Latest

ರಾಜಸ್ಥಾನ ಅಲ್ವಾರ್‌ನಲ್ಲಿ ಡ್ರಮ್ನೊಳಗಿನ ಶವ ಪತ್ತೆ : ಮಗನ ಹೇಳಿಕೆಯಿಂದ ಪ್ರಕರಣಕ್ಕೆ ಸಂಚಲನಕಾರಿ ತಿರುವು

ಅಲ್ವಾರ್ (ಆ.20): ರಾಜಸ್ಥಾನದ ಅಲ್ವಾರ್‌ನಲ್ಲಿ ಬಾಡಿಗೆ ಮನೆಯ ತಾರಸಿನಲ್ಲಿ ಪತ್ತೆಯಾದ ಕೊಳೆತ ಶವ ಪ್ರಕರಣಕ್ಕೆ 8 ವರ್ಷದ ಬಾಲಕನ ಹೇಳಿಕೆ ಹೊಸ ತಿರುವು ನೀಡಿದೆ. “ಅಮ್ಮ ಮತ್ತು ಅಂಕಲ್ ಸೇರಿ ನನ್ನ ಅಪ್ಪನನ್ನು ಡ್ರಮ್ನೊಳಗೆ ಹಾಕುವುದನ್ನು ನಾನು ನೋಡಿದ್ದೇನೆ” ಎಂದು ಮೃತ ಹಂಸರಾಜ್ ಅವರ ಪುತ್ರನು ಪೊಲೀಸರಿಗೆ ಸ್ಪಷ್ಟವಾಗಿ ಹೇಳಿದ್ದಾನೆ.

ಕೆಲವು ದಿನಗಳ ಹಿಂದೆ ಆ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದುದರಿಂದ ನೆರೆಹೊರೆಯವರು ಪೊಲೀಸರಿಗೆ ದೂರು ನೀಡಿದ್ದರು. ಶೋಧ ಕಾರ್ಯದಲ್ಲಿ ತಾರಸಿನಲ್ಲಿ ಪೂರ್ತಿ ಸೀಲ್ ಮಾಡಲಾಗಿದ್ದ ನೀಲಿ ಬಣ್ಣದ ಪ್ಲಾಸ್ಟಿಕ್ ಡ್ರಮ್ ಸಿಕ್ಕಿದ್ದು, ಅದರಲ್ಲಿ ಶವ ಪತ್ತೆಯಾದಿತ್ತು. ಬಳಿಕ ಅದು ಮನೆಯ ಮಾಲೀಕ ಹಂಸರಾಜ್ ಅವರದೇ ಎಂಬುದು ದೃಢಪಟ್ಟಿತ್ತು. ಆದರೆ ಪತ್ನಿ ಹಾಗೂ ಮಕ್ಕಳು ನಾಪತ್ತೆಯಾಗಿದ್ದು ಅನುಮಾನಗಳಿಗೆ ಕಾರಣವಾಗಿತ್ತು.

ಇದೀಗ ಮಗ ಹರ್ಷಲ್ ನೀಡಿರುವ ಹೇಳಿಕೆ ಪ್ರಕಾರ, ಘಟನೆ ನಡೆದ ರಾತ್ರಿ ಹಂಸರಾಜ್ ತಮ್ಮ ಪತ್ನಿ ಸುನಿತಾ ಮತ್ತು ಆಕೆಯ ಪ್ರಿಯಕರ ಜಿತೇಂದ್ರ ಶರ್ಮಾ ಜೊತೆ ಕುಡಿತದಲ್ಲಿ ತೊಡಗಿಕೊಂಡಿದ್ದರು. ಕುಡಿತದ ನಶೆಯಲ್ಲಿ ಹಂಸರಾಜ್ ಪತ್ನಿಗೆ ಹಲ್ಲೆ ಮಾಡಲು ಮುಂದಾದಾಗ ಜಿತೇಂದ್ರ ಮಧ್ಯ ಪ್ರವೇಶಿಸಿ ಅವರ ಮೇಲೆ ದಾಳಿ ಮಾಡಿದ್ದ. ನಂತರ ಹರ್ಷಲ್‌ಗೆ ಒಳಗೆ ಹೋಗಿ ಮಲಗಲು ಹೇಳಲಾಗಿತ್ತು.

ಅವನ ಹೇಳಿಕೆಯ ಪ್ರಕಾರ, ನಿದ್ರೆಯಿಂದ ಎಚ್ಚರವಾದಾಗ ತಾಯಿ ಹಾಗೂ “ಅಂಕಲ್” ಇನ್ನೂ ಅಲ್ಲೇ ಇದ್ದರು. ಇದೇ ವೇಳೆ ಹಂಸರಾಜ್ ಅವರನ್ನು ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದ್ದು, ಶವ ಬೇಗನೆ ಕೊಳೆತುಹೋಗುವಂತೆ ದೇಹದ ಮೇಲೆ ಉಪ್ಪು ಸಿಂಪಡಿಸಿದ್ದರು. ಕೊಲೆ ಮಾಡಿದ ಬಳಿಕ ಸುನಿತಾ ಹಾಗೂ ಜಿತೇಂದ್ರ ಊರಿನಿಂದ ಪರಾರಿಯಾಗಿದ್ದರು.

ಈ ಬೆಳವಣಿಗೆಯಿಂದ ಅಲ್ವಾರ್ ಪೊಲೀಸರು ಈಗ ಪತ್ನಿ ಹಾಗೂ ಆಕೆಯ ಪ್ರಿಯಕರರಿಗಾಗಿ ತೀವ್ರ ಶೋಧ ಆರಂಭಿಸಿದ್ದಾರೆ. ಮಗ ನೀಡಿದ ಸಾಕ್ಷ್ಯವು ಹಂಸರಾಜ್ ಹತ್ಯೆ ಪ್ರಕರಣಕ್ಕೆ ಸ್ಪಷ್ಟ ದಿಕ್ಕು ನೀಡಿದ್ದು, ಸ್ಥಳೀಯರಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago