Latest

ರಾಜಸ್ಥಾನ ಅಲ್ವಾರ್‌ನಲ್ಲಿ ಡ್ರಮ್ನೊಳಗಿನ ಶವ ಪತ್ತೆ : ಮಗನ ಹೇಳಿಕೆಯಿಂದ ಪ್ರಕರಣಕ್ಕೆ ಸಂಚಲನಕಾರಿ ತಿರುವು

ಅಲ್ವಾರ್ (ಆ.20): ರಾಜಸ್ಥಾನದ ಅಲ್ವಾರ್‌ನಲ್ಲಿ ಬಾಡಿಗೆ ಮನೆಯ ತಾರಸಿನಲ್ಲಿ ಪತ್ತೆಯಾದ ಕೊಳೆತ ಶವ ಪ್ರಕರಣಕ್ಕೆ 8 ವರ್ಷದ ಬಾಲಕನ ಹೇಳಿಕೆ ಹೊಸ ತಿರುವು ನೀಡಿದೆ. “ಅಮ್ಮ ಮತ್ತು ಅಂಕಲ್ ಸೇರಿ ನನ್ನ ಅಪ್ಪನನ್ನು ಡ್ರಮ್ನೊಳಗೆ ಹಾಕುವುದನ್ನು ನಾನು ನೋಡಿದ್ದೇನೆ” ಎಂದು ಮೃತ ಹಂಸರಾಜ್ ಅವರ ಪುತ್ರನು ಪೊಲೀಸರಿಗೆ ಸ್ಪಷ್ಟವಾಗಿ ಹೇಳಿದ್ದಾನೆ.

ಕೆಲವು ದಿನಗಳ ಹಿಂದೆ ಆ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದುದರಿಂದ ನೆರೆಹೊರೆಯವರು ಪೊಲೀಸರಿಗೆ ದೂರು ನೀಡಿದ್ದರು. ಶೋಧ ಕಾರ್ಯದಲ್ಲಿ ತಾರಸಿನಲ್ಲಿ ಪೂರ್ತಿ ಸೀಲ್ ಮಾಡಲಾಗಿದ್ದ ನೀಲಿ ಬಣ್ಣದ ಪ್ಲಾಸ್ಟಿಕ್ ಡ್ರಮ್ ಸಿಕ್ಕಿದ್ದು, ಅದರಲ್ಲಿ ಶವ ಪತ್ತೆಯಾದಿತ್ತು. ಬಳಿಕ ಅದು ಮನೆಯ ಮಾಲೀಕ ಹಂಸರಾಜ್ ಅವರದೇ ಎಂಬುದು ದೃಢಪಟ್ಟಿತ್ತು. ಆದರೆ ಪತ್ನಿ ಹಾಗೂ ಮಕ್ಕಳು ನಾಪತ್ತೆಯಾಗಿದ್ದು ಅನುಮಾನಗಳಿಗೆ ಕಾರಣವಾಗಿತ್ತು.

ಇದೀಗ ಮಗ ಹರ್ಷಲ್ ನೀಡಿರುವ ಹೇಳಿಕೆ ಪ್ರಕಾರ, ಘಟನೆ ನಡೆದ ರಾತ್ರಿ ಹಂಸರಾಜ್ ತಮ್ಮ ಪತ್ನಿ ಸುನಿತಾ ಮತ್ತು ಆಕೆಯ ಪ್ರಿಯಕರ ಜಿತೇಂದ್ರ ಶರ್ಮಾ ಜೊತೆ ಕುಡಿತದಲ್ಲಿ ತೊಡಗಿಕೊಂಡಿದ್ದರು. ಕುಡಿತದ ನಶೆಯಲ್ಲಿ ಹಂಸರಾಜ್ ಪತ್ನಿಗೆ ಹಲ್ಲೆ ಮಾಡಲು ಮುಂದಾದಾಗ ಜಿತೇಂದ್ರ ಮಧ್ಯ ಪ್ರವೇಶಿಸಿ ಅವರ ಮೇಲೆ ದಾಳಿ ಮಾಡಿದ್ದ. ನಂತರ ಹರ್ಷಲ್‌ಗೆ ಒಳಗೆ ಹೋಗಿ ಮಲಗಲು ಹೇಳಲಾಗಿತ್ತು.

ಅವನ ಹೇಳಿಕೆಯ ಪ್ರಕಾರ, ನಿದ್ರೆಯಿಂದ ಎಚ್ಚರವಾದಾಗ ತಾಯಿ ಹಾಗೂ “ಅಂಕಲ್” ಇನ್ನೂ ಅಲ್ಲೇ ಇದ್ದರು. ಇದೇ ವೇಳೆ ಹಂಸರಾಜ್ ಅವರನ್ನು ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದ್ದು, ಶವ ಬೇಗನೆ ಕೊಳೆತುಹೋಗುವಂತೆ ದೇಹದ ಮೇಲೆ ಉಪ್ಪು ಸಿಂಪಡಿಸಿದ್ದರು. ಕೊಲೆ ಮಾಡಿದ ಬಳಿಕ ಸುನಿತಾ ಹಾಗೂ ಜಿತೇಂದ್ರ ಊರಿನಿಂದ ಪರಾರಿಯಾಗಿದ್ದರು.

ಈ ಬೆಳವಣಿಗೆಯಿಂದ ಅಲ್ವಾರ್ ಪೊಲೀಸರು ಈಗ ಪತ್ನಿ ಹಾಗೂ ಆಕೆಯ ಪ್ರಿಯಕರರಿಗಾಗಿ ತೀವ್ರ ಶೋಧ ಆರಂಭಿಸಿದ್ದಾರೆ. ಮಗ ನೀಡಿದ ಸಾಕ್ಷ್ಯವು ಹಂಸರಾಜ್ ಹತ್ಯೆ ಪ್ರಕರಣಕ್ಕೆ ಸ್ಪಷ್ಟ ದಿಕ್ಕು ನೀಡಿದ್ದು, ಸ್ಥಳೀಯರಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago