Latest

ಅಶ್ಲೀಲ ವೀಡಿಯೋ ಕಳುಹಿಸಿದ್ದ ಬಿಜೆಪಿ ನಾಯಕನಿಗೆ, ಮಹಿಳಾ ಕಾರ್ಯಕರ್ತರಿಂದ ಚಪ್ಪಲಿ ಏಟು.!

ಲಖನೌ, ಜುಲೈ 15 – ಉತ್ತರ ಪ್ರದೇಶದ ಬಿಜೆಪಿ ಕಾರ್ಯಕರ್ತನೊಬ್ಬ ಮಹಿಳಾ ಕಾರ್ಯಕರ್ತರಿಗೆ ಅಶ್ಲೀಲ ವೀಡಿಯೋಗಳನ್ನು ಕಳುಹಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಸತತ ಕಿರುಕುಳದಿಂದ ಸಿಟ್ಟುಗೊಂಡ ಮಹಿಳೆಯರು ಆತನಿಗೆ ಚಪ್ಪಲಿಯಿಂದ ಹೊಡೆದು ಬುದ್ಧಿ ಕಲಿಸಿದ್ದ ವೈರಲ್ ಆಗಿದೆ.

ಆಗ್ರಾ ಜಿಲ್ಲೆಯ ಖಂಡೌಲಿ ಪ್ರದೇಶದ ನಿವಾಸಿಯಾಗಿರುವ ಆನಂದ್ ಶರ್ಮಾ ಎಂಬಾತ ಮಹಿಳಾ ಕಾರ್ಯಕರ್ತರಿಗೆ ವಾಟ್ಸಾಪ್ ಮೂಲಕ ಅಶ್ಲೀಲ ಸಂದೇಶಗಳು ಹಾಗೂ ವೀಡಿಯೋಗಳನ್ನು ಕಳುಹಿಸುತ್ತಿದ್ದನು. ಇದರಿಂದ ತೀವ್ರ ಮಾನಸಿಕ ಬಳಲಿಗೆ ಒಳಗಾದ ಮಹಿಳೆಯರು ಕೊನೆಗೆ ತಾವೇ ನ್ಯಾಯ ಕೈಗೆತ್ತಿಕೊಂಡಿದ್ದಾರೆ.

ಹೆಸರು ಬಹಿರಂಗಗೊಳಿಸದಿರುವ ಮಹಿಳಾ ಕಾರ್ಯಕರ್ತರೊಬ್ಬರು ಆತ ದಿನದಿಂದ ದಿನಕ್ಕೆ ಅಶ್ಲೀಲ ಕಂಟೆಂಟ್ ಕಳುಹಿಸುತ್ತಿದ್ದನೆಂದು ಹೇಳಿದ್ದಾರೆ. ಕೆಲ ಮಹಿಳೆಯರು, ಆನಂದ್‌ ತನ್ನ ಮುಖ ಮುಚ್ಚಿಕೊಂಡು ಅಶ್ಲೀಲ ವಿಡಿಯೋಗಳನ್ನು ತಯಾರಿಸಿ ಕಳುಹಿಸುತ್ತಿದ್ದನೆಂಬ ಆರೋಪವೂ ಮಾಡಿದ್ದಾರೆ. ಇದು ಪಕ್ಷದ ಮೌಲ್ಯಗಳಿಗೆ ಧಕ್ಕೆಯಾದಂತೆ ಆಗಿದ್ದು,  ಕಾರ್ಯಕರ್ತರಲ್ಲಿ ಆಕ್ರೋಶ ಹುಟ್ಟಿಸಿದೆ.

ಘಟನೆಯ ದಿನ ಮಹಿಳೆಯರು ಆನಂದ್‌ನ ಮನೆಗೆ ನುಗ್ಗಿ, ಆತನನ್ನು ಹೊರಗೆಳೆದು ಮಾರುಕಟ್ಟೆಯ ಮಧ್ಯೆ ಚಪ್ಪಲಿಯಿಂದ ಥಳಿಸಿದರು. ಈ ವೇಳೆ ಆನಂದ್ ಪತ್ನಿ ಹಾಗೂ ಸಂಬಂಧಿಕರು ಮಧ್ಯಪ್ರವೇಶಿಸಿ ಮಹಿಳೆಯರಲ್ಲಿ ಕ್ಷಮೆಯಾಚಿಸಿದರು. ಕೊನೆಗೆ ಆನಂದ್ ಶರ್ಮಾ ಆತಂಕದಿಂದ ನಿಶ್ಶಬ್ದನಾಗಿ ಅಲ್ಲಿಂದ ಹೊರಟನು.

ವೈರಲ್ ಆಗಿರುವ ಈ ವಿಡಿಯೋವನ್ನು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಉಪ್ಮಾ ಗುಪ್ತಾ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡು, “ಮಹಿಳಾ ಕಾರ್ಯಕರ್ತರ ಕಿರುಕುಳದ ವಿರುದ್ಧ ತಕ್ಕ ಪ್ರತಿಕ್ರಿಯೆ ನೀಡಲಾಗಿದೆ” ಎಂದು ಹೇಳಿಕೆ ನೀಡಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

11 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

11 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

11 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

11 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago