ಕುಂದಗೋಳ ; ರಾಜ್ಯದಲ್ಲಿ ಅತಿವೃಷ್ಟಿ ಹೆಚ್ಚಾಗಿದ್ದು ರೈತಾಪಿ ಜನರ ಬೆಳೆ ನಾಶ ಆಗಿ ಪರಿಹಾರಕ್ಕಾಗಿ ಅಂಗಲಾಚುತ್ತಿದ್ದಾರೆ. ಆದರೆ ಬಿಜೆಪಿ ಸರಕಾರ ಮಾತ್ರ ತನ್ನ ವೈಫಲ್ಯ ಮುಚ್ಚಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸದಿದೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.
ಅವರು ಕುಂದಗೋಳ ಪಟ್ಟಣದ ಗಾಳೆಮರೆಯಮ್ಮ ದೇವಸ್ಥಾನದಿಂದ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಕೈಗೂಂಡ ಬೃಹತ್ ಪ್ರತಿಭಟನಾ ಮೆರವಣಿಗೆ ನೇತೃತ್ವವಹಿಸಿ ಮಾತನಾಡಿ ನಾಳೆ ಸಿದ್ದರಾಮಯ್ಯ ರಾಜ್ಯದಿಂದ ರಾಷ್ಟ್ರ ಮಟ್ಟಕ್ಕೆ ಕಾಲಿಡುತ್ತಿರುವ ನಾಯಕ ಅವರ ಬೆಳವಣಿಗೆ ಕಂಡು ಮುಂದೆ ಎಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬರುತ್ತೆ ಎಂಬ ಭಯದಲ್ಲಿ ಇಂತಹ ಅಹಿತಕರ ಘಟನೆ ನಡೆಸುತ್ತಿದ್ದಾರೆ ಎಂದರು
ಗಾಳಿಮರೇಮ್ಮದೇವಿ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಹಶೀಲ್ದಾರ್ ಕಛೇರಿ ತಲುಪಿ ತಹಶೀಲ್ದಾರ್ ಆಶೋಕ ಶಿಗ್ಗಾಂವಿ ಅವರಿಗೆ ಶಾಸಕರ ನೇತೃತ್ವದಲ್ಲಿ ಮೊಟ್ಟೆ ಎಸೆದವರ ವಿರುದ್ದ ಕ್ರಮಕ್ಕೆ ಮನವಿ ಸಲ್ಲಿಸಲಾಯಿತು
ಮನವಿ ಪತ್ರದಲ್ಲಿ ; ಮಾನ್ಯ ಸಿದ್ದರಾಮಯ್ಯ ವಿರುದ್ಧ ಪಕ್ಷದ ನಾಯಕರು ಅವರದೇ ಆದಂತಹ ಗೌರವ ಇದೆ. ಅವರಿಗೆ ಸೂಕ್ತವಾದ ಭದ್ರತೆ ಕಲ್ಪಿಸಿಕೂಡಬೇಕು. ಇತ್ತೀಚೆಗೆ ದಾವಣಗೆರೆಯಲ್ಲಿ ಸಿದ್ದಾರಾಮೋತ್ಸವ ಕಾರ್ಯಕ್ರಮಕ್ಕೆ ಸ್ವಯಂ ಪ್ರೇರಣೆಯಿಂದ ಲಕ್ಷಾಂತರ ಜನಸಾಗರ ಹರಿದು ಬಂದು ಕಾರ್ಯಕ್ರಮದಲ್ಲಿ ಭಾಗ ವಹಿಸಿದ್ದರು. ಬಿಜೆಪಿ ಸರಕಾರ ಸಹಿಸಲಾರದೆ ನೀಚ ಕೃತ್ಯಕ್ಕೆ ಕೈ ಹಾಕಿದ್ದಾರೆ.
ಕೊಡಲೇ ಮೂಟ್ಟೆ ಎಸೆದ ಆರೋಪಿನ ಬಂದಿಸಬೇಕು ಇಂತಹ ಅಹಿತಕರ ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿಬೇಕು ಎಂದು ಬಿಜೆಪಿ ಸರಕಾರ ವಿರುದ್ದ ಹರಿಹಾಯ್ದರು.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…