Latest

ವಾಟ್ಸಪ್ ಪರಿಚಯದ ಹೆಸರಿನಲ್ಲಿ ಮಹಿಳೆಗೆ ಬ್ಲಾಕ್‌ಮೇಲ್: ಗದಗ್‌ನಲ್ಲಿ ಆರೋಪಿ ವೀರೇಶ್ ಬಂಧನ

ಹುಣಸೂರು: ವಾಟ್ಸಪ್‌ನಲ್ಲಿ ಪರಿಚಯಿಸಿಕೊಂಡ ಮಹಿಳೆಯ ಮಕ್ಕಳ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯೊಬ್ಬನನ್ನು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನು ವಿಜಯನಗರ ಜಿಲ್ಲೆಯ ವೀರೇಶ್ (28) ಎಂಬ ವ್ಯಕ್ತಿ. ನಿಲುವಾಗಿಲು ಗ್ರಾಮದ ಗೃಹಿಣಿಯೊಬ್ಬರೊಂದಿಗೆ ಆರು ತಿಂಗಳ ಹಿಂದೆ ವಾಟ್ಸಪ್ ಮೂಲಕ ಸಂಪರ್ಕ ಸಾಧಿಸಿದ್ದ ಆತನು, ಸ್ನೇಹಿತನೆಂದು ನಂಬಿಕೆ ಗಳಿಸಿ, ಮಹಿಳೆಯ ವೈಯಕ್ತಿಕ ಹಾಗೂ ಕುಟುಂಬದ ಮಾಹಿತಿ ಪಡೆದುಕೊಂಡಿದ್ದ. ಪತಿ ವಿಯೋಗ ಅನುಭವಿಸಿದ್ದ ಆ ಮಹಿಳೆ, ಆತನ ಸೌಮ್ಯ ಮಾತುಗಳಿಗೆ ಮಾರುಹೋಗಿ ವೈಯಕ್ತಿಕ ವಿವರಗಳನ್ನು ಹಂಚಿಕೊಂಡಿದ್ದರು.

ಅಂತರಂಗದ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡ ವೀರೇಶ್, ಮಹಿಳೆಯ ಮಗಳ ಫೋಟೋಗಳನ್ನು ವಾಟ್ಸಪ್ ಸ್ಟೇಟಸ್‌ಗಳಿಂದ ಕಲೆಹಾಕಿ, ಅವುಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿದ್ದ. ಬಳಿಕ ಈ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವುದಾಗಿ ಬೆದರಿಕೆ ಹಾಕಿ, ಸಂಬಂಧಿಕರ ಮೊಬೈಲ್ ನಂಬರ್‌ಗಳಿಗೂ ಇದನ್ನ ಕಳುಹಿಸುತ್ತೇನೆ ಎಂದು ಮಹಿಳೆಯನ್ನು ಬ್ಲಾಕ್‌ಮೇಲ್ ಮಾಡಿದ್ದ.

ಈ ಬೆದರಿಕೆಗಳಿಂದ ಮಾನಸಿಕ ತೊಂದರೆಗೆ ಒಳಗಾದ ಮಹಿಳೆ, ಕೊನೆಗೆ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಶರಣಾಗಿದ್ದರು. ಪ್ರಕರಣದ ಗಂಭೀರತೆಯನ್ನು ಮನಗಂಡ ಪೊಲೀಸರು, ಎಸ್‌ಪಿ ವಿಷ್ಣುವರ್ಧನ್ ಮತ್ತು ಅಡಿಷನಲ್ ಎಸ್‌ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಗೋಪಾಲಕೃಷ್ಣ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಮುನಿಯಪ್ಪ ಹಾಗೂ ಪಿಎಸ್ಸೈ ರಾಧಾ ಅವರ ತಲೆದಾರಿಯಲ್ಲಿ ವಿಶೇಷ ತಂಡವನ್ನು ರಚಿಸಿದರು.

ಆರೋಪಿಯ ಮೊಬೈಲ್ ಸಿಗ್ನಲ್ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಗದಗ್‌ನಲ್ಲಿ ವೀರೇಶ್ ಅನ್ನು ಪತ್ತೆಹಚ್ಚಿ ಬಂಧಿಸಿದರು. ಆರೋಪಿಯನ್ನು ನ್ಯಾಯಾಂಗ ಕಸ್ಟಡಿಗೆ ಒಪ್ಪಿಸುವ ಕ್ರಮ ಜರಗಿದ್ದು, ಮುಂದೆ ಈ ಪ್ರಕರಣದ ತನಿಖೆ ವ್ಯಾಪಕವಾಗಿ ಮುಂದುವರಿಯಲಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

10 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

17 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

17 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago