Latest

ಅಶ್ಲೀಲ ವೀಡಿಯೋ ಕಳುಹಿಸಿದ್ದ ಬಿಜೆಪಿ ನಾಯಕನಿಗೆ, ಮಹಿಳಾ ಕಾರ್ಯಕರ್ತರಿಂದ ಚಪ್ಪಲಿ ಏಟು.!

ಲಖನೌ, ಜುಲೈ 15 – ಉತ್ತರ ಪ್ರದೇಶದ ಬಿಜೆಪಿ ಕಾರ್ಯಕರ್ತನೊಬ್ಬ ಮಹಿಳಾ ಕಾರ್ಯಕರ್ತರಿಗೆ ಅಶ್ಲೀಲ ವೀಡಿಯೋಗಳನ್ನು ಕಳುಹಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಸತತ ಕಿರುಕುಳದಿಂದ ಸಿಟ್ಟುಗೊಂಡ ಮಹಿಳೆಯರು ಆತನಿಗೆ ಚಪ್ಪಲಿಯಿಂದ ಹೊಡೆದು ಬುದ್ಧಿ ಕಲಿಸಿದ್ದ ವೈರಲ್ ಆಗಿದೆ.

ಆಗ್ರಾ ಜಿಲ್ಲೆಯ ಖಂಡೌಲಿ ಪ್ರದೇಶದ ನಿವಾಸಿಯಾಗಿರುವ ಆನಂದ್ ಶರ್ಮಾ ಎಂಬಾತ ಮಹಿಳಾ ಕಾರ್ಯಕರ್ತರಿಗೆ ವಾಟ್ಸಾಪ್ ಮೂಲಕ ಅಶ್ಲೀಲ ಸಂದೇಶಗಳು ಹಾಗೂ ವೀಡಿಯೋಗಳನ್ನು ಕಳುಹಿಸುತ್ತಿದ್ದನು. ಇದರಿಂದ ತೀವ್ರ ಮಾನಸಿಕ ಬಳಲಿಗೆ ಒಳಗಾದ ಮಹಿಳೆಯರು ಕೊನೆಗೆ ತಾವೇ ನ್ಯಾಯ ಕೈಗೆತ್ತಿಕೊಂಡಿದ್ದಾರೆ.

ಹೆಸರು ಬಹಿರಂಗಗೊಳಿಸದಿರುವ ಮಹಿಳಾ ಕಾರ್ಯಕರ್ತರೊಬ್ಬರು ಆತ ದಿನದಿಂದ ದಿನಕ್ಕೆ ಅಶ್ಲೀಲ ಕಂಟೆಂಟ್ ಕಳುಹಿಸುತ್ತಿದ್ದನೆಂದು ಹೇಳಿದ್ದಾರೆ. ಕೆಲ ಮಹಿಳೆಯರು, ಆನಂದ್‌ ತನ್ನ ಮುಖ ಮುಚ್ಚಿಕೊಂಡು ಅಶ್ಲೀಲ ವಿಡಿಯೋಗಳನ್ನು ತಯಾರಿಸಿ ಕಳುಹಿಸುತ್ತಿದ್ದನೆಂಬ ಆರೋಪವೂ ಮಾಡಿದ್ದಾರೆ. ಇದು ಪಕ್ಷದ ಮೌಲ್ಯಗಳಿಗೆ ಧಕ್ಕೆಯಾದಂತೆ ಆಗಿದ್ದು,  ಕಾರ್ಯಕರ್ತರಲ್ಲಿ ಆಕ್ರೋಶ ಹುಟ್ಟಿಸಿದೆ.

ಘಟನೆಯ ದಿನ ಮಹಿಳೆಯರು ಆನಂದ್‌ನ ಮನೆಗೆ ನುಗ್ಗಿ, ಆತನನ್ನು ಹೊರಗೆಳೆದು ಮಾರುಕಟ್ಟೆಯ ಮಧ್ಯೆ ಚಪ್ಪಲಿಯಿಂದ ಥಳಿಸಿದರು. ಈ ವೇಳೆ ಆನಂದ್ ಪತ್ನಿ ಹಾಗೂ ಸಂಬಂಧಿಕರು ಮಧ್ಯಪ್ರವೇಶಿಸಿ ಮಹಿಳೆಯರಲ್ಲಿ ಕ್ಷಮೆಯಾಚಿಸಿದರು. ಕೊನೆಗೆ ಆನಂದ್ ಶರ್ಮಾ ಆತಂಕದಿಂದ ನಿಶ್ಶಬ್ದನಾಗಿ ಅಲ್ಲಿಂದ ಹೊರಟನು.

ವೈರಲ್ ಆಗಿರುವ ಈ ವಿಡಿಯೋವನ್ನು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಉಪ್ಮಾ ಗುಪ್ತಾ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡು, “ಮಹಿಳಾ ಕಾರ್ಯಕರ್ತರ ಕಿರುಕುಳದ ವಿರುದ್ಧ ತಕ್ಕ ಪ್ರತಿಕ್ರಿಯೆ ನೀಡಲಾಗಿದೆ” ಎಂದು ಹೇಳಿಕೆ ನೀಡಿದ್ದಾರೆ.

nazeer ahamad

Recent Posts

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

4 hours ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

17 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

18 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago