ಹುಣಸೂರು: ವಾಟ್ಸಪ್ನಲ್ಲಿ ಪರಿಚಯಿಸಿಕೊಂಡ ಮಹಿಳೆಯ ಮಕ್ಕಳ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯೊಬ್ಬನನ್ನು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನು ವಿಜಯನಗರ ಜಿಲ್ಲೆಯ ವೀರೇಶ್ (28) ಎಂಬ ವ್ಯಕ್ತಿ. ನಿಲುವಾಗಿಲು ಗ್ರಾಮದ ಗೃಹಿಣಿಯೊಬ್ಬರೊಂದಿಗೆ ಆರು ತಿಂಗಳ ಹಿಂದೆ ವಾಟ್ಸಪ್ ಮೂಲಕ ಸಂಪರ್ಕ ಸಾಧಿಸಿದ್ದ ಆತನು, ಸ್ನೇಹಿತನೆಂದು ನಂಬಿಕೆ ಗಳಿಸಿ, ಮಹಿಳೆಯ ವೈಯಕ್ತಿಕ ಹಾಗೂ ಕುಟುಂಬದ ಮಾಹಿತಿ ಪಡೆದುಕೊಂಡಿದ್ದ. ಪತಿ ವಿಯೋಗ ಅನುಭವಿಸಿದ್ದ ಆ ಮಹಿಳೆ, ಆತನ ಸೌಮ್ಯ ಮಾತುಗಳಿಗೆ ಮಾರುಹೋಗಿ ವೈಯಕ್ತಿಕ ವಿವರಗಳನ್ನು ಹಂಚಿಕೊಂಡಿದ್ದರು.
ಅಂತರಂಗದ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡ ವೀರೇಶ್, ಮಹಿಳೆಯ ಮಗಳ ಫೋಟೋಗಳನ್ನು ವಾಟ್ಸಪ್ ಸ್ಟೇಟಸ್ಗಳಿಂದ ಕಲೆಹಾಕಿ, ಅವುಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿದ್ದ. ಬಳಿಕ ಈ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವುದಾಗಿ ಬೆದರಿಕೆ ಹಾಕಿ, ಸಂಬಂಧಿಕರ ಮೊಬೈಲ್ ನಂಬರ್ಗಳಿಗೂ ಇದನ್ನ ಕಳುಹಿಸುತ್ತೇನೆ ಎಂದು ಮಹಿಳೆಯನ್ನು ಬ್ಲಾಕ್ಮೇಲ್ ಮಾಡಿದ್ದ.
ಈ ಬೆದರಿಕೆಗಳಿಂದ ಮಾನಸಿಕ ತೊಂದರೆಗೆ ಒಳಗಾದ ಮಹಿಳೆ, ಕೊನೆಗೆ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಶರಣಾಗಿದ್ದರು. ಪ್ರಕರಣದ ಗಂಭೀರತೆಯನ್ನು ಮನಗಂಡ ಪೊಲೀಸರು, ಎಸ್ಪಿ ವಿಷ್ಣುವರ್ಧನ್ ಮತ್ತು ಅಡಿಷನಲ್ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಗೋಪಾಲಕೃಷ್ಣ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಮುನಿಯಪ್ಪ ಹಾಗೂ ಪಿಎಸ್ಸೈ ರಾಧಾ ಅವರ ತಲೆದಾರಿಯಲ್ಲಿ ವಿಶೇಷ ತಂಡವನ್ನು ರಚಿಸಿದರು.
ಆರೋಪಿಯ ಮೊಬೈಲ್ ಸಿಗ್ನಲ್ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಗದಗ್ನಲ್ಲಿ ವೀರೇಶ್ ಅನ್ನು ಪತ್ತೆಹಚ್ಚಿ ಬಂಧಿಸಿದರು. ಆರೋಪಿಯನ್ನು ನ್ಯಾಯಾಂಗ ಕಸ್ಟಡಿಗೆ ಒಪ್ಪಿಸುವ ಕ್ರಮ ಜರಗಿದ್ದು, ಮುಂದೆ ಈ ಪ್ರಕರಣದ ತನಿಖೆ ವ್ಯಾಪಕವಾಗಿ ಮುಂದುವರಿಯಲಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…