Categories: CrimeLatest

20ಕ್ಕೂ ಹೆಚ್ಚು ಮಹಿಳೆಯರ ಖಾಸಗಿ ವಿಡಿಯೋ ಇಟ್ಟು ಬ್ಲ್ಯಾಕ್‌ಮೇಲ್; ಮಕ್ಕಳ ಆಯೋಗದ ಸದಸ್ಯನ ಅಸಲಿ ಮುಖ ಬಯಲು!

ಬೆಂಗಳೂರು ನಗರದಲ್ಲಿ ಮಹಿಳೆಯರ ಖಾಸಗಿ ವಿಡಿಯೋಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಆರ್‌ಆರ್ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಚಂದ್ರೇಗೌಡ ಎಂದು ಗುರುತಿಸಲಾಗಿದ್ದು, ಆತ ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯನಾಗಿದ್ದನು.

ಆರೋಪಿಯು ತಾನು ಪೊಲೀಸ್, ವರದಿಗಾರ ಹಾಗೂ ವಕೀಲ ಎಂದು ಸುಳ್ಳು ಹೇಳಿ ಹಲವಾರು ಮಹಿಳೆಯರನ್ನು ಮೋಸಗೊಳಿಸುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ವಿಶೇಷವಾಗಿ ಗಂಡನಿಂದ ದೂರವಾಗಿದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಪರಿಚಯ ಬೆಳೆಸಿ, ತಾನು ವಿಚ್ಛೇದಿತನಾಗಿದ್ದು ಮದುವೆಯಾಗುವುದಾಗಿ ನಂಬಿಸುತ್ತಿದ್ದನು.

ಈ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ಮಹಿಳೆಯರೊಂದಿಗೆ ಆಪ್ತ ಸಂಬಂಧ ಬೆಳೆಸಿ, ಅದನ್ನು ಗುಪ್ತವಾಗಿ ವಿಡಿಯೋ ಮಾಡಿ ನಂತರ ಅದನ್ನೇ ಆಧಾರವನ್ನಾಗಿ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನು. ಬೆದರಿಕೆ ಒಡ್ಡಿ ಸುಮಾರು ₹5 ಲಕ್ಷ ಹಣವನ್ನೂ ವಸೂಲಿ ಮಾಡಿದ ಆರೋಪವೂ ಕೇಳಿಬಂದಿದೆ.

ದೂರು ನೀಡಿದ ಮಹಿಳೆಯ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಚಂದ್ರೇಗೌಡನ ಮೊಬೈಲ್ ಪರಿಶೀಲನೆ ವೇಳೆ ಸುಮಾರು 20ಕ್ಕೂ ಹೆಚ್ಚು ಮಹಿಳೆಯರ ಜೊತೆಗಿನ ವಿಡಿಯೋಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣವು ಮಹಿಳೆಯರ ಸುರಕ್ಷತೆ ಹಾಗೂ ವಿಶ್ವಾಸವನ್ನು ದುರುಪಯೋಗಪಡಿಸಿಕೊಳ್ಳುವ ಅಪರಾಧಗಳ ಗಂಭೀರತೆಯನ್ನು ಮತ್ತೆ ಹೊರಹಾಕಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

14 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

14 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

14 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

14 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

14 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

14 hours ago