ನಂಜನಗೂಡು: ವೈದ್ಯ ಲೋಕವೇ ಬೆರಗಾಗುವಂತಹ ವಿಚಿತ್ರ ರೂಪ ಹೊಂದಿದ ಅಪರೂಪದ ಮಗುವೊಂದು ನಂಜನಗೂಡಿನ ಹುರ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಜನನವಾಗಿದೆ
ಹುಟ್ಟಿದ ಮಗು ಆರೋಗ್ಯ ಇಲಾಖೆಯನ್ನು ಬೆಚ್ಚಿ ಬೀಳಿಸಿದೆ.ವಿಚಿತ್ರವಾದ ಕಣ್ಣು ಮತ್ತು ತುಟಿ, ಮೈಯೆಲ್ಲಾ ಇದ್ದಲಿನಂತೆ ಕಪ್ಪು ಬಣ್ಣ.ನೋಡುಗರನ್ನ ಬೆಚ್ಚಿಬೀಳುವಂತಹ ವಿಚಿತ್ರ ಮಗು ಹುಟ್ಟುವ ಮೂಲಕ ಆರೋಗ್ಯ ಇಲಾಖೆಯನ್ನ ಹುಬ್ಬೇರುವಂತೆ ಮಾಡಿದೆ.ಹುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಸೇರಿರುವ ಗ್ರಾಮ ಒಂದರ ದಂಪತಿಗೆ ಇಂತಹ ರೂಪ ಹೊಂದಿರುವ ಮಗು ಹುಟ್ಟಿದೆ.
ಮಗುವಿನ ಆಕಾರ ಮತ್ತು ರೂಪಕ್ಕೆ ಗ್ರಾಮಸ್ಥರು ಮತ್ತು ದಂಪತಿ ಕುಟುಂಬಸ್ಥರು ಶಾಕ್ ಆಗಿದ್ದಾರೆ.
ಕೆಲವೇ ಗಂಟೆಗಳ ಹಿಂದೆ ಹುಟ್ಟಿದ ಮಗುವನ್ನು ಉಳಿಸಿಕೊಳ್ಳಲು ಹುರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.
ವಿಚಿತ್ರ ರೂಪದ ಮಗುವನ್ನ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಏಳು ದಿನಗಳ ಕಾಲ ತುರ್ತು ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.ಕಳೆದ ವರ್ಷವಷ್ಟೇ ಇದೇ ದಂಪತಿ ಇಂತದ್ದೇ ರೂಪ ಹೊಂದಿದ ಮಗುವಿಗೆ ಜನ್ಮ ನೀಡಿದ್ದರು ಎಂದು ತಿಳಿದು ಬಂದಿದ್ದು ನಾಲ್ಕೈದು ದಿನಗಳ ನಂತರ ಸಾವನ್ನಪ್ಪಿತ್ತು ಎನ್ನಲಾಗಿದೆ
ಮತ್ತೆ ಈ ಬಾರಿಯೂ ಕೂಡ ಇದೇ ರೀತಿ ಇಡೀ ಕುಟುಂಬವನ್ನು ಬೆಚ್ಚಿ ಬೀಳಿಸುವಂತಹ ವಿಚಿತ್ರ ಮಗು ಈ ದಂಪತಿಗೆ ಹುಟ್ಟಿದೆ.
ಈ ಹಿಂದೆ ನಡೆದ ಪ್ರಕರಣದ ನಂತರ ಆರೋಗ್ಯ ಇಲಾಖೆ ನೀಡಿದ್ದ ಸಲಹೆ ಸೂಚನೆಗಳನ್ನ ದಂಪತಿ ಪಾಲಿಸಿಲ್ಲ ಎಂದು ಹೇಳಲಾಗಿದ್ದು ಮಗುವನ್ನ ಉಳಿಸಿಕೊಳ್ಳಲು ಚೆಲುವಂಬಾ ಆಸ್ಪತ್ರೆಯ ತುರ್ತು ಘಟಕದಲ್ಲಿರಿಸಿ ಹರಸಾಹಸ ನಡೆಸಲಾಗುತ್ತಿದೆ
ಇಂತಹ ವಿಸ್ಮಯವಾದ ಮಗು ಹುಟ್ಟುವ ಮೂಲಕ ವೈದ್ಯಲೋಕಕ್ಕೆ ಸವಾಲು ಎನ್ನುವಂತಾಗಿದೆ. ವರದಿ: ಮೋಹನ್
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…