ಈಗಾಗಲೇ ರಾಜ್ಯ ಸರ್ಕಾರದಿಂದ ಬೋರ್ಡ್ ಪರೀಕ್ಷೆಯನ್ನು ಕೆಲ ತರಗತಿಗೆ ಪರಿಚಯಿಸಲಾಗಿತ್ತು. ಈಗ ಮುಂದುವರೆದು 9 ಮತ್ತು 11ನೇ ತರಗತಿಗೆ ಪರಿಚಯಿಸಲು ಚಿಂತನೆ ನಡೆಸಿದೆ. ಈ ಬಗ್ಗೆ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಚಿಂತನೆಯನ್ನು ನಡೆಸಲಾಗಿತ್ತು, 9 ಮತ್ತು 11ನೇ ತರಗತಿಗೆ ಇನ್ಮುಂದೆ ಬೋರ್ಡ್ ಪರೀಕ್ಷೆ ನಡೆಸೋದಕ್ಕೆ ಮುಂದಾಗಿದೆ ಎನ್ನಲಾಗುತ್ತಿದೆ.
ಆದರೇ ಪರೀಕ್ಷೆಯಲ್ಲಿ ಕಾರ್ಯಕ್ಷಮತೆಯ ಆಧಾರ ಮೇಲೆ ವಿದ್ಯಾರ್ಥಿಗಳನ್ನು ಫೇಲ್ ಮಾಡದಂತೆ ನಿರ್ಧಾರವನ್ನು ಕೂಡ ಕೈಗೊಳ್ಳಲಿದೆ ಎನ್ನಲಾಗಿದೆ.
ಈಗಾಗಲೇ ಕೇರಳ ಮತ್ತು ಗುಜರಾತ್ ರಾಜ್ಯಗಳಲ್ಲಿ ಈ ಮಾದರಿಯಿದೆ. ಅದೇ ಮಾದರಿಯಲ್ಲಿ ಕರ್ನಾಟಕದ 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಯನ್ನು ಪರಿಚಯಿಸೋದಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಂದಾಗಿದೆ. ಪ್ರಸ್ತುತ ರಾಜ್ಯದಲ್ಲಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಗಳಿಗೆ ಬೋರ್ಡ್ ಪರೀಕ್ಷೆಯನ್ನು ನಡೆಸಲಾಗುತ್ತಿದೆ.
ಶಿಕ್ಷಣ ಇಲಾಖೆಯ ನೂತನ ಪ್ರಸ್ತಾವನೆಯಲ್ಲಿ 5 ಮತ್ತು 8ನೇ ತರಗತಿಗಳಿಗೆ ಹೋಲುವ ನೋ ಡಿಟೆನ್ಯನ್ ಪಾಲಿಸಿ ಅನ್ನು ಕೂಡ ಒಳಗೊಂಡಿದೆ. ಕೇವಲ ವಿದ್ಯಾರ್ಥಿಗಳ ಸಾಧನೆಯನ್ನು ಪ್ರೇರೇಪಿಸಲು ಬೋರ್ಡ್ ಪರೀಕ್ಷೆ ಪರಿಚಯಿಸಲಾಗುತ್ತಿದೆಯೇ ಹೊರತು, ವಿದ್ಯಾರ್ಥಿಗಳನ್ನು ಫೇಲ್ ಮಾಡೋದಕ್ಕಲ್ಲ ಎನ್ನಲಾಗುತ್ತಿದೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…