Categories: CorruptionLatest

ಫೋನ್‌ಪೇ ಮೂಲಕ ಲಂಚ ಸ್ವೀಕಾರ: ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಕಲಬುರಗಿ: ಸರ್ಕಾರದ ವಸತಿ ಯೋಜನೆಯ ಅನುದಾನ ಬಿಡುಗಡೆ ಮಾಡಲು ಫಲಾನುಭವಿಯಿಂದ ಫೋನ್‌ಪೇ ಮೂಲಕ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್‌ನನ್ನು ಕಲಬುರಗಿ ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಹನಿಕೇರಾ ಗ್ರಾಮದ ರಾಮನಾಯಕ ತಾಂಡಾದ ನಿವಾಸಿ ಸಿಖಂದರ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅವರ ಅಕ್ಕ ಸವಿತಾ ಅವರಿಗೆ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆ ಅಡಿಯಲ್ಲಿ ಮನೆ ಮಂಜೂರಾಗಿದ್ದು, ಯೋಜನೆಯ 3ನೇ ಹಾಗೂ 4ನೇ ಕಂತಿನ ಅನುದಾನ ಬಿಡುಗಡೆ ಮಾಡಲು ಕರದಾಳ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಸಂತೋಷ ರಾಠೋಡ ₹22 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ನಂತರ ಮಾತುಕತೆಯ ವೇಳೆ ₹15 ಸಾವಿರವನ್ನು ತನ್ನ ಫೋನ್‌ಪೇ ಖಾತೆಗೆ ವರ್ಗಾಯಿಸುವಂತೆ ಆರೋಪಿ ಸೂಚಿಸಿದ್ದಾನೆ. ಅದರಂತೆ ದೂರುದಾರರು ಡಿಜಿಟಲ್ ಪಾವತಿ ಮಾಡಿದ ವೇಳೆ, ಪೂರ್ವಸಿದ್ಧತೆಯೊಂದಿಗೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಸಂತೋಷ ರಾಠೋಡನನ್ನು ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಬಂಧಿಸಿದ್ದಾರೆ.

ಈ ದಾಳಿ ಕಲಬುರಗಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಇನ್ಸ್‌ಪೆಕ್ಟರ್ ರಾಜಶೇಖರ ಬಡದೇಸಾರ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು.

ಬಂಧಿತ ಆರೋಪಿಯನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು, ಮುಂದಿನ ತನಿಖೆ ಪೂರ್ಣಗೊಳಿಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಲಾರಿ ಕ್ಯಾಬಿನ್‌ನಿಂದ ₹20 ಸಾವಿರ ಕಳ್ಳತನ: 13 ಕಿ.ಮೀ. ಬೆನ್ನಟ್ಟಿ ಎಸ್‌ಐ ಹಿಡಿದ ಚಾಲಕ, ಅಮಾನತು ಆದೇಶ!

ಕರ್ತವ್ಯ ನಿರ್ವಹಿಸಬೇಕಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ವೊಬ್ಬರು ಲಾರಿ ಕ್ಯಾಬಿನ್‌ನಿಂದ ಹಣ ಕದ್ದ ಆರೋಪದಲ್ಲಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ಭಾರೀ…

5 hours ago

ಕುಂದಾಪುರದ ಎನ್‌ಎಚ್-66ರಲ್ಲಿ ಭೀಕರ ಅಪಘಾತ: ಭಟ್ಕಳದ ಯುವಕ ಸೇರಿ ಇಬ್ಬರು ದುರ್ಮರಣ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತ್ರಾಸಿ ಬೀಚ್ ಸಮೀಪದ ಅರಮ ದೇವಸ್ಥಾನದ ಎದುರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸಂಭವಿಸಿದ ಭೀಕರ ರಸ್ತೆ…

5 hours ago

ಅತ್ತೆ–ಸೋದರಳಿಯ ಅಕ್ರಮ ಸಂಬಂಧದ ರಕ್ತಸಿಕ್ತ ಅಂತ್ಯ: ಬಾಡಿಗೆ ಮನೆಯಲ್ಲಿ ಯುವಕನ ಶವ, ರೈಲಿಗೆ ಸಿಲುಕಿ ಮಹಿಳೆ ಸಾವು!

ಪ್ರೀತಿ ಮತ್ತು ಅಕ್ರಮ ಸಂಬಂಧಗಳ ಪರಿಣಾಮ ಎಷ್ಟು ಭೀಕರವಾಗಿರಬಹುದು ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅತ್ತೆ…

5 hours ago

ಬ್ಯೂಟಿ ಪಾರ್ಲರ್ ಬೆಡಗಿಯ ಸಹವಾಸ ಕುಟುಂಬವೇ ಸರ್ವನಾಶ; ಪ್ರಿಯತಮೆಯ ಹತ್ಯೆ, ಪ್ರಿಯಕರ ಆತ್ಮಹತ್ಯೆ..!

ಮೊದಲ ನೋಟಕ್ಕೆ ಸಾಮಾನ್ಯ ಸ್ನೇಹದಂತೆ ಆರಂಭವಾದ ಪರಿಚಯ, ಬಳಿಕ ಪ್ರೇಮ ಸಂಬಂಧವಾಗಿ ಬೆಳೆದು ಕೊನೆಗೆ ಭೀಕರ ಕೊಲೆ ಮತ್ತು ಆತ್ಮಹತ್ಯೆಯಲ್ಲಿ…

11 hours ago

ಬ್ಯಾಲ್ಯಾಳದಲ್ಲಿ ಕಳಪೆ ಸಿಸಿ ರಸ್ತೆ ಕಾಮಗಾರಿ ಆರೋಪ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರ ಆಕ್ರೋಶ

ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಸಿಸಿ ರಸ್ತೆ ಕಾಮಗಾರಿಯಲ್ಲಿ ವ್ಯಾಪಕ ಅಕ್ರಮ ಹಾಗೂ…

14 hours ago

ನ್ಯಾಯಾಧೀಶರೊಂದಿಗೆ ಅನುಚಿತ ವರ್ತನೆ: ಅರಕಲಗೂಡು ಪೊಲೀಸ್ ಸಿಬ್ಬಂದಿ ಜಗದೀಶ್ ಅಮಾನತು

ಹಾಸನ ಜಿಲ್ಲೆಯ ಅರಕಲಗೂಡು ಪೊಲೀಸ್ ಠಾಣೆಯ ಸಿಬ್ಬಂದಿ ಜಗದೀಶ್ ಅವರನ್ನು ಕರ್ತವ್ಯ ಲೋಪ, ಮೇಲಾಧಿಕಾರಿಗಳ ಆದೇಶ ಉಲ್ಲಂಘನೆ ಹಾಗೂ ನ್ಯಾಯಾಧೀಶರೊಂದಿಗೆ…

1 day ago