ಉಳ್ಳಾಲ, ಜುಲೈ 12: ದೇರಳಕಟ್ಟೆ ಪ್ರದೇಶದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಮೃತೆಯಾಗಿ ಗುರುತಿಸಲಾದವರು ಕೇರಳ ಮೂಲದ 58 ವರ್ಷದ ಶ್ರೀಮತಿ ಕಮಲ.

ಘಟನೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯ ಸಮೀಪದಲ್ಲಿ ಸಂಭವಿಸಿದ್ದು, ಶ್ರೀಮತಿ ಕಮಲ ಅವರು ಅಪಾರ್ಟ್‌ಮೆಂಟ್‌ಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಅತೀ ವೇಗದಲ್ಲಿ ಬಂದ ಬೊಲೆರೊ ವಾಹನವೊಂದು ಅವರನ್ನು ಢಿಕ್ಕಿ ಹೊಡೆದು  ನೀಡಿದೆ. ಅಪಘಾತದ ತೀವ್ರತೆಗೆ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತೆಯ ಪುತ್ರಿ ಮೀರ, ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ನೀಡುತ್ತಿದ್ದಾರೆ. ತಾಯಿ ಮತ್ತು ಪುತ್ರಿ ಇಬ್ಬರೂ ಸ್ಥಳೀಯ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು ಎನ್ನಲಾಗಿದೆ.

ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಾಹನ ಮತ್ತು ಚಾಲಕನ ವಿವರ ಶೋಧನೆ ಮುಂದುವರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

error: Content is protected !!