Latest

“ಮೇಘನಾ ರಾಜ್ – ವಿಜಯ ರಾಘವೇಂದ್ರ ಮದುವೆ ವದಂತಿಗೆ ಬ್ರೇಕ್: ಇಬ್ಬರಿಬ್ಬರಿಂದ ಖಡಕ್ ಸ್ಪಷ್ಟನೆ”

ಇತ್ತೀಚೆಗಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮೇಘನಾ ರಾಜ್ ಮತ್ತು ವಿಜಯ ರಾಘವೇಂದ್ರ ಇಬ್ಬರೂ ಮದುವೆಯಾಗಲಿದ್ದಾರೆ ಎಂಬ ವದಂತಿ ಭಾರೀ ವೈರಲ್ ಆಗಿತ್ತು. ಈ ಬಗ್ಗೆ ಹಲವು ಊಹಾಪೋಹಗಳು ಹರಿದಾಡುತ್ತಿದ್ದರೆ, ಇದೀಗ ಇವರೆಗೆ ಮೌನ ವಹಿಸಿದ್ದ ಇಬ್ಬರು ಕಲಾವಿದರು ಸ್ಪಷ್ಟನೆ ನೀಡಿರುವ ಮೂಲಕ ವದಂತಿಗಳಿಗೆ ತೆರೆ ಹಾಕಿದ್ದಾರೆ.

ವಿಜಯ ರಾಘವೇಂದ್ರ ತಮ್ಮ ಪ್ರತಿಕ್ರಿಯೆಯಲ್ಲಿ, “ಮೇಘನಾ ನನ್ನ ಗೆಳತಿ ಮಾತ್ರ. ನಾವು ಒಟ್ಟಾಗಿ ಕೆಲ ಸಿನಿಮಾ ಯೋಜನೆಗಳಲ್ಲಿ ಭಾಗವಹಿಸಿದ್ದೇವೆ ಅಷ್ಟೆ. ಮದುವೆ ವಿಚಾರದ ಸುದ್ದಿ ಸಂಪೂರ್ಣ ಸುಳ್ಳು. ನಾನು ಇಂತಹ ಯೋಚನೆ ಕೂಡಾ ಮಾಡಿಲ್ಲ,” ಎಂದು ಖಂಡಿತವಾಗಿ ಹೇಳಿಕೊಂಡಿದ್ದಾರೆ.

ಇದೇ ಹಾದಿಯಲ್ಲಿ ಮೇಘನಾ ರಾಜ್ ಕೂಡಾ ಪ್ರತಿಕ್ರಿಯೆ ನೀಡಿದ್ದು, “ಈ ಸುದ್ದಿ ಶುದ್ಧ ಸುಳ್ಳು. ನಾನು ವಿಜಯರಾಘವೇಂದ್ರ ಅವರನ್ನು ಮದುವೆಯಾಗುವ ಬಗ್ಗೆ ಯಾವುದೇ ರೀತಿಯ ಯೋಚನೆಯೂ ಮಾಡಿಲ್ಲ. ನಾವು ಸ್ನೇಹಿತರು ಅಷ್ಟೆ. ನಮ್ಮ ನಡುವೆ ವೈಯಕ್ತಿಕ ಸಂಬಂಧವಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ.

ಇಂತಹ ತಾರ್ಕಿಕರ ನಿರಾಧಾರ ಫೇಕ್  ಸುದ್ದಿಗಳಿಂದ ಬೇಸತ್ತಿರುವ ಮೇಘನಾ ಮತ್ತು ವಿಜಯ, ಇಂತಹ ವದಂತಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಪ್ರೆಸ್ ಮೀಟ್ ಮೂಲಕ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸುವ ಸಾಧ್ಯತೆಯೂ ಇದೆ.

 

nazeer ahamad

Recent Posts

400 ವರ್ಷ ಹಿಂದಿನ ರಾಜನೆಂದು ಹೇಳುತ್ತಿರುವ 10 ವರ್ಷದ ಬಾಲಕ: ಪುನರ್ಜನ್ಮದ ರಹಸ್ಯವೇ?

ಪುನರ್ಜನ್ಮ ಎಂಬುದು ಇಂದಿಗೂ ವಿಜ್ಞಾನಕ್ಕೆ ಸವಾಲಾಗಿರುವ ಒಂದು ಗೂಢ ವಿಷಯ. ಕೆಲವೊಮ್ಮೆ ಸಣ್ಣ ಮಕ್ಕಳು ತಮ್ಮ ಹಿಂದಿನ ಜನ್ಮದ ಬಗ್ಗೆ…

12 hours ago

ಅನೈತಿಕ ಸಂಬಂಧ: ಪವಿತ್ರಾಳನ್ನು ಪಡೆಯಲು ಆಕೆಯ ಗಂಡನನ್ನೇ ಕೊಂದ ಪ್ರಿಯಕರ..!

ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ಅನೈತಿಕ ಸಂಬಂಧದ ಹಿನ್ನೆಲೆ ನಡೆದ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಿಯತಮೆಯ…

12 hours ago

ಪೂಲ್‌ನಲ್ಲಿ ಬಾಯ್ ಫ್ರೆಂಡ್ ನೊಂದಿಗೆ ಮಹಿಳೆ ರೋಮ್ಯಾನ್ಸ್: ದಿಡೀರನೆ ಬಂದ ಗಂಡ..! ವೈರಲ್ ವಿಡಿಯೋ

ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಹಿಳೆ ತನ್ನ ಬಾಯ್‌ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…

18 hours ago

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

22 hours ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

22 hours ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

22 hours ago