಂಜಲಿ ನೀಡಲು ರೈತರು ಬೆಳೆದ ಕಬ್ಬನ್ನು ಸಕಾಲದಲ್ಲಿ ಕಟಾವು ಮಾಡಿಕೊಂಡು ಹೋಗಲು ಆಯಾ ಸಕ್ಕರೆ ಕಾರ್ಖಾನೆಗಳಿಂದ ಪ್ರದೇಶವಾರು ಇಬ್ಬರು ಸಿಬ್ಬಂದಿಗಳನ್ನು ಮೇಲ್ವಿಚಾರಣೆ ಮಾಡಲಿದ್ದಾರೆ ಇಂದು ನಡೆಸಿದ ರೈತರು ಮತ್ತು ಸಕ್ಕರೆ ಕಾರ್ಖಾನೆ ನಡುವಿನ ಸಭೆ ಫಲಪ್ರಧವಾಗಿದ್ದು, ಕಬ್ಬು ಬೆಳೆಗಾರರ ಹಿತದಲ್ಲಿ ಜಿಲ್ಲೆಯ ಮಟ್ಟಿಗೆ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಕಂಪನಿಗಳಲ್ಲಿ ಲಂಚಾವತಾರಕ್ಕೆ ಬ್ರೇಕ್ ಬೀಳಲಿದ್ದು, ಅನ್ನದಾತ ರೈತನಿಗೆ ಕಿರಿಕಿರಿ ತಪ್ಪಲಿದೆ. ಒಪ್ಪಂದದಂತೆ ಕಾಲಮಿತಿಯಲ್ಲಿ ಹಣ ಸಿಗಲಿದೆ. ಪರಿಹಾರ ಕೊಟ್ಟಿಲ್ಲ, ಕಬ್ಬು ಕಟಾವಾಗಿಲ್ಲ ಎನ್ನುವ ದೂರುಗಳು ಇನ್ನು ಮುಂದೆ ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದೇವೆ ಎಂದು ಯಶವಂತ ವಿ. ಗುರುಕರ್ ವಿವರಿಸಿದರು.

ಕಬ್ಬು ಕಟಾವು ಮಾಡುವ ಮುನ್ನ ಗ್ರಾಮಸ್ಥರಿಗೆ ಮೊದಲೇ ಮಾಹಿತಿ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಮೊಬೈಲ್ ತಂತ್ರಾಂಶ ಸಹ ಸಿದ್ಧಪಡಿಸಲಾಗುತ್ತಿದೆ. ಇನ್ನೂ ಕಬ್ಬು ತೂಕದ ದೂರುಗಳ ನಿವಾರಣೆಗೆ ಕಾನೂನು ಮಾಪನಶಾಸ್ತ್ರ ಇಲಾಖೆಯಿಂದ 2 ರ್ಯಾಪಿಡ್ ತಪಾಸಣಾ ತಂಡಗಳನ್ನು ರಚಿಸಲಾಗಿದೆ. ಅಲ್ಲದೆ ಇದೇ ಇಲಾಖೆಯಡಿ ಕಬ್ಬು ಕಟಾವು ಮತ್ತು ಮಾರಾಟ ಕುರಿತಂತೆ ರೈತರು ದೂರು ಸಲ್ಲಿಸಲು ಸಹಾಯವಾಣಿ ಸ್ಥಾಪಿಸಲಾಗುತ್ತಿದೆ. ರೈತರು ದೂರು ಸಲ್ಲಿಸಿದ 24 ಗಂಟೆಯಲ್ಲಿ ಅಧಿಕಾರಿಗಳ ತಂಡ ಹೊಲಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಲಿದೆ ಎಂದರು.
ವರದಿ: ನಾಗರಾಜ್ ಗೊಬ್ಬುರ್

ಭ್ರಷ್ಟರ ಬೇಟೆ

Recent Posts

ಭ್ರೂಣಲಿಂಗ ಪತ್ತೆ–ಅಕ್ರಮ ಸ್ಕ್ಯಾನಿಂಗ್ ದಂಧೆ ಭಂಡಾಫೋಡ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಬಂಧನ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…

14 hours ago

₹15 ಲಕ್ಷ ಲಂಚ ಸ್ವೀಕರಿಸುವ ವೇಳೆ ಕೆಎಎಸ್ ಅಧಿಕಾರಿ ಬಲೆಗೆ; ಚಾಲಕನೊಂದಿಗೆ ಬಂಧನ

ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…

14 hours ago

ಪತ್ನಿಯ ದ್ರೋಹ ಗೊತ್ತಿದ್ದರೂ ಮಕ್ಕಳಿಗಾಗಿ ಸಹನೆ; ವಿಚ್ಛೇದನವೇ? ಹೊಸ ಬದುಕೇ? ಪತಿಯ ಪ್ರಶ್ನೆ ವೈರಲ್

ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…

16 hours ago

31 ವರ್ಷ ಜೈಲು ಜೀವನದ ನಂತರ ಹೊಸ ಹಾದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ದೋಷಿ ಪೆರಾರಿವಾಲನ್ ಇದೀಗ ವಕೀಲ

ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…

16 hours ago

ಪತಿಯ ಅನೈತಿಕ ಸಂಬಂಧ, ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ; ಬಿಜೆಪಿ ಮುಖಂಡ ಬಂಧನ

ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…

17 hours ago

ಮದುವೆ ಹೆಸರಿನಲ್ಲಿ ₹10 ಕೋಟಿ ವಂಚನೆ ಆರೋಪ: ಬಿಗ್‌ಬಾಸ್ ಖ್ಯಾತಿಯ ಆಶು ರೆಡ್ಡಿ ವಿರುದ್ಧ ಪ್ರಕರಣ

ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್‌ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…

2 days ago