ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ 30 ವರ್ಷಗಳ ಹಿಂದೆ ನಡೆದಿದ್ದು, ಇದೀಗ ಸುಪ್ರೀಂ ಕೋರ್ಟ್ ತೀರ್ಪಿನಿಂದ ಆರೋಪಿ ಮತ್ತೆ ಕಾರಾಗೃಹ ಪಾಲಾಗಿದ್ದಾರೆ.
ನಾಗೇಶ್ ಶಿವಂಗೇಕರ್ ಎಂಬವರು ಬೆಳಗಾವಿ ಜಿಲ್ಲೆಯ ಕಡೋಲಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭ, ಪಹಣಿ ಪತ್ರದಲ್ಲಿ ವಾಟ್ನಿ ಮಾಡಲು 500 ರೂಪಾಯಿ ಲಂಚವನ್ನು ಕೇಳಿದ್ದಾರಂತೆ. ಈ ಬಗ್ಗೆ ಲಕ್ಷ್ಮಣ ಕಟಾಂಬಳೆ ಎಂಬುವವರು ಲೋಕಾಯುಕ್ತೆಗೆ ದೂರು ನೀಡಿದ್ದರು. ಲೋಕಾಯುಕ್ತ ಪೊಲೀಸರು 500 ರೂ. ಲಂಚ ಪಡೆಯುತ್ತಿರುವ ವೇಳೆ ದಾಳಿ ನಡೆಸಿ ನಾಗೇಶ್ ಅವರನ್ನು ಬಂಧಿಸಿದ್ದರು.
ಈ ಪ್ರಕರಣದ ವಿಚಾರಣೆ 2006 ರಲ್ಲಿ ಪೂರ್ಣಗೊಂಡು, ಸ್ಥಳೀಯ ನ್ಯಾಯಾಲಯ ನಾಗೇಶ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 1000 ರೂ. ದಂಡ ವಿಧಿಸಿತ್ತು. ನಂತರ ಅವರು ಈ ತೀರ್ಪು ವಿರುದ್ಧ ಧಾರವಾಡ ಬೃಹತ್ ನ್ಯಾಯಾಲಯದ ಶರಣಾಗಿದ್ದು, ತಾತ್ಕಾಲಿಕವಾಗಿ ರಿಲೀಫ್ ಪಡೆದಿದ್ದರು.
ಆದರೆ ಲೋಕಾಯುಕ್ತ ಈ ತಾತ್ಕಾಲಿಕ ತೀರ್ಪು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿತ್ತು. ಇದೀಗ ತೀರ್ಪು , ಸುಪ್ರೀಂ ಕೋರ್ಟ್ ಲೋಕಾಯುಕ್ತ ಪರ ನಿಲ್ಲುತ್ತಾ ಮೂಲ ತೀರ್ಪನ್ನು ಮಾನ್ಯ ಮಾಡಿದೆ. ಇದೇ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಈಗ 10 ವರ್ಷಗಳ ಹಿಂದೆ ನಿವೃತ್ತರಾದ ನಾಗೇಶ್ ಶಿವಂಗೇಕರ್ ಅವರನ್ನು ಬಂಧಿಸಿ, ಬೆಳಗಾವಿಯ ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ.
ಇಲ್ಲಿ ವಿಶೇಷವೆಂದರೆ, ದೂರು ನೀಡಿದ್ದ ವ್ಯಕ್ತಿ ಲಕ್ಷ್ಮಣ ಕಟಾಂಬಳೆ 5 ವರ್ಷಗಳ ಹಿಂದೆ ಸಾವನ್ನಪ್ಪಿದ್ದರೂ ಕೂಡ ನ್ಯಾಯದ ಚಕ್ರ ತನ್ನ ಪಥವನ್ನು ಮುಂದುವರಿಸಿ ಕೊನೆಗೂ ತಪ್ಪಿತಸ್ಥನಿಗೆ ಶಿಕ್ಷೆ ವಿಧಿಸಲು ಕಾರಣವಾಯಿತು.
ಈ ಘಟನೆಯು “ವಿಧಿ ಯವಳಿಗೆ ವಿಳಂಬವಾಯಿತೆ ಹೊರತು ವಿಳಾಸ ತಪ್ಪದು” ಎಂಬ ಮಾತಿಗೆ ಮತ್ತೆ ದೃಢತೆ ನೀಡಿದಂತಾಗಿದೆ.
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…