ಬಜೆಟ್ನಲ್ಲಿ ರೈತರು, ಮಹಿಳೆಯರು ಮತ್ತು ಯುವಕರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಆದಾಯ ತೆರಿಗೆ ಭಾರ ಕಡಿಮೆ ಮಾಡಿದೆ ಮೋದಿ ಸರ್ಕಾರ. ಹಳೆಯ ತೆರಿಗೆ ಪದ್ಧತಿ ಬಳಸುವವರಿಗೆ ಯಾವುದೇ ಬದಲಾವಣೆ ಇಲ್ಲ. ಹೊಸ ತೆರಿಗೆ ಪದ್ಧತಿ ಬಳಸುವವರಿಗೆ ಹೊಸ ಟ್ಯಾಕ್ಸ್ ಸ್ಲ್ಯಾಬ್ ಘೋಷಿಸಿಲಾಗಿದೆ.
* 0-3 ಲಕ್ಷ : ತೆರಿಗೆ ಇಲ್ಲ
* 3-7 ಲಕ್ಷ: 05 % ತೆರಿಗೆ
* 7-10 ಲಕ್ಷ : 10 % ತೆರಿಗೆ
* 10 -12 ಲಕ್ಷ : 15% ತೆರಿಗೆ
* 12 – 15 ಲಕ್ಷ : 20 % ತೆರಿಗೆ
* 15 ಲಕ್ಷಕ್ಕಿಂತ ಹೆಚ್ಚು : 30 % ತೆರಿಗೆ
ಹೆಚ್ಚು ಮಂದಿ ಹೊಸ ತೆರಿಗೆ ಪದ್ಧತಿಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಅಂತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ವಿವಿಧ ಪಾವತಿಗಳಿಗೆ ಐದು ಪ್ರತಿಶತ ಟಿಡಿಎಸ್ ಬದಲಿಗೆ ಎರಡು ಪ್ರತಿಶತ ಟಿಡಿಎಸ್ ಅನ್ನು ಒದಗಿಸಲಾಗುತ್ತದೆ. ಮ್ಯೂಚುವಲ್ ಫಂಡ್ ಅಥವಾ ಯುಟಿಐ ಮರುಖರೀದಿಯಲ್ಲಿ ಟಿಡಿಎಸ್ ಅನ್ನು ಶೇಕಡಾ 20ರಷ್ಟು ಹಿಂಪಡೆಯಲಾಗಿದೆ. ಇ-ಕಾಮರ್ಸ್ ಆಪರೇಟರ್ಗಳಿಗೆ ಟಿಡಿಎಸ್ ಅನ್ನು ಶೇಕಡಾ 1 ರಿಂದ 0.1 ಕ್ಕೆ ಇಳಿಸಲಾಗಿದೆ. ಅಲ್ಲದೆ, ಟಿಡಿಎಸ್ ತುಂಬುವಲ್ಲಿ ವಿಳಂಬವನ್ನು ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…
ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…