Categories: CrimeLatest

ಅತ್ತೆ–ಸೋದರಳಿಯ ಅಕ್ರಮ ಸಂಬಂಧದ ರಕ್ತಸಿಕ್ತ ಅಂತ್ಯ: ಬಾಡಿಗೆ ಮನೆಯಲ್ಲಿ ಯುವಕನ ಶವ, ರೈಲಿಗೆ ಸಿಲುಕಿ ಮಹಿಳೆ ಸಾವು!

ಪ್ರೀತಿ ಮತ್ತು ಅಕ್ರಮ ಸಂಬಂಧಗಳ ಪರಿಣಾಮ ಎಷ್ಟು ಭೀಕರವಾಗಿರಬಹುದು ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅತ್ತೆ ಮತ್ತು ಸೋದರಳಿಯ ನಡುವಿನ ಅಕ್ರಮ ಸಂಬಂಧ ಕೊನೆಗೆ ಕೊಲೆ ಹಾಗೂ ಆತ್ಮಹತ್ಯೆಯ ಶಂಕೆಗೆ ಕಾರಣವಾಗಿದ್ದು, ಇಬ್ಬರ ಸಾವಿನ ಸುತ್ತ ನಿಗೂಢತೆ ಆವರಿಸಿದೆ.

ಮೃತರನ್ನು ದೆಬಾಶಿಶ್ ಮೊಂಡಲ್ (32) ಹಾಗೂ ರುನು ಮೊಂಡಲ್ (33) ಎಂದು ಗುರುತಿಸಲಾಗಿದೆ. ಇಬ್ಬರೂ ಬಸಿರ್ಹತ್‌ನ ತತ್ರಾ ಪ್ರದೇಶದ ನಿವಾಸಿಗಳಾಗಿದ್ದು, ರುನುಗೆ ಸುಮಾರು 14 ವರ್ಷಗಳ ಹಿಂದೆ ವಿವಾಹವಾಗಿತ್ತು. ಮದುವೆಯಾದ ಬಳಿಕ ತವರು ಮನೆಗೆ ಆಗಾಗ್ಗೆ ಬರುತ್ತಿದ್ದ ವೇಳೆ ಸೋದರಳಿಯನಾಗಬೇಕಿದ್ದ ದೆಬಾಶಿಶ್‌ನೊಂದಿಗೆ ಪರಿಚಯ ಬೆಳೆದಿತ್ತು.

ಕಾಲಕ್ರಮೇಣ ಈ ಪರಿಚಯ ಪ್ರೇಮ ಸಂಬಂಧವಾಗಿ ಬದಲಾಗಿದ್ದು, ಬಳಿಕ ಇಬ್ಬರೂ ತಮ್ಮ ಕುಟುಂಬಗಳಿಂದ ದೂರವಾಗಿ ಬಸಿರ್ಹತ್‌ನ ಬಾಡಿಗೆ ಮನೆಯೊಂದರಲ್ಲಿ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇತ್ತೀಚಿನ ದಿನಗಳಲ್ಲಿ ಈ ಸಂಬಂಧದಿಂದ ದೆಬಾಶಿಶ್ ಬೇಸತ್ತಿದ್ದ ಎನ್ನಲಾಗಿದೆ. ಆತ ಮಾನಸಿಕ ಒತ್ತಡದಲ್ಲಿದ್ದು, ಮನೆಗೆ ಮರಳಲು ಬಯಸುತ್ತಿರುವುದಾಗಿ ತಂದೆಗೆ ಕರೆ ಮಾಡಿ ಹೇಳಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಈ ಘಟನೆ ನಡೆದ ಕೆಲವೇ ಸಮಯದ ಬಳಿಕ ದೆಬಾಶಿಶ್ ತಂದೆಗೆ ರುನು ಕರೆ ಮಾಡಿ, “ನಾನು ದೆಬಾಶಿಶ್‌ನನ್ನು ಕೊಲೆ ಮಾಡಿದ್ದೇನೆ. ಈಗ ನಾನು ಕೂಡ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ” ಎಂದು ಹೇಳಿ ಕರೆ ಸ್ಥಗಿತಗೊಳಿಸಿದ್ದಾಳೆ ಎಂದು ಆರೋಪಿಸಲಾಗಿದೆ.

ಈ ಮಾಹಿತಿ ತಿಳಿದ ಕೂಡಲೇ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ತನಿಖೆ ಆರಂಭಿಸಿದ ಪೊಲೀಸರು ಬಸಿರ್ಹತ್ ರೈಲು ನಿಲ್ದಾಣ ಸಮೀಪದ ಅನಂತಪುರದಲ್ಲಿ ರೈಲ್ವೆ ಹಳಿಗಳ ಮೇಲೆ ರುನು ಅವರ ಮೃತದೇಹ ಪತ್ತೆಹಚ್ಚಿದ್ದಾರೆ.

ಬಳಿಕ ಇಬ್ಬರೂ ವಾಸಿಸುತ್ತಿದ್ದ ಮೋಯಿಲಾಖೋಲಾ ಬಳಿಯ ಬಾಡಿಗೆ ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದಾಗ, ದೆಬಾಶಿಶ್ ರಕ್ತದ ಮಡುವಿನಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿರುವ ದೆಬಾಶಿಶ್ ಕುಟುಂಬಸ್ಥರು, ರುನು ಮೊದಲು ದೆಬಾಶಿಶ್‌ನನ್ನು ಹತ್ಯೆ ಮಾಡಿ ಬಳಿಕ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಆದರೆ ಈ ಬಗ್ಗೆ ರುನು ಕುಟುಂಬದಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.

ಸದ್ಯ ಪೊಲೀಸರು ಎರಡೂ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಇದು ಕೊಲೆ ಮತ್ತು ಆತ್ಮಹತ್ಯೆಯ ಪ್ರಕರಣವೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

1 day ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

1 day ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

1 day ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

1 day ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

1 day ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

1 day ago