ಕುಂದಗೋಳ ; ರಾಜ್ಯದಲ್ಲಿ ಅತಿವೃಷ್ಟಿ ಹೆಚ್ಚಾಗಿದ್ದು ರೈತಾಪಿ ಜನರ ಬೆಳೆ ನಾಶ ಆಗಿ ಪರಿಹಾರಕ್ಕಾಗಿ ಅಂಗಲಾಚುತ್ತಿದ್ದಾರೆ. ಆದರೆ ಬಿಜೆಪಿ ಸರಕಾರ ಮಾತ್ರ ತನ್ನ ವೈಫಲ್ಯ ಮುಚ್ಚಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸದಿದೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.
ಅವರು ಕುಂದಗೋಳ ಪಟ್ಟಣದ ಗಾಳೆಮರೆಯಮ್ಮ ದೇವಸ್ಥಾನದಿಂದ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಕೈಗೂಂಡ ಬೃಹತ್ ಪ್ರತಿಭಟನಾ ಮೆರವಣಿಗೆ ನೇತೃತ್ವವಹಿಸಿ ಮಾತನಾಡಿ ನಾಳೆ ಸಿದ್ದರಾಮಯ್ಯ ರಾಜ್ಯದಿಂದ ರಾಷ್ಟ್ರ ಮಟ್ಟಕ್ಕೆ ಕಾಲಿಡುತ್ತಿರುವ ನಾಯಕ ಅವರ ಬೆಳವಣಿಗೆ ಕಂಡು ಮುಂದೆ ಎಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬರುತ್ತೆ ಎಂಬ ಭಯದಲ್ಲಿ ಇಂತಹ ಅಹಿತಕರ ಘಟನೆ ನಡೆಸುತ್ತಿದ್ದಾರೆ ಎಂದರು
ಗಾಳಿಮರೇಮ್ಮದೇವಿ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಹಶೀಲ್ದಾರ್ ಕಛೇರಿ ತಲುಪಿ ತಹಶೀಲ್ದಾರ್ ಆಶೋಕ ಶಿಗ್ಗಾಂವಿ ಅವರಿಗೆ ಶಾಸಕರ ನೇತೃತ್ವದಲ್ಲಿ ಮೊಟ್ಟೆ ಎಸೆದವರ ವಿರುದ್ದ ಕ್ರಮಕ್ಕೆ ಮನವಿ ಸಲ್ಲಿಸಲಾಯಿತು
ಮನವಿ ಪತ್ರದಲ್ಲಿ ; ಮಾನ್ಯ ಸಿದ್ದರಾಮಯ್ಯ ವಿರುದ್ಧ ಪಕ್ಷದ ನಾಯಕರು ಅವರದೇ ಆದಂತಹ ಗೌರವ ಇದೆ. ಅವರಿಗೆ ಸೂಕ್ತವಾದ ಭದ್ರತೆ ಕಲ್ಪಿಸಿಕೂಡಬೇಕು. ಇತ್ತೀಚೆಗೆ ದಾವಣಗೆರೆಯಲ್ಲಿ ಸಿದ್ದಾರಾಮೋತ್ಸವ ಕಾರ್ಯಕ್ರಮಕ್ಕೆ ಸ್ವಯಂ ಪ್ರೇರಣೆಯಿಂದ ಲಕ್ಷಾಂತರ ಜನಸಾಗರ ಹರಿದು ಬಂದು ಕಾರ್ಯಕ್ರಮದಲ್ಲಿ ಭಾಗ ವಹಿಸಿದ್ದರು. ಬಿಜೆಪಿ ಸರಕಾರ ಸಹಿಸಲಾರದೆ ನೀಚ ಕೃತ್ಯಕ್ಕೆ ಕೈ ಹಾಕಿದ್ದಾರೆ.
ಕೊಡಲೇ ಮೂಟ್ಟೆ ಎಸೆದ ಆರೋಪಿನ ಬಂದಿಸಬೇಕು ಇಂತಹ ಅಹಿತಕರ ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿಬೇಕು ಎಂದು ಬಿಜೆಪಿ ಸರಕಾರ ವಿರುದ್ದ ಹರಿಹಾಯ್ದರು.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…