Latest

ಬಾಲಕನ ನಾಪತ್ತೆ: ಸತ್ಯದ ಹುಡುಕಾಟಕ್ಕೆ ಮನೆ ಬಿಟ್ಟು ಹೋದ 17 ವರ್ಷದ ಮೋಹಿತ್ ಋಷಿ

ಬೆಂಗಳೂರು ನಗರದ ವಿದ್ಯಾರಣ್ಯಪುರದಲ್ಲಿ ಅಸಾಮಾನ್ಯ ಘಟನೆ ಸಂಭವಿಸಿದೆ. ಮೋಹಿತ್ ಋಷಿ (17), ವಿದ್ಯಾರಣ್ಯಪುರ ನಿವಾಸಿ ಹಾಗೂ ಬಿಇಎಲ್ ಕಾಲೇಜಿನಲ್ಲಿ ಬಿಕಾಂ ಶಿಕ್ಷಣ ಪಡೆಯುತ್ತಿದ್ದ ಬಾಲಕ, ಜ. 16ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ತನ್ನ ಮನೆ ಬಿಟ್ಟು ಹೋಗಿದ್ದಾನೆ. ಮನೆ ಬಿಟ್ಟು ಹೋಗುವ ಮೊದಲು, ಒಂದು ಪತ್ರ ಬರೆದಿಟ್ಟು ಹೋಗಿದ್ದು, ಆಲ್ಲಿ ಅವನು ತನ್ನ ಮನೋಭಾವ ಮತ್ತು ನಿರ್ಧಾರವನ್ನು ವಿವರಿಸಿದ್ದಾನೆ.

ಪತ್ರದ ಒಳತ
“ಅಸತ್ಯದ ಪ್ರಪಂಚದಲ್ಲಿ ಸತ್ಯ ಹುಡುಕಲು ಸತ್ಯದ ಪ್ರಪಂಚದ ಕಡೆ ಹೋಗುತ್ತಿದ್ದೇನೆ. ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಲು ಪ್ರಯತ್ನಿಸಬೇಡಿ. ಜಗತ್ತಿನ ಜನರ ಕಲ್ಯಾಣಕ್ಕಾಗಿ ದೇವರು ನನ್ನನ್ನ ಆರಿಸಿಕೊಂಡಿದ್ದಾರೆ. ಈ ರಾಜಜೀವನವನ್ನ ತೊರೆದು ಸತ್ಯದ ಪ್ರಪಂಚದ ಕಡೆ ಹೋಗುತ್ತಿದ್ದೇನೆ,” ಎಂದು ಪತ್ರದಲ್ಲಿ ಬರೆದಿಟ್ಟು, ತನ್ನ ಮೊಬೈಲ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾನೆ.

ಪೋಷಕರ ಕಳವಳ
ಮೋಹಿತ್ ಋಷಿಯ ತಂದೆ ಅರ್ಜುನ್ ಕುಮಾರ್, ಪುತ್ರನ ನಾಪತ್ತೆ ಕುರಿತು ಕೂಡಲೇ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಗನ ಸ್ಥಿತಿ ಬಗ್ಗೆ ಗಂಭೀರ ಚಿಂತೆ ವ್ಯಕ್ತಪಡಿಸಿರುವ ಪೋಷಕರು, ಸಾಮಾಜಿಕ ಜಾಲತಾಣಗಳ ಮೂಲಕ ಮೋಹಿತ್‌ನ ಭಾವಚಿತ್ರವನ್ನು ಹಂಚಿಕೊಂಡು, ಮಾಹಿತಿ ನೀಡುವಂತೆ ಜನಸಾಮಾನ್ಯರಿಗೆ ಮನವಿ ಮಾಡಿದ್ದಾರೆ.

ಪೊಲೀಸರು ಕ್ರಮ ಕೈಗೊಂಡಿದ್ದಾರೆ
ಕೊಡಿಗೇಹಳ್ಳಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು, ಹುಡುಕಾಟ ಪ್ರಾರಂಭಿಸಿದ್ದಾರೆ. ಈ ಮಧ್ಯೆ, ಮೋಹಿತ್‌ ಪತ್ರದಲ್ಲಿ ಬರೆದಿರುವ ವಿಷಯವು ಗೂಢವಾದ ಧಾರ್ಮಿಕ ಮತ್ತು ತಾತ್ವಿಕ ಅರ್ಥ ಹೊಂದಿದ್ದು, ಅವನ ಆತ್ಮಸ್ಥಿತಿ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜನಸಾಮಾನ್ಯರು ಅಥವಾ ಮಾಧ್ಯಮಗಳು ಮೋಹಿತ್ ಬಗ್ಗೆ ಯಾವುದೇ ಮಾಹಿತಿಯನ್ನು ಪತ್ತೆಹಚ್ಚಿದಲ್ಲಿ ತಕ್ಷಣವೇ ಪೊಲೀಸರಿಗೆ ಅಥವಾ ಪೋಷಕರಿಗೆ ಸಂಪರ್ಕಿಸಲು ಕೇಳಿಕೊಳ್ಳಲಾಗಿದೆ

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago