Latest

ಅಲ್ಲಾಹು ಅಕ್ಬರ್’ ಎಂದು ಕೂಗಿ ಬಾಂಬ್ ಬೆದರಿಕೆ: ವಿಮಾನದಲ್ಲಿ ಆತಂಕ, 41 ವರ್ಷದ ವ್ಯಕ್ತಿ ಬಂಧನ”

ಲಂಡನ್: ಲಂಡನ್‌ನ ಲುಟನ್ ವಿಮಾನ ನಿಲ್ದಾಣದಿಂದ ಗ್ಲ್ಯಾಸ್ಗೋಗೆ ಹೊರಟಿದ್ದ ಈಜಿಜೆಟ್ ವಿಮಾನದಲ್ಲಿ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ. ಪ್ರಯಾಣಿಕನೊಬ್ಬ ‘ವಿಮಾನದಲ್ಲಿ ಬಾಂಬ್ ಇದೆ’ ಎಂದು ಘೋಷಣೆ ಕೂಗಿ ದೌರ್ಜನ್ಯ ಮೆರೆದಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

41 ವರ್ಷದ ಈ ವ್ಯಕ್ತಿ ವಿಮಾನದಲ್ಲಿ ಕುಳಿತುಕೊಂಡು “ಅಲ್ಲಾಹು ಅಕ್ಬರ್, ಅಲ್ಲಾಹು ಅಕ್ಬರ್” ಎಂದು ಘೋಷಿಸಿ ನಂತರ “ನಾನು ವಿಮಾನಕ್ಕೆ ಬಾಂಬ್ ಹಾಕಿದ್ದೇನೆ, ಅಮೆರಿಕಕ್ಕೆ ಸಾವು, ಟ್ರಂಪ್‌ಗೆ ಸಾವು” ಎಂದು ಕೂಗಿ ಪ್ಯಾಸೆಂಜರ್‌ಗಳ ನಡುವೆ ಭೀತಿಯನ್ನು ಮೂಡಿಸಿದ್ದಾನೆ. ಈ ಬೆದರಿಕೆ ಬೆಳಕಿಗೆ ಬಂದ ತಕ್ಷಣ ಸಿಬ್ಬಂದಿ ತಕ್ಷಣವೇ ಭದ್ರತಾ ಕ್ರಮಗಳನ್ನು ಕೈಗೊಂಡರು.

ವಿಮಾನ ಗ್ಲ್ಯಾಸ್ಗೋ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದ ನಂತರ, ಸನ್ನದ್ದಾದ ಪೊಲೀಸ್ ಪಡೆ ತಕ್ಷಣವೇ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದರು. ಆತನ ವಿರುದ್ಧ ಕಠಿಣ ತನಿಖೆ ಪ್ರಾರಂಭಿಸಲಾಗಿದ್ದು, ಈ ಬೆದರಿಕೆಗೆ ನಿಖರ ಕಾರಣವೇನು ಎಂಬುದನ್ನು ತಿಳಿದುಕೊಳ್ಳುವ ಕೆಲಸ ನಡೆದಿದೆ.

ವಿಮಾನದಲ್ಲಿದ್ದ ಇತರ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಈ ವ್ಯಕ್ತಿಯ ಕಿರುಚಾಟ ಮತ್ತು ಅಶಾಂತಿ ಸ್ಪಷ್ಟವಾಗಿ ಕಾಣಸಿಗುತ್ತಿದೆ.

ಸ್ಥಳೀಯ ಪೊಲೀಸರು ಈ ಬಗ್ಗೆ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿದ್ದು, “41 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಇತನ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಸಾರ್ವಜನಿಕರು ಆತಂಕಪಡಬೇಕಾಗಿಲ್ಲ. ಸುರಕ್ಷತೆಗೆ ಯಾವುದೇ ತೊಂದರೆಯಿಲ್ಲ,” ಎಂದು ತಿಳಿಸಿದ್ದಾರೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago