Latest

ಮಸೀದಿ ಸಮೀಪದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ: ಮಲ್ಪೆ ಪೊಲೀಸರ ತನಿಖೆ

ಉಡುಪಿ ಜಿಲ್ಲೆಯ ಮಲ್ಪೆ ಬಳಿ ಶಾಕ್‌ಗುಡುಸುವ ಘಟನೆ ನಡೆದಿದೆ . ಇಲ್ಲಿನ ಜಂಕ್ಷನ್ ಸಮೀಪದಲ್ಲಿರುವ ಜಾಮೀಯಾ ಮಸೀದಿಗೆ ಸಂಬಂಧಪಟ್ಟ ಎರಡು ಮಹಡಿ ಕಟ್ಟಡದ ಶೌಚಾಲಯದಲ್ಲಿ ನವಜಾತ ಶಿಶುವೊಬ್ಬರ ಶವ ಪತ್ತೆಯಾಗಿದೆ ಎಂದು ಮಲ್ಪೆ ಪೊಲೀಸರು ತಿಳಿಸಿದ್ದಾರೆ.

ಮಸೀದಿಗೆ ಹೊಂದಿಕೊಂಡಿರುವ ಈ ಕಟ್ಟಡದಲ್ಲಿ ಕೆಲಸಗಾರರ ವಾಸಸ್ಥಳವಿದ್ದು, ಅವರ ಅನುಕೂಲಕ್ಕಾಗಿ ಕಟ್ಟಡದ ಪಕ್ಕದಲ್ಲಿ ಶೌಚಾಲಯವನ್ನು ನಿರ್ಮಿಸಲಾಗಿತ್ತು. ಮಸೀದಿಯ ವ್ಯವಸ್ಥಾಪಕ ಸುಹೇಲ್ ಅವರು ಶೌಚಾಲಯ ಉಪಯೋಗಿಸಲು ಹೋಗಿದ್ದ ವೇಳೆ ಶಿಶುವಿನ ಮೃತದೇಹವನ್ನು ಪತ್ತೆ ಹಚ್ಚಿದರು. ತಕ್ಷಣವೇ ಅವರು ಮಲ್ಪೆ ಪೊಲೀಸರಿಗೆ ವಿಷಯವನ್ನು ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಶೌಚಾಲಯದ ಒಳಗಡೆ ರಕ್ತದ ಗುರುತುಗಳು ಕಂಡು ಬಂದಿರುವುದಾಗಿ ತಿಳಿಸಿದ್ದಾರೆ. ಶಿಶು ಹುಟ್ಟಿದ ತಕ್ಷಣವೇ ಅಥವಾ ಹುಟ್ಟುವ ಮೊದಲೇ ಮೃತಪಟ್ಟಿರುವ ಸಾಧ್ಯತೆ ಇದ್ದು, ಪ್ರಕರಣ ಅನುಮಾನಾಸ್ಪದವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾರೋ ಅಪರಿಚಿತ ವ್ಯಕ್ತಿಗಳು ಶಿಶುವನ್ನು ಇಲ್ಲಿಗೆ ರಹಸ್ಯವಾಗಿ ತರಿಸಿ, ಜನನದ ಅಳಿವು ಮರೆಮಾಚಲು ಶವವನ್ನು ಈ ರೀತಿ ವಿಲೇವಾರಿ ಮಾಡಿದ ಶಂಕೆ ವ್ಯಕ್ತವಾಗಿದೆ. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

nazeer ahamad

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

3 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

3 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

7 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

7 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

7 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

7 hours ago