Latest

ಲಂಚದ ಬೇಡಿಕೆ: ತಾಳಗುಪ್ಪ ಆರ್‌ಐ ಮಂಜುನಾಥ್ ರೆಡ್ ಎಂಡ್ ಆಗಿ ಸಿಕ್ಕಿಬಿದ್ದ ಲೋಕಾಯುಕ್ತ ಬೆಲೆಗೆ.

ಶಿವಮೊಗ್ಗ: ಜಮೀನನ್ನು ಸಮತಟ್ಟು ಮಾಡಲು ಅನುಮತಿ ನೀಡುವದಕ್ಕಾಗಿ ರೈತರಿಂದ ಲಂಚ ಸ್ವೀಕರಿಸುತ್ತಿದ್ದ ತಾಳಗುಪ್ಪದ ಆರ್‌ಐ ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಅವರು 3,000 ರೂ. ಲಂಚದ ಹಣ ಪಡೆದುಕೊಳ್ಳುತ್ತಿದ್ದ ಸಂದರ್ಭದಲ್ಲೇ ಇಂದು ಮಧ್ಯಾಹ್ನ ಕಾರ್ಯಾಚರಣೆ ನಡೆಯಿತು.

ಶಿವಮೊಗ್ಗ ಜಿಲ್ಲಾ ಲೋಕಾಯುಕ್ತದ ಪತ್ರಿಕಾ ಪ್ರಕಟಣೆಯ ಪ್ರಕಾರ, ಶಿರೂರು ಹೋಬಳಿಯ ಮುಂಡಿಗೆಹಳ್ಳಿ ನಿವಾಸಿ ಎಚ್.ಎಸ್. ಕೃಷ್ಣಮೂರ್ತಿ ಎಂಬ ರೈತ ಈ ಕುರಿತು ದೂರು ನೀಡಿದ್ದರು. ಅವರು ಶಿರೂರು ಗ್ರಾಮದ ಸರ್ವೆ ನಂ.125ರಲ್ಲಿ ತಗ್ಗು-ಉಬ್ಬು ಇರುವ ಸುಮಾರು ಎರಡು ಎಕರೆ ಜಮೀನನ್ನು ಸಮತಟ್ಟು ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಆರ್‌ಐ ಮಂಜುನಾಥ್, ಜಮೀನಿನ ಕೆಲಸ ನಿಲ್ಲಿಸಲು ಒತ್ತಾಯಿಸಿದ್ದು, ಮುಂದಿನ ಅನುಮತಿಗಾಗಿ ಲಂಚವನ್ನು ಕೇಳಿದ್ದಾಗಿ ರೈತ ತಿಳಿಸಿದ್ದಾರೆ.

ದೂರುದಾರ ಕೃಷ್ಣಮೂರ್ತಿಯ ಪ್ರಕಾರ, ಮಂಜುನಾಥ್ ಮೊದಲು ಮಾರ್ಚ್ 20ರಂದು ಫೋನ್‌ಪೇ ಮೂಲಕ 2,500 ರೂ. ಮತ್ತು ಏಪ್ರಿಲ್ 2ರಂದು 500 ರೂ. ಪಡೆದುಕೊಂಡಿದ್ದು, ಮತ್ತೆ 3,000 ರೂ. ನೀಡುವಂತೆ ಒತ್ತಾಯಿಸಿದ್ದರು. ಇದನ್ನು ಆಧಾರ ಮಾಡಿಕೊಂಡು ಲೋಕಾಯುಕ್ತ ಪೊಲೀಸ್ ತಂಡ, ಇಂದು ಮಧ್ಯಾಹ್ನ 3.05ರ ಸುಮಾರಿಗೆ ಸಾಗರ ತಾಲ್ಲೂಕಿನ ಶಿರೂರು ಆಲಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 206ರ ಬಳಿ ದಾಳಿ ನಡೆಸಿ, ರೈತನಿಂದ ಹಣ ಸ್ವೀಕರಿಸುತ್ತಿದ್ದ ಆರ್‌ಐ ಮಂಜುನಾಥ್ ಅವರನ್ನು ಬಲೆ ಹಾಕಿದರು.

ಈ ಸಂಬಂಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ತಿದ್ದುಪಡಿ ಕಾಯ್ದೆ 2018ರ ಸೆಕ್ಷನ್ 7(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಬಸಪ್ಪ ಎಲ್. ಕುಸಲಾಪುರ ನೇತೃತ್ವದಲ್ಲಿ ಮುಂದಿನ ತನಿಖೆ ನಡೆಯುತ್ತಿದೆ.

 

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

3 hours ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

8 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

8 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

8 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

9 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

9 hours ago