Latest

ಬಾಲಕನ ನಾಪತ್ತೆ: ಸತ್ಯದ ಹುಡುಕಾಟಕ್ಕೆ ಮನೆ ಬಿಟ್ಟು ಹೋದ 17 ವರ್ಷದ ಮೋಹಿತ್ ಋಷಿ

ಬೆಂಗಳೂರು ನಗರದ ವಿದ್ಯಾರಣ್ಯಪುರದಲ್ಲಿ ಅಸಾಮಾನ್ಯ ಘಟನೆ ಸಂಭವಿಸಿದೆ. ಮೋಹಿತ್ ಋಷಿ (17), ವಿದ್ಯಾರಣ್ಯಪುರ ನಿವಾಸಿ ಹಾಗೂ ಬಿಇಎಲ್ ಕಾಲೇಜಿನಲ್ಲಿ ಬಿಕಾಂ ಶಿಕ್ಷಣ ಪಡೆಯುತ್ತಿದ್ದ ಬಾಲಕ, ಜ. 16ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ತನ್ನ ಮನೆ ಬಿಟ್ಟು ಹೋಗಿದ್ದಾನೆ. ಮನೆ ಬಿಟ್ಟು ಹೋಗುವ ಮೊದಲು, ಒಂದು ಪತ್ರ ಬರೆದಿಟ್ಟು ಹೋಗಿದ್ದು, ಆಲ್ಲಿ ಅವನು ತನ್ನ ಮನೋಭಾವ ಮತ್ತು ನಿರ್ಧಾರವನ್ನು ವಿವರಿಸಿದ್ದಾನೆ.

ಪತ್ರದ ಒಳತ
“ಅಸತ್ಯದ ಪ್ರಪಂಚದಲ್ಲಿ ಸತ್ಯ ಹುಡುಕಲು ಸತ್ಯದ ಪ್ರಪಂಚದ ಕಡೆ ಹೋಗುತ್ತಿದ್ದೇನೆ. ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಲು ಪ್ರಯತ್ನಿಸಬೇಡಿ. ಜಗತ್ತಿನ ಜನರ ಕಲ್ಯಾಣಕ್ಕಾಗಿ ದೇವರು ನನ್ನನ್ನ ಆರಿಸಿಕೊಂಡಿದ್ದಾರೆ. ಈ ರಾಜಜೀವನವನ್ನ ತೊರೆದು ಸತ್ಯದ ಪ್ರಪಂಚದ ಕಡೆ ಹೋಗುತ್ತಿದ್ದೇನೆ,” ಎಂದು ಪತ್ರದಲ್ಲಿ ಬರೆದಿಟ್ಟು, ತನ್ನ ಮೊಬೈಲ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾನೆ.

ಪೋಷಕರ ಕಳವಳ
ಮೋಹಿತ್ ಋಷಿಯ ತಂದೆ ಅರ್ಜುನ್ ಕುಮಾರ್, ಪುತ್ರನ ನಾಪತ್ತೆ ಕುರಿತು ಕೂಡಲೇ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಗನ ಸ್ಥಿತಿ ಬಗ್ಗೆ ಗಂಭೀರ ಚಿಂತೆ ವ್ಯಕ್ತಪಡಿಸಿರುವ ಪೋಷಕರು, ಸಾಮಾಜಿಕ ಜಾಲತಾಣಗಳ ಮೂಲಕ ಮೋಹಿತ್‌ನ ಭಾವಚಿತ್ರವನ್ನು ಹಂಚಿಕೊಂಡು, ಮಾಹಿತಿ ನೀಡುವಂತೆ ಜನಸಾಮಾನ್ಯರಿಗೆ ಮನವಿ ಮಾಡಿದ್ದಾರೆ.

ಪೊಲೀಸರು ಕ್ರಮ ಕೈಗೊಂಡಿದ್ದಾರೆ
ಕೊಡಿಗೇಹಳ್ಳಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು, ಹುಡುಕಾಟ ಪ್ರಾರಂಭಿಸಿದ್ದಾರೆ. ಈ ಮಧ್ಯೆ, ಮೋಹಿತ್‌ ಪತ್ರದಲ್ಲಿ ಬರೆದಿರುವ ವಿಷಯವು ಗೂಢವಾದ ಧಾರ್ಮಿಕ ಮತ್ತು ತಾತ್ವಿಕ ಅರ್ಥ ಹೊಂದಿದ್ದು, ಅವನ ಆತ್ಮಸ್ಥಿತಿ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜನಸಾಮಾನ್ಯರು ಅಥವಾ ಮಾಧ್ಯಮಗಳು ಮೋಹಿತ್ ಬಗ್ಗೆ ಯಾವುದೇ ಮಾಹಿತಿಯನ್ನು ಪತ್ತೆಹಚ್ಚಿದಲ್ಲಿ ತಕ್ಷಣವೇ ಪೊಲೀಸರಿಗೆ ಅಥವಾ ಪೋಷಕರಿಗೆ ಸಂಪರ್ಕಿಸಲು ಕೇಳಿಕೊಳ್ಳಲಾಗಿದೆ

nazeer ahamad

Recent Posts

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

2 hours ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

3 hours ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

3 hours ago

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

13 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

13 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

16 hours ago