ಬೆಂಗಳೂರು ನಗರದ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿರುವ ಕುರಿತು ಆತಂಕಕಾರಿಯಾದ ಮಾಹಿತಿ ಬೆಳಕಿಗೆ ಬಂದಿದೆ. ರಾಜ್ಯcದಾದ್ಯಾಂತ ಪ್ರಮುಖ 40ಕ್ಕೂ ಹೆಚ್ಚು ಖಾಸಗಿ ಶಾಲೆಗಳ ಇಮೇಲ್ ವಿಳಾಸಗಳಿಗೆ ಶಂಕಾಸ್ಪದ ಸಂದೇಶಗಳು ಬರಲೆಂದು ವರದಿಯಾಗಿದೆ.
ಆರ್.ಆರ್ ನಗರ, ಕೆಂಗೇರಿ, ಬನಶಂಕರಿ, ಜಯನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿನ ಶಾಲೆಗಳಿಗೆ ಈ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಕೂಡಲೇ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿದ್ದಾರೆ. ಶಂಕಿತ ವಸ್ತುಗಳಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿ ಶಾಲಾ ಆಡಳಿತ ಮಂಡಳಿಗಳು ತಕ್ಷಣವೇ ಮಕ್ಕಳನ್ನು ಮನೆಗಳಿಗೆ ಕಳುಹಿಸುವ ಕ್ರಮ ಕೈಗೊಂಡಿವೆ. ಕೆಲವೆಡೆ ಪೋಷಕರಿಗೆ ಮಾಹಿತಿ ನೀಡಿ ತುರ್ತು ನಿರ್ವಹಣಾ ಕ್ರಮಗಳನ್ನೂ ಜಾರಿಗೊಳಿಸಲಾಗಿದೆ.
ಬೆಂಗಳೂರಿನಲ್ಲಿ ಇದೇ ರೀತಿಯ ಬಾಂಬ್ ಬೆದರಿಕೆ ಪ್ರಕರಣಗಳು ಹಿಂದೆಯೂ ನಡೆದಿದೆ. ಕಳೆದ ವರ್ಷವೂ ಇಂತಹ ಬೆದರಿಕೆಗಳಿಂದ ಕೆಲ ಶಾಲೆಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಬೆಳವಣಿಗೆಯು ತೀವ್ರ ಗಂಭೀರತೆ ಹೊಂದಿರುವುದರಿಂದ, ಸೈಬರ್ ಕ್ರೈಂ ವಿಭಾಗದ ಸಹಕಾರದಿಂದ ಈಮೇಲ್ಗಳ ಮೂಲವನ್ನು ಪತ್ತೆಹಚ್ಚುವ ಪ್ರಯತ್ನಗಳು ಜೋರಾಗಿವೆ.
ನಗರದ ಪೊಲೀಸ್ ಆಯುಕ್ತರು ಸಾರ್ವಜನಿಕರಿಗೆ ಆತಂಕಪಡದಂತೆ ಮನವಿ ಮಾಡಿದ್ದಾರೆ. “ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ. ಇದು ಕಿಡಿಗೇಡಿಗಳ ಕೃತ್ಯವಾಗಿರುವ ಸಾಧ್ಯತೆ ಇದೆ. ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗಗೊಳಿಸಲಾಗುತ್ತದೆ,” ಎಂದು ಅವರು ತಿಳಿಸಿದ್ದಾರೆ.
ಹೀಗಾಗಿ, ಈ ಬೆದರಿಕೆಗಳು ವಾಸ್ತವವೋ ಅಥವಾ ಕೇವಲ ಭಯ ಹುಟ್ಟಿಸುವ ನಕಲಿ ತಂತ್ರವೋ ಎಂಬುದನ್ನು ತಿಳಿದುಕೊಳ್ಳಲು ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…