ಶಿವಮೊಗ್ಗ: ಜಮೀನನ್ನು ಸಮತಟ್ಟು ಮಾಡಲು ಅನುಮತಿ ನೀಡುವದಕ್ಕಾಗಿ ರೈತರಿಂದ ಲಂಚ ಸ್ವೀಕರಿಸುತ್ತಿದ್ದ ತಾಳಗುಪ್ಪದ ಆರ್ಐ ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಅವರು 3,000 ರೂ. ಲಂಚದ ಹಣ ಪಡೆದುಕೊಳ್ಳುತ್ತಿದ್ದ ಸಂದರ್ಭದಲ್ಲೇ ಇಂದು ಮಧ್ಯಾಹ್ನ ಕಾರ್ಯಾಚರಣೆ ನಡೆಯಿತು.
ಶಿವಮೊಗ್ಗ ಜಿಲ್ಲಾ ಲೋಕಾಯುಕ್ತದ ಪತ್ರಿಕಾ ಪ್ರಕಟಣೆಯ ಪ್ರಕಾರ, ಶಿರೂರು ಹೋಬಳಿಯ ಮುಂಡಿಗೆಹಳ್ಳಿ ನಿವಾಸಿ ಎಚ್.ಎಸ್. ಕೃಷ್ಣಮೂರ್ತಿ ಎಂಬ ರೈತ ಈ ಕುರಿತು ದೂರು ನೀಡಿದ್ದರು. ಅವರು ಶಿರೂರು ಗ್ರಾಮದ ಸರ್ವೆ ನಂ.125ರಲ್ಲಿ ತಗ್ಗು-ಉಬ್ಬು ಇರುವ ಸುಮಾರು ಎರಡು ಎಕರೆ ಜಮೀನನ್ನು ಸಮತಟ್ಟು ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಆರ್ಐ ಮಂಜುನಾಥ್, ಜಮೀನಿನ ಕೆಲಸ ನಿಲ್ಲಿಸಲು ಒತ್ತಾಯಿಸಿದ್ದು, ಮುಂದಿನ ಅನುಮತಿಗಾಗಿ ಲಂಚವನ್ನು ಕೇಳಿದ್ದಾಗಿ ರೈತ ತಿಳಿಸಿದ್ದಾರೆ.
ದೂರುದಾರ ಕೃಷ್ಣಮೂರ್ತಿಯ ಪ್ರಕಾರ, ಮಂಜುನಾಥ್ ಮೊದಲು ಮಾರ್ಚ್ 20ರಂದು ಫೋನ್ಪೇ ಮೂಲಕ 2,500 ರೂ. ಮತ್ತು ಏಪ್ರಿಲ್ 2ರಂದು 500 ರೂ. ಪಡೆದುಕೊಂಡಿದ್ದು, ಮತ್ತೆ 3,000 ರೂ. ನೀಡುವಂತೆ ಒತ್ತಾಯಿಸಿದ್ದರು. ಇದನ್ನು ಆಧಾರ ಮಾಡಿಕೊಂಡು ಲೋಕಾಯುಕ್ತ ಪೊಲೀಸ್ ತಂಡ, ಇಂದು ಮಧ್ಯಾಹ್ನ 3.05ರ ಸುಮಾರಿಗೆ ಸಾಗರ ತಾಲ್ಲೂಕಿನ ಶಿರೂರು ಆಲಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 206ರ ಬಳಿ ದಾಳಿ ನಡೆಸಿ, ರೈತನಿಂದ ಹಣ ಸ್ವೀಕರಿಸುತ್ತಿದ್ದ ಆರ್ಐ ಮಂಜುನಾಥ್ ಅವರನ್ನು ಬಲೆ ಹಾಕಿದರು.
ಈ ಸಂಬಂಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ತಿದ್ದುಪಡಿ ಕಾಯ್ದೆ 2018ರ ಸೆಕ್ಷನ್ 7(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವೀರಬಸಪ್ಪ ಎಲ್. ಕುಸಲಾಪುರ ನೇತೃತ್ವದಲ್ಲಿ ಮುಂದಿನ ತನಿಖೆ ನಡೆಯುತ್ತಿದೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…