World

ಪಾಕಿಸ್ತಾನದ ಸೈನಿಕರ ವಾಹನಗಳ ಮೇಲೆ ಬಾಂಬ್ ದಾಳಿ…!

ಪಾಕಿಸ್ತಾನದ ಕ್ವೆಟ್ಟಾದಿಂದ ತಫ್ತಾನ್‌ಗೆ ತೆರಳುತ್ತಿದ್ದ ಭದ್ರತಾ ಪಡೆಗಳ ವಾಹನಗಳ ಮೇಲೆ ಭಾನುವಾರ ಭೀಕರ ದಾಳಿ ನಡೆದಿದ್ದು, 90 ಸೈನಿಕರು ಮೃತಪಟ್ಟಿದ್ದಾರೆ ಎಂದು ಬಲೂಚ್ ಲಿಬರೇಷನ್ ಆರ್ಮಿ (ಬಿಎಲ್‌ಎ) ಘೋಷಿಸಿದೆ. ಆದರೆ, ಅಧಿಕೃತ ಮೂಲಗಳ ಪ್ರಕಾರ, ಕನಿಷ್ಠ ಏಳು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ.

ಪಾಕಿಸ್ತಾನ ಅಧಿಕಾರಿಯೊಬ್ಬರು ಈ ಬಗ್ಗೆ ಪ್ರತಿಕ್ರಿಯಿಸಿ, “ಕ್ವೆಟ್ಟಾದಿಂದ ತಫ್ತಾನ್‌ಗೆ ತೆರಳುತ್ತಿದ್ದ ಭದ್ರತಾ ಪಡೆಗಳ ವಾಹನಗಳ ಮೇಲೆ ದಾಳಿ ನಡೆದಿದ್ದು, ಏಳು ಬಸ್‌ಗಳು ಮತ್ತು ಎರಡು ಇತರ ವಾಹನಗಳು ಗುರಿಯಾಗಿವೆ. ಒಂದು ಬಸ್‌ಗೆ ಸ್ಫೋಟಕಗಳಿಂದ ತುಂಬಿದ ವಾಹನವೊಂದು ಡಿಕ್ಕಿ ಹೊಡೆದಿದ್ದು, ಇದು ಆತ್ಮಾಹುತಿ ದಾಳಿಯಾಗಿರಬಹುದು. ಇನ್ನೊಂದು ಬಸ್‌ನ್ನು ರಾಕೆಟ್ ಪ್ರೊಪೆಲ್ಡ್ ಗ್ರೆನೇಡ್‌ಗಳಿಂದ (ಆರ್‌ಪಿಜಿ) ಉಡಾಯಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಗಾಯಗೊಂಡವರನ್ನು ತಕ್ಷಣವೇ ರವಾನಿಸಲು ಆರ್ಮಿ ಏವಿಯೇಷನ್ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದ್ದು, ಪ್ರದೇಶದ ಮೇಲ್ವಿಚಾರಣೆಗೆ ಡ್ರೋನ್‌ಗಳನ್ನೂ ಬಳಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ದಾಳಿಯು ಪಾಕಿಸ್ತಾನದ ಭದ್ರತಾ ಪಡೆಗಳ ವಿರುದ್ಧ ಬಲೂಚ್ ಲಿಬರೇಷನ್ ಆರ್ಮಿಯ ನಿಗದಿತ ದಾಳಿಯಾಗಿದೆ.

ಈ ಆತ್ಮಾಹುತಿ ದಾಳಿಯು ಪಾಕಿಸ್ತಾನದ ಭದ್ರತಾ ವ್ಯವಸ್ಥೆಗೆ ಮತ್ತೊಂದು ದೊಡ್ಡ ಆಘಾತ ನೀಡಿದ್ದು, ಸರ್ಕಾರ ಮತ್ತು ಸೇನೆ ಈ ದಾಳಿಯ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದೆ.

ಭ್ರಷ್ಟರ ಬೇಟೆ

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago