Categories: CrimeLatest

ಶಿರಸಿಯಲ್ಲಿ ಹಾವು ಕಚ್ಚಿ ಬಾಲಕ ಸಾವು – ವೈದ್ಯರ ನಿರ್ಲಕ್ಷ್ಯದ ಆರೋಪ

ಶಿರಸಿ: ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಹಳ್ಳಿಯಲ್ಲಿ ಹಾವು ಕಚ್ಚಿದ ಪರಿಣಾಮ ಬಾಲಕ ಮೃತಪಟ್ಟ ಘಟನೆ ದುಃಖಕ್ಕೆ ಕಾರಣವಾಗಿದ್ದು, ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದಲೇ ಮಗನನ್ನು ಕಳೆದುಕೊಂಡೆ ಎಂದು ಮೃತ ಬಾಲಕನ ತಂದೆ ಆರೋಪಿಸಿದ್ದಾರೆ.
ಮೃತ ಬಾಲಕನ ತಂದೆ ಪುಟ್ಟಪ್ಪ ನಾಯ್ಕ ತಮ್ಮ ನೋವನ್ನು ವ್ಯಕ್ತಪಡಿಸಿ, ರಾತ್ರಿ ವೇಳೆ ಇಬ್ಬರು ಮಕ್ಕಳಿಗೂ ವಾಂತಿ ಕಾಣಿಸಿಕೊಂಡಿತ್ತು. ಆರಂಭದಲ್ಲಿ ಆಹಾರ ಸಂಬಂಧಿತ ಸಮಸ್ಯೆಯಾಗಿರಬಹುದು ಎಂದು ಭಾವಿಸಿದ್ದರೂ, ಬಳಿಕ ಮನೆಯ ಸಮೀಪ ಹಾವು ಕಂಡುಬಂದ ಹಿನ್ನೆಲೆ ಬೆಳಗಿನ ಜಾವ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾಗಿ ತಿಳಿಸಿದ್ದಾರೆ.
ಆಸ್ಪತ್ರೆಗೆ ತಲುಪಿದ ಬಳಿಕ ಚಿಕಿತ್ಸೆ ಆರಂಭವಾದರೂ, ಮಗನ ಕಿವಿಯ ಹತ್ತಿರ ಕಚ್ಚಿದ ಗಾಯವಿದ್ದ ಮಾಹಿತಿ ನೀಡಿದರೂ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಎಂದು ಅವರು ಆರೋಪಿಸಿದ್ದಾರೆ. ಬಳಿಕ ಬಾಲಕನ ಆರೋಗ್ಯ ಹದಗೆಟ್ಟ ಕಾರಣ ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ನಂತರ ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾಗಿ ತಂದೆ ಹೇಳಿದ್ದಾರೆ. ಇದೇ ವೇಳೆ ಹಾವು ಕಚ್ಚಿದ್ದ ಮಗಳಿಗೆ ಚಿಕಿತ್ಸೆ ನೀಡಿ ಗುಣಮುಖಳಾಗಿರುವ ಮಾಹಿತಿ ಲಭ್ಯವಾಗಿದೆ.
ಘಟನೆಯ ಬಳಿಕ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಅನಂತಮೂರ್ತಿ ಹೆಗಡೆ, ಆರ್ಥಿಕ ನೆರವು ನೀಡಿದ್ದು, ಅಗತ್ಯವಿದ್ದಲ್ಲಿ ಬಾಲಕಿಯ ಮುಂದಿನ ಚಿಕಿತ್ಸೆಗೆ ಸಹ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ಘಟನೆ ಕುರಿತು ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳಿಂದ ಪರಿಶೀಲನೆ ನಡೆಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಭಟ್ಕಳದಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಬೈಕ್ ಡಿಕ್ಕಿ – ಯುವಕ ಸಾವು, ಸವಾರನ ಸ್ಥಿತಿ ಗಂಭೀರ

ಭಟ್ಕಳ: ಅತಿವೇಗದಲ್ಲಿ ಚಲಿಸುತ್ತಿದ್ದ ಬೈಕ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ…

2 hours ago

ತುಮಕೂರು ಹೆದ್ದಾರಿಯಲ್ಲಿ ದಾರುಣ ಘಟನೆ: ಯುವತಿಗೆ ಚಾಕು ಇರಿದು ಪೆಟ್ರೋಲ್ ಬಾಂಬ್ ಸಿಡಿಸಿಕೊಂಡ ಪ್ರೇಮಿ ಸಾವು

ತುಮಕೂರು: ಪ್ರೇಮಿಗಳ ನಡುವಿನ ಮನಸ್ತಾಪ ಭೀಕರ ತಿರುವು ಪಡೆದುಕೊಂಡ ಪರಿಣಾಮ, ಯುವಕನೊಬ್ಬ ಯುವತಿಗೆ ಚಾಕುವಿನಿಂದ ಹಲ್ಲೆ ನಡೆಸಿ ಬಳಿಕ ಕಾರಿನಲ್ಲೇ…

2 hours ago

ಶೀಲಾ ಶಂಕಿಸಿ ಮಕ್ಕಳ ಎದುರೇ ತಾಯಿಯ ಹತ್ಯೆ: ಪತ್ನಿಯನ್ನು ಕೊಡಲಿಯಿಂದ ಕೊಂದ ಪತಿಗೆ ಜೀವಾವಧಿ ಶಿಕ್ಷೆ

ಧಾರವಾಡ: ಪತ್ನಿಯ ಶೀಲದ ಮೇಲೆ ಅನುಮಾನ ವ್ಯಕ್ತಪಡಿಸಿ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದ ಪತಿಗೆ ಧಾರವಾಡದ ನಾಲ್ಕನೇ…

2 hours ago

ಮೊಹರಂ ಮೆರವಣಿಗೆ ಟಾರ್ಗೆಟ್?: 14,900 ವಿಷಪೂರಿತ ಕ್ಯಾಪ್ಸೂಲ್‌ಗಳೊಂದಿಗೆ ಪುಣೆ ಉದ್ಯಮಿ ಬಂಧನ

ಮುಂಬೈ: ಮುಹರಂ ಮೆರವಣಿಗೆಯ ವೇಳೆ ಸಾರ್ವಜನಿಕರಿಗೆ ವಿಷಪ್ರಾಶನ ಮಾಡಿಸಲು ಸಂಚು ರೂಪಿಸಲಾಗಿದೆ ಎಂಬ ಶಂಕೆಯ ಮೇರೆಗೆ ಮುಂಬೈ ಪೊಲೀಸರು ಭಾರೀ…

2 hours ago

ಜೆ.ಪಿ. ನಗರದಲ್ಲಿ ರೌಡಿಶೀಟರ್ ರಾಜುಬಾಯ್ ಭೀಕರ ಹತ್ಯೆ: ಜನಸಂದಣಿ ಮಧ್ಯೆ ದುಷ್ಕರ್ಮಿಗಳ ಅಟ್ಟಹಾಸ

ಬೆಂಗಳೂರು: ನಗರದ ಜೆ.ಪಿ. ನಗರದಲ್ಲಿ ಭಾನುವಾರ ಸಂಜೆ ರೌಡಿಶೀಟರ್ ರಾಜುಬಾಯ್ ಎಂಬಾತನನ್ನು ದುಷ್ಕರ್ಮಿಗಳ ಗುಂಪೊಂದು ಸಾರ್ವಜನಿಕರ ಕಣ್ಣೆದುರೇ ಅಟ್ಟಾಡಿಸಿ ಭೀಕರವಾಗಿ…

2 hours ago

ಹಳಿಯಾಳ ನಾಡಬಾಂಬ್ ಸ್ಫೋಟ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ

ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ನಡೆದ ನಾಡಬಾಂಬ್ (ಸ್ಫೋಟಕ ವಸ್ತು) ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ…

2 hours ago