Latest

ಕೆಎಸ್ಆರ್ಟಿಸಿ ಬಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಧೈರ್ಯಶಾಲಿ ತಾಯಿ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಸಮೀಪದ ಘಟನೆ ಮಾನವೀಯತೆ ಹಾಗೂ ಮಾತೃತ್ವದ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾಗಿದೆ. ಕೆಕೆಆರ್‌ಟಿಸಿ ಬಸ್‌ವೊಂದು ಅಚಾನಕ್ ಹೆರಿಗೆ ಸ್ಥಳವಾಗಿ ಬದಲಾಯಿಸಿದ್ದು, ಗರ್ಭಿಣಿಯೊಬ್ಬರು ಪ್ರಯಾಣದ ಮಧ್ಯೆ ಮಗುವಿಗೆ ಜನ್ಮ ನೀಡಿದ ಸನ್ನಿವೇಶ ಮನುಷ್ಯನ ಸಹಾನುಭೂತಿಯ ಗೆಲುವಿನ ಕಥೆಯಾಗಿದೆ.

ಹೊಂಬಳಕಲ್ ಗ್ರಾಮದ ಶಾಂಭವಿ ಎಂಬ ಮಹಿಳೆ ತಮ್ಮ ಊರಿಗೆ ವಾಪಸ್ ತೆರಳುವ ವೇಳೆ, ಬಸ್‌ನಲ್ಲೇ ತೀವ್ರ ಹೆರಿಗೆ ನೋವು ಅನುಭವಿಸಿದರು. ಈ ಪರಿಸ್ಥಿತಿಯನ್ನು ಗಮನಿಸಿದ ಸಹ ಪ್ರಯಾಣಿಕರು ಹಾಗೂ ಬಸ್‌ನಲ್ಲಿದ್ದ ಆಶಾ ಕಾರ್ಯಕರ್ತೆ ಮೇರಿ ಧೈರ್ಯದಿಂದ ಮುಂದಾಗಿ, ಶಾಂಭವಿಗೆ ಬಸ್‌ನಲ್ಲೇ ಹೆರಿಗೆ ಮಾಡಿಸಿ ಹೆಣ್ಣು ಮಗುವಿಗೆ ಜನ್ಮ ನೀಡುವಲ್ಲಿ ಸಹಾಯ ಮಾಡಿದರು.

ಘಟನೆಯ ನಂತರ ತಕ್ಷಣವೇ ತಾಯಿ ಮತ್ತು ಮಗುವನ್ನು ಮುದಗಲ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ವೈದ್ಯರು ತಕ್ಷಣ ಚಿಕಿತ್ಸೆ ನೀಡಿದ್ದು, ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

ಬಸ್‌ನಲ್ಲಿ ನಡೆದ ಈ ಅಪರೂಪದ ಹೆರಿಗೆ ಘಟನೆ ಸಾರ್ವಜನಿಕರಲ್ಲಿ ಆಶ್ಚರ್ಯ ಮತ್ತು ಗೌರವದ ಭಾವನೆ ಮೂಡಿಸಿದ್ದು, ಆಶಾ ಕಾರ್ಯಕರ್ತೆ ಮೇರಿಯ ಕಾರ್ಯಪ್ರವೃತ್ತಿ ಎಲ್ಲರಿಂದಲೂ ಪ್ರಶಂಸೆಗೆ ಪಾತ್ರವಾಗಿದೆ.

ಈ ಘಟನೆಯು ಮಹಿಳೆಯ ಧೈರ್ಯ, ಆರೋಗ್ಯ ಸೇವೆಯ ತುರ್ತು ಪ್ರತಿಕ್ರಿಯೆ ಮತ್ತು ಮಾನವೀಯ ಸಹಾಯದ ಉತ್ತಮ ಉದಾಹರಣೆಯಾಗಿ ನೆನಪಾಗಲಿದೆ.

nazeer ahamad

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

2 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 months ago