Latest

ಕಾರು ಬಿಡಿಸಲು ಲಂಚ: ಮಂಗಳೂರಿನಲ್ಲಿ ಟ್ರಾಫಿಕ್ ಪೊಲೀಸ್ ತಸ್ಲಿಂ ರೆಡ್‌ಹ್ಯಾಂಡ್ ಲೋಕಾಯುಕ್ತ ಬಲೆಗೆ

ಮಂಗಳೂರು (ಜು.11): ಮಂಗಳೂರಿನ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಸ್ಲಿಂ, ವಾಹನ ಬಿಟ್ಟುಕೊಡುವ ಹೆಸರಲ್ಲಿ ಲಂಚ ಪಡೆಯುತ್ತಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಲೋಕಾಯುಕ್ತ ಪೊಲೀಸರು ಈ ವ್ಯಕ್ತಿಯನ್ನು 5 ಸಾವಿರ ರುಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ರೆಡ್‌ ಹ್ಯಾಂಡ್‌ ಆಗಿ ಬಂಧಿಸಿದ್ದಾರೆ.

ಅಪಘಾತದಿಂದ ಆರಂಭವಾದ ಪ್ರಕರಣ

ಇತ್ತೀಚೆಗೆ ಮಂಗಳೂರಿನ ನಂತೂರು ಸರ್ಕಲ್‌ನಲ್ಲಿ ದೂರುದಾರರ ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ಈ ಸಂಬಂಧ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ಭಾಗವಾಗಿ ದೂರುದಾರರ ಕಾರು ಠಾಣೆಯ ವಶದಲ್ಲಿತ್ತು.

50 ಸಾವಿರ ರು. ಲಂಚದ ಬೇಡಿಕೆ

ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ತಸ್ಲಿಂ ಎಂಬವರು ಕಾರು ಬಿಡುಗಡೆಗೊಳಿಸಲು 50 ಸಾವಿರ ರುಪಾಯಿ ಲಂಚದ ಬೇಡಿಕೆ ಇಟ್ಟಿದ್ದಾರೆ. ವಕೀಲರ ಮೂಲಕ ದೂರುದಾರರು ಅನುಮತಿ ಪಡೆದು ಸಹಿ ಹಾಕಿದ್ದರೂ ಕಾರು ಬಿಟ್ಟುಕೊಡಲಾಗಿಲ್ಲ. ಬಳಿಕ, ದೂರುದಾರರ ಮೊಬೈಲ್‌ ಫೋನ್‌ ಬಲವಂತವಾಗಿ ವಶಪಡಿಸಿಕೊಳ್ಳಲಾಗಿದೆ.

ಮೊಬೈಲ್‌ಗೆ ಬದಲಾಗಿ ಲೈಸನ್ಸ್‌

ಮೊಬೈಲ್ ಹಿಂದಿರುಗಿಸಲು ಅವರು ಮೊದಲಿಗೆ 50 ಸಾವಿರ, ನಂತರ ಮೂಲ ಲೈಸನ್ಸ್‌ ನೀಡುವಂತೆ ಸೂಚಿಸಿದ್ದಾರೆ. ದೂರುದಾರರು ಒರಿಜಿನಲ್ ಲೈಸನ್ಸ್ ನೀಡಿ ಮೊಬೈಲ್‌ ಹಿಂತಿರುಗಿಸಿಕೊಂಡರೂ, ನಂತರ ಮತ್ತೆ 30 ಸಾವಿರ ರುಪಾಯಿಗೆ ಒತ್ತಡ ಹಾಕಲಾಗಿದೆ.

5 ಸಾವಿರ ಇಲ್ಲದಿದ್ರೆ ಠಾಣೆಗೂ ಕಡೆಗೆ ಬರಬೇಡ!”

ಜುಲೈ 9 ರಂದು ದೂರುದಾರರು ಠಾಣೆಗೆ ತೆರಳಿದಾಗ, ತಸ್ಲಿಂ ಅವರು 10 ಸಾವಿರ ರು. ಕೊಡಬೇಕೆಂದು ಹೇಳಿದರು. ದೂರುದಾರರು ತಮ್ಮಲ್ಲಿ ಕೇವಲ 500 ರು. ಇದೆ ಎಂದಾಗ, “5 ಸಾವಿರ ಇಲ್ಲದಿದ್ರೆ ಠಾಣೆ ಕಕಡೆಗೆ ಬರಬೇಡ ” ಎಂದು ಗದರಿಸಿದ್ದಾರೆ.

ಲೋಕಾಯುಕ್ತ ಬಲೆಗೆ ಬಿದ್ದ ತಸ್ಲಿಂ

ಈ ಎಲ್ಲಾ ಬಡಾವಣೆಗಳ ಕುರಿತು ದೂರು ನೀಡಿದ ದೂರುದಾರರ ಮಾಹಿತಿ ಮೇರೆಗೆ ಲೋಕಾಯುಕ್ತ ಪೊಲೀಸರು ಜಾಲ ಬೀಸಿದರು. ಗುರುವಾರ, ದೂರುದಾರರಿಂದ 5 ಸಾವಿರ ಲಂಚದ ಹಣವನ್ನು ಪಡೆಯುತ್ತಿದ್ದ ವೇಳೆ ತಸ್ಲಿಂ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಪ್ರಕರಣದಲ್ಲಿ ಮತ್ತೊಬ್ಬ ಠಾಣಾ ಸಿಬ್ಬಂದಿ ವಿನೋದ್ ಅವರ ಪಾತ್ರವನ್ನೂ ಪರಿಶೀಲಿಸಲಾಗುತ್ತಿದೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ತಂಡ

ಈ ಕಾರ್ಯಾಚರಣೆಯನ್ನು ಮಂಗಳೂರು ಲೋಕಾಯುಕ್ತ ಪೊಲೀಸ್‌ ಅಧೀಕ್ಷಕರ (ಪ್ರಭಾರ) ಕುಮಾರಚಂದ್ರ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ಡಾ. ಗಾನ ಪಿ. ಕುಮಾರ್, ಸುರೇಶ್ ಕುಮಾರ್ ಪಿ., ಇನ್ಸ್‌ಪೆಕ್ಟರ್‌ ಭಾರತಿ ಜಿ., ಚಂದ್ರಶೇಖರ್ ಕೆ.ಎನ್. ಮತ್ತು ಇನ್ನಿತರ ಸಿಬ್ಬಂದಿ ಯಶಸ್ವಿಯಾಗಿ ನಡೆಸಿದರು.

ಈ ಘಟನೆ ಮತ್ತೊಮ್ಮೆ ಪೊಲೀಸ್ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಮುಖವಾಡವನ್ನು ಬೆಳೆಸಿದ್ದು, ತನಿಖೆ ಮುಂದುವರೆದಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

10 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

10 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

10 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

10 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago