Categories: CinemaLatest

‘ಲೀಲಮ್ಮ… ನಿನ್ನ ಗಂಡ ಯಾರಮ್ಮ?’ ಪುಸ್ತಕ ಲೋಕಾರ್ಪಣೆ: ಲೀಲಾವತಿ–ರಾಜ್‌ಕುಮಾರ್‌ ಕುರಿತ ವಿವಾದಗಳಿಗೆ ದಾಖಲೆಗಳ ಸಮೇತ ಉತ್ತರ ಎಂದ ಎನ್‌.ಆರ್‌. ರಮೇಶ್

ಕನ್ನಡದ ಹಿರಿಯ ನಟಿ ದಿವಂಗತ ಲೀಲಾವತಿ ಅವರ ಜೀವನ, ಅವರ ಪತಿ ಮಹಾಲಿಂಗ ಭಾಗವತರ್‌ ಅವರ ಹಿನ್ನೆಲೆ ಹಾಗೂ ಈ ಇಬ್ಬರ ಜೀವನಕ್ಕೆ ಸಂಬಂಧಿಸಿದ ಹಲವು ಅಂಶಗಳನ್ನು ದಾಖಲಾತಿಗಳ ಆಧಾರದಲ್ಲಿ ಬೆಳಕಿಗೆ ತರುವ ಉದ್ದೇಶದಿಂದ ರಚಿತವಾಗಿರುವ ‘ಲೀಲಮ್ಮ… ನಿನ್ನ ಗಂಡ ಯಾರಮ್ಮ?’ ಕೃತಿಯನ್ನು ಬೆಂಗಳೂರಿನಲ್ಲಿ ಲೋಕಾರ್ಪಣೆಗೊಳಿಸಲಾಯಿತು.

ಯಡಿಯೂರು ಕೆರೆ ಮುಂಭಾಗದಲ್ಲಿರುವ ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪುಸ್ತಕವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು. ಈ ಕೃತಿಯನ್ನು ಅಖಿಲ ಕರ್ನಾಟಕ ಡಾ. ರಾಜ್‌ಕುಮಾರ್‌ ಅಭಿಮಾನಿ ಸಂಘಗಳ ಒಕ್ಕೂಟದ ರಾಜ್ಯ ಗೌರವಾಧ್ಯಕ್ಷ ಎನ್‌.ಆರ್‌. ರಮೇಶ್‌ ರಚಿಸಿದ್ದಾರೆ.

ಪುಸ್ತಕದ ಕುರಿತು ಮಾತನಾಡಿದ ಎನ್‌.ಆರ್‌. ರಮೇಶ್‌, ಕಳೆದ ಹಲವು ದಶಕಗಳಿಂದ ಡಾ. ರಾಜ್‌ಕುಮಾರ್‌ ಹಾಗೂ ನಟಿ ಲೀಲಾವತಿ ಅವರ ವೈಯಕ್ತಿಕ ಬದುಕಿನ ಕುರಿತು ನಿರಾಧಾರ ಆರೋಪಗಳು ಮತ್ತು ಅಪಪ್ರಚಾರಗಳು ನಡೆಯುತ್ತಿವೆ ಎಂದು ಹೇಳಿದರು. ಆ ಆರೋಪಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಿ, ದಾಖಲೆಗಳ ಆಧಾರದ ಮೇಲೆ ನೈಜ ಮಾಹಿತಿ ಜನರ ಮುಂದಿಡುವ ಉದ್ದೇಶದಿಂದ ಈ ಕೃತಿಯನ್ನು ರಚಿಸಿರುವುದಾಗಿ ತಿಳಿಸಿದರು.

ಲೀಲಾವತಿ ಅವರ ಪತಿ ಯಾರು, ನಟ ವಿನೋದ್‌ ರಾಜ್‌ ಅವರ ತಂದೆ ಯಾರು ಹಾಗೂ ಮಹಾಲಿಂಗ ಭಾಗವತರ್‌ ಮತ್ತು ಲೀಲಾವತಿ ಅವರ ನಡುವಿನ ಸಂಬಂಧದ ಕುರಿತು ಕಳೆದ ನಾಲ್ಕು ವರ್ಷಗಳಿಂದ ಸಮಗ್ರ ದಾಖಲೆಗಳನ್ನು ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದರು.

ಈ ಸಂಬಂಧ ತಮಿಳುನಾಡಿನ ಚೆನ್ನೈ ಹಾಗೂ ಚಂಗಲ್ಪಟ್ಟು ಜಿಲ್ಲೆಗಳಲ್ಲಿ ಲಭ್ಯವಿದ್ದ ಸ್ವತ್ತುಗಳಿಗೆ ಸಂಬಂಧಿಸಿದ ತೀರುವಳಿ ಪತ್ರ, ಕ್ರಯಪತ್ರ, ದಾನಪತ್ರ, ಪಹಣಿ, ಪಟ್ಟಾ ಸೇರಿದಂತೆ ವಿವಿಧ ಅಧಿಕೃತ ದಾಖಲೆಗಳು ಮತ್ತು ಗುರುತಿನ ದಾಖಲೆಗಳನ್ನು ಕಾನೂನುಬದ್ಧವಾಗಿ ಪಡೆದು ಪರಿಶೀಲಿಸಲಾಗಿದೆ. ಇದೇ ದಾಖಲೆಗಳನ್ನು ಆಧರಿಸಿ ಪುಸ್ತಕವನ್ನು ಸಿದ್ಧಪಡಿಸಲಾಗಿದೆ ಎಂದು ರಮೇಶ್‌ ವಿವರಿಸಿದರು.

ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಸಿ. ಸೋಮಶೇಖರ್‌, ಪತ್ರಕರ್ತ ಬಿ. ಗಣಪತಿ, ಲೇಖಕರಾದ ದೊಡ್ಡ ಹುಲ್ಲೂರು ರುಕ್ಕೋಜಿ, ಜಗನ್ನಾಥ್‌ ಬಹುಳೆ ಹಾಗೂ ಕನ್ನಡ ಚಲನಚಿತ್ರ ನಿರ್ದೇಶಕ ಪ್ರವೀಣ್‌ ನಾಯಕ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಭ್ರಷ್ಟರ ಬೇಟೆ

Recent Posts

‘ನಾನು ಪೋಸ್ಟ್ ಡಿಲೀಟ್ ಮಾಡುವುದಿಲ್ಲ’: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ಸಂಸದೆ ಪುತ್ರಿಯ ಬಹಿರಂಗ ಸವಾಲ್

ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ…

1 hour ago

ತುಮಕೂರಿನಲ್ಲಿ ಭೀಕರ ಹತ್ಯೆ: ರೌಡಿಶೀಟರ್ ಮಲ್ಲನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ತುಮಕೂರು ತಾಲೂಕಿನ ಬೆಳಗುಂಬ ರಸ್ತೆಯಲ್ಲಿರುವ ಗರುಡ ಕೆಫೆ ಸಮೀಪ ರೌಡಿಶೀಟರ್‌ವೊಬ್ಬನನ್ನು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಹತ್ಯೆಗೈದ ಘಟನೆ ಸೋಮವಾರ ಆತಂಕ…

1 hour ago

ತೊಡೆಯ ಮೇಲೆ ಮಹಿಳೆಯನ್ನು ಕೂರಿಸಿಕೊಂಡು ಆಟೋ ಓಡಿಸಿದ ಅಪ್ರಾಪ್ತ! ವೈರಲ್ ಆದ ವಿಡಿಯೊದ ಅಸಲಿ ಸತ್ಯ ಬಹಿರಂಗ

ಹೈದರಾಬಾದ್‌ನ ಚಾದರ್‌ಘಾಟ್ ಸೇತುವೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಹಿಳೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡೇ ಆಟೋರಿಕ್ಷಾ ಚಲಾಯಿಸುತ್ತಿರುವ ವಿಡಿಯೊ ಮತ್ತೊಮ್ಮೆ ಸಾಮಾಜಿಕ…

21 hours ago

ಪೊಲೀಸ್-ಪತ್ರಕರ್ತರ ಸೋಗಿನಲ್ಲಿ ₹60 ಸಾವಿರ ಸುಲಿಗೆ! ನಾಲ್ವರು ಯೂಟ್ಯೂಬರ್‌ಗಳು ಅಂದರ್

ಹುಕ್ಕೇರಿ ತಾಲ್ಲೂಕಿನಲ್ಲಿ ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಹುಕ್ಕೇರಿ…

21 hours ago

ವೇದಿಕೆಯಲ್ಲಿ ಪೊಲೀಸ್ ರಾಜೀನಾಮೆ ಘೋಷಣೆ ವೈರಲ್.. ಆದರೆ ಅಸಲಿ ಕಥೆ ಬೇರೆಯೇ!

ದೆಹಲಿ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು…

21 hours ago

ಎಸ್‌ಬಿಐ ಮ್ಯಾನೇಜರ್‌ಗೆ ಕಪಾಳಮೋಕ್ಷ? ಕರುಣಾನಿಧಿ ಮೊಮ್ಮಗಳು ಕಾಯಲ್ವಿಳಿ ವಿರುದ್ಧ ಎಫ್‌ಐಆರ್; ವೈರಲ್ ಆಯ್ತು ಸಿಸಿಟಿವಿ ವಿಡಿಯೋ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಮೊಮ್ಮಗಳು ಹಾಗೂ ಕೇಂದ್ರ ಸಚಿವ ಎಂ.ಕೆ. ಅಲಗಿರಿ ಅವರ ಪುತ್ರಿ ಕಾಯಲ್ವಿಳಿ…

22 hours ago