Latest

ಅಲ್ಲಾಹು ಅಕ್ಬರ್’ ಎಂದು ಕೂಗಿ ಬಾಂಬ್ ಬೆದರಿಕೆ: ವಿಮಾನದಲ್ಲಿ ಆತಂಕ, 41 ವರ್ಷದ ವ್ಯಕ್ತಿ ಬಂಧನ”

ಲಂಡನ್: ಲಂಡನ್‌ನ ಲುಟನ್ ವಿಮಾನ ನಿಲ್ದಾಣದಿಂದ ಗ್ಲ್ಯಾಸ್ಗೋಗೆ ಹೊರಟಿದ್ದ ಈಜಿಜೆಟ್ ವಿಮಾನದಲ್ಲಿ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ. ಪ್ರಯಾಣಿಕನೊಬ್ಬ ‘ವಿಮಾನದಲ್ಲಿ ಬಾಂಬ್ ಇದೆ’ ಎಂದು ಘೋಷಣೆ ಕೂಗಿ ದೌರ್ಜನ್ಯ ಮೆರೆದಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

41 ವರ್ಷದ ಈ ವ್ಯಕ್ತಿ ವಿಮಾನದಲ್ಲಿ ಕುಳಿತುಕೊಂಡು “ಅಲ್ಲಾಹು ಅಕ್ಬರ್, ಅಲ್ಲಾಹು ಅಕ್ಬರ್” ಎಂದು ಘೋಷಿಸಿ ನಂತರ “ನಾನು ವಿಮಾನಕ್ಕೆ ಬಾಂಬ್ ಹಾಕಿದ್ದೇನೆ, ಅಮೆರಿಕಕ್ಕೆ ಸಾವು, ಟ್ರಂಪ್‌ಗೆ ಸಾವು” ಎಂದು ಕೂಗಿ ಪ್ಯಾಸೆಂಜರ್‌ಗಳ ನಡುವೆ ಭೀತಿಯನ್ನು ಮೂಡಿಸಿದ್ದಾನೆ. ಈ ಬೆದರಿಕೆ ಬೆಳಕಿಗೆ ಬಂದ ತಕ್ಷಣ ಸಿಬ್ಬಂದಿ ತಕ್ಷಣವೇ ಭದ್ರತಾ ಕ್ರಮಗಳನ್ನು ಕೈಗೊಂಡರು.

ವಿಮಾನ ಗ್ಲ್ಯಾಸ್ಗೋ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದ ನಂತರ, ಸನ್ನದ್ದಾದ ಪೊಲೀಸ್ ಪಡೆ ತಕ್ಷಣವೇ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದರು. ಆತನ ವಿರುದ್ಧ ಕಠಿಣ ತನಿಖೆ ಪ್ರಾರಂಭಿಸಲಾಗಿದ್ದು, ಈ ಬೆದರಿಕೆಗೆ ನಿಖರ ಕಾರಣವೇನು ಎಂಬುದನ್ನು ತಿಳಿದುಕೊಳ್ಳುವ ಕೆಲಸ ನಡೆದಿದೆ.

ವಿಮಾನದಲ್ಲಿದ್ದ ಇತರ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಈ ವ್ಯಕ್ತಿಯ ಕಿರುಚಾಟ ಮತ್ತು ಅಶಾಂತಿ ಸ್ಪಷ್ಟವಾಗಿ ಕಾಣಸಿಗುತ್ತಿದೆ.

ಸ್ಥಳೀಯ ಪೊಲೀಸರು ಈ ಬಗ್ಗೆ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿದ್ದು, “41 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಇತನ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಸಾರ್ವಜನಿಕರು ಆತಂಕಪಡಬೇಕಾಗಿಲ್ಲ. ಸುರಕ್ಷತೆಗೆ ಯಾವುದೇ ತೊಂದರೆಯಿಲ್ಲ,” ಎಂದು ತಿಳಿಸಿದ್ದಾರೆ.

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago