Latest

ಬಾಲಕನ ನಾಪತ್ತೆ: ಸತ್ಯದ ಹುಡುಕಾಟಕ್ಕೆ ಮನೆ ಬಿಟ್ಟು ಹೋದ 17 ವರ್ಷದ ಮೋಹಿತ್ ಋಷಿ

ಬೆಂಗಳೂರು ನಗರದ ವಿದ್ಯಾರಣ್ಯಪುರದಲ್ಲಿ ಅಸಾಮಾನ್ಯ ಘಟನೆ ಸಂಭವಿಸಿದೆ. ಮೋಹಿತ್ ಋಷಿ (17), ವಿದ್ಯಾರಣ್ಯಪುರ ನಿವಾಸಿ ಹಾಗೂ ಬಿಇಎಲ್ ಕಾಲೇಜಿನಲ್ಲಿ ಬಿಕಾಂ ಶಿಕ್ಷಣ ಪಡೆಯುತ್ತಿದ್ದ ಬಾಲಕ, ಜ. 16ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ತನ್ನ ಮನೆ ಬಿಟ್ಟು ಹೋಗಿದ್ದಾನೆ. ಮನೆ ಬಿಟ್ಟು ಹೋಗುವ ಮೊದಲು, ಒಂದು ಪತ್ರ ಬರೆದಿಟ್ಟು ಹೋಗಿದ್ದು, ಆಲ್ಲಿ ಅವನು ತನ್ನ ಮನೋಭಾವ ಮತ್ತು ನಿರ್ಧಾರವನ್ನು ವಿವರಿಸಿದ್ದಾನೆ.

ಪತ್ರದ ಒಳತ
“ಅಸತ್ಯದ ಪ್ರಪಂಚದಲ್ಲಿ ಸತ್ಯ ಹುಡುಕಲು ಸತ್ಯದ ಪ್ರಪಂಚದ ಕಡೆ ಹೋಗುತ್ತಿದ್ದೇನೆ. ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಲು ಪ್ರಯತ್ನಿಸಬೇಡಿ. ಜಗತ್ತಿನ ಜನರ ಕಲ್ಯಾಣಕ್ಕಾಗಿ ದೇವರು ನನ್ನನ್ನ ಆರಿಸಿಕೊಂಡಿದ್ದಾರೆ. ಈ ರಾಜಜೀವನವನ್ನ ತೊರೆದು ಸತ್ಯದ ಪ್ರಪಂಚದ ಕಡೆ ಹೋಗುತ್ತಿದ್ದೇನೆ,” ಎಂದು ಪತ್ರದಲ್ಲಿ ಬರೆದಿಟ್ಟು, ತನ್ನ ಮೊಬೈಲ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾನೆ.

ಪೋಷಕರ ಕಳವಳ
ಮೋಹಿತ್ ಋಷಿಯ ತಂದೆ ಅರ್ಜುನ್ ಕುಮಾರ್, ಪುತ್ರನ ನಾಪತ್ತೆ ಕುರಿತು ಕೂಡಲೇ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಗನ ಸ್ಥಿತಿ ಬಗ್ಗೆ ಗಂಭೀರ ಚಿಂತೆ ವ್ಯಕ್ತಪಡಿಸಿರುವ ಪೋಷಕರು, ಸಾಮಾಜಿಕ ಜಾಲತಾಣಗಳ ಮೂಲಕ ಮೋಹಿತ್‌ನ ಭಾವಚಿತ್ರವನ್ನು ಹಂಚಿಕೊಂಡು, ಮಾಹಿತಿ ನೀಡುವಂತೆ ಜನಸಾಮಾನ್ಯರಿಗೆ ಮನವಿ ಮಾಡಿದ್ದಾರೆ.

ಪೊಲೀಸರು ಕ್ರಮ ಕೈಗೊಂಡಿದ್ದಾರೆ
ಕೊಡಿಗೇಹಳ್ಳಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು, ಹುಡುಕಾಟ ಪ್ರಾರಂಭಿಸಿದ್ದಾರೆ. ಈ ಮಧ್ಯೆ, ಮೋಹಿತ್‌ ಪತ್ರದಲ್ಲಿ ಬರೆದಿರುವ ವಿಷಯವು ಗೂಢವಾದ ಧಾರ್ಮಿಕ ಮತ್ತು ತಾತ್ವಿಕ ಅರ್ಥ ಹೊಂದಿದ್ದು, ಅವನ ಆತ್ಮಸ್ಥಿತಿ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜನಸಾಮಾನ್ಯರು ಅಥವಾ ಮಾಧ್ಯಮಗಳು ಮೋಹಿತ್ ಬಗ್ಗೆ ಯಾವುದೇ ಮಾಹಿತಿಯನ್ನು ಪತ್ತೆಹಚ್ಚಿದಲ್ಲಿ ತಕ್ಷಣವೇ ಪೊಲೀಸರಿಗೆ ಅಥವಾ ಪೋಷಕರಿಗೆ ಸಂಪರ್ಕಿಸಲು ಕೇಳಿಕೊಳ್ಳಲಾಗಿದೆ

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

15 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

20 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

20 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

20 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

20 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago