ಮಂಗಳೂರು: ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲಂಚ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿ ಶಿವಲಿಂಗ ಕೊಂಡಗುಳಿ ಅವರಿಗೆ 1 ಕೋಟಿ ರೂ. ದಂಡ, ನಾಲ್ಕು ವರ್ಷಗಳ ಸಾದಾ ಶಿಕ್ಷೆ ವಿಧಿಸಿ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಆರೋಪಿ ಶಿವಲಿಂಗ ಕೊಂಡಗುಳಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆಂಬ ಮಾಹಿತಿ ಮೇರೆಗೆ 2013ರ ಫೆಬ್ರವರಿ 15ರಂದು ಮಂಗಳೂರು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.
ಜಿಲ್ಲಾ ಸತ್ರ ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸಿದ್ದು, ನ್ಯಾಯಾಧೀಶ ಬಿ.ಬಿ. ಜಕಾತಿ ಇಂದು ಅಂತಿಮ ತೀರ್ಪು ನೀಡಿದ್ದಾರೆ. ಆರೋಪಿ ವಿರುದ್ಧ ಕಲಂ 13(1) (ಇ) ಜತೆಗೆ 13(2) ಲಂಚ ನಿರೋಧ ಕಾಯ್ದೆ 1988ರಂತೆ ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ. ಆರೋಪಿ ದಂಡ ಕಟ್ಟಲು ವಿಫಲನಾದಲ್ಲಿ ಮತ್ತೆ 1 ವರ್ಷ ಸಾದಾ ಸಜೆಗೆ ಆದೇಶಿಸಿ ಅಂತಿಮ ತೀರ್ಪು ನೀಡಲಾಗಿದೆ.
ಹಾಲಿ ಶಿವಾನಂದ ಕುಂಡಗುಳಿ ಹಿರಿಯ ನೈರ್ಮಲ್ಯ ನಿರೀಕ್ಷರಾಗಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕರ್ತವ್ಯದಲ್ಲಿದ್ದಾರೆ.
ಪ್ರಕರಣದಲ್ಲಿ ಲೋಕಾಯುಕ್ತ ಮಂಗಳೂರು ಪೊಲೀಸ್ ಉಪಾಧೀಕ್ಷಕರಾದ ಉಮೇಶ್ ಜಿ. ಶೇಟ್ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಮಂಗಳೂರು ಲೋಕಾಯುಕ್ತದ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಸರಕಾರದ ಪರವಾಗಿ ವಾದ ಮಂಡಿಸಿದ್ದರು.
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…