ಕುಂದಗೋಳ ; ರಾಜ್ಯದಲ್ಲಿ ಅತಿವೃಷ್ಟಿ ಹೆಚ್ಚಾಗಿದ್ದು ರೈತಾಪಿ ಜನರ ಬೆಳೆ ನಾಶ ಆಗಿ ಪರಿಹಾರಕ್ಕಾಗಿ ಅಂಗಲಾಚುತ್ತಿದ್ದಾರೆ. ಆದರೆ ಬಿಜೆಪಿ ಸರಕಾರ ಮಾತ್ರ ತನ್ನ ವೈಫಲ್ಯ ಮುಚ್ಚಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸದಿದೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.
ಅವರು ಕುಂದಗೋಳ ಪಟ್ಟಣದ ಗಾಳೆಮರೆಯಮ್ಮ ದೇವಸ್ಥಾನದಿಂದ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಕೈಗೂಂಡ ಬೃಹತ್ ಪ್ರತಿಭಟನಾ ಮೆರವಣಿಗೆ ನೇತೃತ್ವವಹಿಸಿ ಮಾತನಾಡಿ ನಾಳೆ ಸಿದ್ದರಾಮಯ್ಯ ರಾಜ್ಯದಿಂದ ರಾಷ್ಟ್ರ ಮಟ್ಟಕ್ಕೆ ಕಾಲಿಡುತ್ತಿರುವ ನಾಯಕ ಅವರ ಬೆಳವಣಿಗೆ ಕಂಡು ಮುಂದೆ ಎಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬರುತ್ತೆ ಎಂಬ ಭಯದಲ್ಲಿ ಇಂತಹ ಅಹಿತಕರ ಘಟನೆ ನಡೆಸುತ್ತಿದ್ದಾರೆ ಎಂದರು
ಗಾಳಿಮರೇಮ್ಮದೇವಿ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಹಶೀಲ್ದಾರ್ ಕಛೇರಿ ತಲುಪಿ ತಹಶೀಲ್ದಾರ್ ಆಶೋಕ ಶಿಗ್ಗಾಂವಿ ಅವರಿಗೆ ಶಾಸಕರ ನೇತೃತ್ವದಲ್ಲಿ ಮೊಟ್ಟೆ ಎಸೆದವರ ವಿರುದ್ದ ಕ್ರಮಕ್ಕೆ ಮನವಿ ಸಲ್ಲಿಸಲಾಯಿತು
ಮನವಿ ಪತ್ರದಲ್ಲಿ ; ಮಾನ್ಯ ಸಿದ್ದರಾಮಯ್ಯ ವಿರುದ್ಧ ಪಕ್ಷದ ನಾಯಕರು ಅವರದೇ ಆದಂತಹ ಗೌರವ ಇದೆ. ಅವರಿಗೆ ಸೂಕ್ತವಾದ ಭದ್ರತೆ ಕಲ್ಪಿಸಿಕೂಡಬೇಕು. ಇತ್ತೀಚೆಗೆ ದಾವಣಗೆರೆಯಲ್ಲಿ ಸಿದ್ದಾರಾಮೋತ್ಸವ ಕಾರ್ಯಕ್ರಮಕ್ಕೆ ಸ್ವಯಂ ಪ್ರೇರಣೆಯಿಂದ ಲಕ್ಷಾಂತರ ಜನಸಾಗರ ಹರಿದು ಬಂದು ಕಾರ್ಯಕ್ರಮದಲ್ಲಿ ಭಾಗ ವಹಿಸಿದ್ದರು. ಬಿಜೆಪಿ ಸರಕಾರ ಸಹಿಸಲಾರದೆ ನೀಚ ಕೃತ್ಯಕ್ಕೆ ಕೈ ಹಾಕಿದ್ದಾರೆ.
ಕೊಡಲೇ ಮೂಟ್ಟೆ ಎಸೆದ ಆರೋಪಿನ ಬಂದಿಸಬೇಕು ಇಂತಹ ಅಹಿತಕರ ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿಬೇಕು ಎಂದು ಬಿಜೆಪಿ ಸರಕಾರ ವಿರುದ್ದ ಹರಿಹಾಯ್ದರು.
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…
ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…
ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…
ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…
ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್ನ ರಾಜ್ಕೋಟ್ ಮೂಲದ ರಾಜೇಶ್ ಸಕ್ರಿಯಾ…