Latest

ವಿಚಿತ್ರ ರೂಪದ ಮಗು ಜನನ.!: ವೈದ್ಯ ಲೋಕಕ್ಕೆ ಸವಾಲಾದ ಪ್ರಕರಣ.!

ನಂಜನಗೂಡು: ವೈದ್ಯ ಲೋಕವೇ ಬೆರಗಾಗುವಂತಹ ವಿಚಿತ್ರ ರೂಪ ಹೊಂದಿದ ಅಪರೂಪದ ಮಗುವೊಂದು ನಂಜನಗೂಡಿನ ಹುರ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಜನನವಾಗಿದೆ
ಹುಟ್ಟಿದ ಮಗು ಆರೋಗ್ಯ ಇಲಾಖೆಯನ್ನು ಬೆಚ್ಚಿ ಬೀಳಿಸಿದೆ.ವಿಚಿತ್ರವಾದ ಕಣ್ಣು ಮತ್ತು ತುಟಿ, ಮೈಯೆಲ್ಲಾ ಇದ್ದಲಿನಂತೆ ಕಪ್ಪು ಬಣ್ಣ.ನೋಡುಗರನ್ನ ಬೆಚ್ಚಿಬೀಳುವಂತಹ ವಿಚಿತ್ರ ಮಗು ಹುಟ್ಟುವ ಮೂಲಕ ಆರೋಗ್ಯ ಇಲಾಖೆಯನ್ನ ಹುಬ್ಬೇರುವಂತೆ ಮಾಡಿದೆ.ಹುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಸೇರಿರುವ ಗ್ರಾಮ ಒಂದರ ದಂಪತಿಗೆ ಇಂತಹ ರೂಪ ಹೊಂದಿರುವ ಮಗು ಹುಟ್ಟಿದೆ.
ಮಗುವಿನ ಆಕಾರ ಮತ್ತು ರೂಪಕ್ಕೆ ಗ್ರಾಮಸ್ಥರು ಮತ್ತು ದಂಪತಿ ಕುಟುಂಬಸ್ಥರು ಶಾಕ್ ಆಗಿದ್ದಾರೆ.
ಕೆಲವೇ ಗಂಟೆಗಳ ಹಿಂದೆ ಹುಟ್ಟಿದ ಮಗುವನ್ನು ಉಳಿಸಿಕೊಳ್ಳಲು ಹುರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.
ವಿಚಿತ್ರ ರೂಪದ ಮಗುವನ್ನ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಏಳು ದಿನಗಳ ಕಾಲ ತುರ್ತು ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.ಕಳೆದ ವರ್ಷವಷ್ಟೇ ಇದೇ ದಂಪತಿ ಇಂತದ್ದೇ ರೂಪ ಹೊಂದಿದ ಮಗುವಿಗೆ ಜನ್ಮ ನೀಡಿದ್ದರು ಎಂದು ತಿಳಿದು ಬಂದಿದ್ದು ನಾಲ್ಕೈದು ದಿನಗಳ ನಂತರ ಸಾವನ್ನಪ್ಪಿತ್ತು ಎನ್ನಲಾಗಿದೆ
ಮತ್ತೆ ಈ ಬಾರಿಯೂ ಕೂಡ ಇದೇ ರೀತಿ ಇಡೀ ಕುಟುಂಬವನ್ನು ಬೆಚ್ಚಿ ಬೀಳಿಸುವಂತಹ ವಿಚಿತ್ರ ಮಗು ಈ ದಂಪತಿಗೆ ಹುಟ್ಟಿದೆ.
ಈ ಹಿಂದೆ ನಡೆದ ಪ್ರಕರಣದ ನಂತರ ಆರೋಗ್ಯ ಇಲಾಖೆ ನೀಡಿದ್ದ ಸಲಹೆ ಸೂಚನೆಗಳನ್ನ ದಂಪತಿ ಪಾಲಿಸಿಲ್ಲ ಎಂದು ಹೇಳಲಾಗಿದ್ದು ಮಗುವನ್ನ ಉಳಿಸಿಕೊಳ್ಳಲು ಚೆಲುವಂಬಾ ಆಸ್ಪತ್ರೆಯ ತುರ್ತು ಘಟಕದಲ್ಲಿರಿಸಿ ಹರಸಾಹಸ ನಡೆಸಲಾಗುತ್ತಿದೆ
ಇಂತಹ ವಿಸ್ಮಯವಾದ ಮಗು ಹುಟ್ಟುವ ಮೂಲಕ ವೈದ್ಯಲೋಕಕ್ಕೆ ಸವಾಲು ಎನ್ನುವಂತಾಗಿದೆ. ವರದಿ: ಮೋಹನ್

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

43 minutes ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

45 minutes ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

4 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

5 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

6 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

6 hours ago