Latest

ಕಟ್ಟಿಗೇನಹಳ್ಳಿ ಗ್ರಾಮದಲ್ಲಿ ₹1 ಕೋಟಿ ಮೌಲ್ಯದ ರಕ್ತಚಂದನ ವಶ

ತಿರುಮಲಶೆಟ್ಟಿಹಳ್ಳಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು ₹1 ಕೋಟಿ ಮೌಲ್ಯದ ರಕ್ತಚಂದನದ 180 ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ರಕ್ತಚಂದನವನ್ನು ಆಂಧ್ರ ಪ್ರದೇಶದ ತಿರುಪತಿಯಲ್ಲಿ ಕಳವು ಮಾಡಿ ಕಟ್ಟಿಗೇನಹಳ್ಳಿ ಗ್ರಾಮದ ನೀಲಗಿರಿ ತೋಪಿನಲ್ಲಿ ಅಡಗಿಸಿಟ್ಟಿದ್ದರು ಎಂದು ವರದಿಯಾಗಿದೆ.

ಆಂಧ್ರ ಪ್ರದೇಶದಲ್ಲಿ ಪ್ರಕರಣ ದಾಖಲು

ಈ ಸಂಬಂಧ ತಿರುಪತಿ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಕಳವು ಪ್ರಕರಣ ದಾಖಲಾಗಿತ್ತು. ಆರೋಪಿಗಳು ಕದ್ದ ರಕ್ತಚಂದನವನ್ನು ಕರ್ನಾಟಕದ ಕಟ್ಟಿಗೇನಹಳ್ಳಿಗೆ ತಂದು, ಪೋಲೀಸರ ಕಣ್ಣಿಗೆ ತುತ್ತಾಗದಂತೆ ಅಡಗಿಸಿಟ್ಟಿದ್ದರು.

ಜಂಟಿ ಕಾರ್ಯಾಚರಣೆಯ ಯಶಸ್ವಿ ಮುಕ್ತಾಯ

ಆಂಧ್ರ ಪ್ರದೇಶ ಮತ್ತು ತಿರುಮಲಶೆಟ್ಟಿಹಳ್ಳಿ ಪೋಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಮರಳನ್ನು ವಶಪಡಿಸಿಕೊಂಡಿದ್ದಾರೆ. ನಂತರ, ವಶಪಡಿಸಿಕೊಂಡ ರಕ್ತಚಂದನವನ್ನು ತಿರುಪತಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಈ ಪ್ರಕರಣದ ಸಂಬಂಧ ತನಿಖೆ ಮುಂದುವರಿದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago