Categories: CorruptionLatest

ಲಂಚ ಪ್ರಕರಣ: ಪಿ.ಡಿ.ಓ ಮಹ್ಮದ್ ಖಾಜಾಗೆ 7 ವರ್ಷ ಜೈಲು, ₹75 ಸಾವಿರ ದಂಡ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಗೊರೇಬಾಳ ತಾಂಡಾದಲ್ಲಿ ನಡೆದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಪಿ.ಡಿ.ಓ ಮಹ್ಮದ ಖಾಜಾಗೆ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿದೆ.

ಗೊರೇಬಾಳ ತಾಂಡಾದ ಚೇತನ (ತಂದೆ ಲೋಕಪ್ಪ) ಅವರು ದನದ ಶೆಡ್ ನಿರ್ಮಿಸಿ ಸರ್ಕಾರದಿಂದ ಸಹಾಯಧನ ಪಡೆಯಬೇಕಾಗಿದ್ದ ಸಂದರ್ಭದಲ್ಲಿ, ಆ ಹಣ ಬಿಡುಗಡೆ ಮಾಡಲು ಪಿ.ಡಿ.ಓ ಮಹ್ಮದ ಖಾಜಾ ಅವರು ₹15,000 ಲಂಚದ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಈ ಸಂಬಂಧ ಚೇತನ ಅವರು ಅಂದಿನ ಎಸಿಬಿ (ACB) ಪೊಲೀಸರಿಗೆ ದೂರು ನೀಡಿದ್ದರು.

ದೂರು ಆಧಾರವಾಗಿ ಪ್ರಕರಣ ದಾಖಲಿಸಿಕೊಂಡ ಎಸಿಬಿ ಅಧಿಕಾರಿಗಳು, ಮಹ್ಮದ ಖಾಜಾ ಅವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಟ್ರ್ಯಾಪ್ ನಡೆಸಿ, ಹಣ ಸಮೇತ ಬಂಧಿಸಿದ್ದರು. ನಂತರ ತನಿಖೆ ಪೂರ್ಣಗೊಳಿಸಿ, ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀಧರ ದೊಡ್ಡಿ ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ರಾಯಚೂರು 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಅವರು ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿ, ಭ್ರಷ್ಟಾಚಾರ ತಡೆ ಕಾಯ್ದೆ 1988ರ ಕಲಂ 7 ಅಡಿಯಲ್ಲಿ 3 ವರ್ಷ ಜೈಲು ಶಿಕ್ಷೆ ಹಾಗೂ ₹25,000 ದಂಡ, ಹಾಗೆಯೇ ಕಲಂ 13(1)(ಡಿ) ಸಹಿತ 13(2) ಅಡಿಯಲ್ಲಿ 4 ವರ್ಷ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ್ದಾರೆ. ಒಟ್ಟಾರೆ 7 ವರ್ಷ ಜೈಲು ಶಿಕ್ಷೆ ಹಾಗೂ ₹75,000 ದಂಡ ವಿಧಿಸಲಾಗಿದೆ.

ಇದಲ್ಲದೆ, ವಿಚಾರಣೆಯ ವೇಳೆ ದೂರುದಾರ ಚೇತನ ಅವರು ನ್ಯಾಯಾಲಯದಲ್ಲಿ ಪ್ರತಿಕೂಲ ಸಾಕ್ಷಿ ನೀಡಿದ ಹಿನ್ನೆಲೆ, ಅವರ ವಿರುದ್ಧ ಸುಳ್ಳು ಸಾಕ್ಷಿ ನೀಡಿದ ಆರೋಪದಡಿ ಕ್ರಿಮಿನಲ್ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶ ನೀಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ದಾಳಿ ಶಾಕ್: AEE ಅಜಯಸಿಂಗ್ ಬಳಿ 14 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ

Belagavi ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ಅಜಯಸಿಂಗ್ ರಜಪೂತ್ ಅವರ ನಿವಾಸ ಮತ್ತು ಸಂಬಂಧಿತ ಸ್ಥಳಗಳ ಮೇಲೆ…

8 hours ago

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ರೂ. ವಂಚನೆ ಆರೋಪ: ಪಂಜಗುಟ್ಟ ಪೊಲೀಸರಲ್ಲಿ ಪ್ರಕರಣ ದಾಖಲು

ಕನ್ನಡ ಮತ್ತು ತೆಲುಗು ಸಂಗೀತ ಕ್ಷೇತ್ರದಲ್ಲಿ ಖ್ಯಾತಿ ಗಳಿಸಿರುವ ಗಾಯಕಿ Mangli ಹಾಗೂ ಅವರ ಸಹೋದರನ ವಿರುದ್ಧ ಭಾರೀ ವಂಚನೆ…

8 hours ago

ಮದುವೆ ನಿರಾಕರಣೆ: ಹೆಚ್‌ಐವಿ ರಕ್ತ ಚುಚ್ಚಿದ ಆರೋಪಿ, ಯುವತಿ ಆತ್ಮಹತ್ಯೆ

ನೆರೆಯ ತೆಲಂಗಾಣ ರಾಜ್ಯದ ರಾಜಧಾನಿ ಹೈದರಾಬಾದ್ ನಲ್ಲಿ ಮನಕಲಕುವ ಘಟನೆಯೊಂದು ಬೆಳಕಿಗೆ ಬಂದಿದೆ. ಮದುವೆ ಪ್ರಸ್ತಾಪವನ್ನು ನಿರಾಕರಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ,…

8 hours ago

ಪ್ರೀತಿಗಾಗಿ ಧರ್ಮ ಬಿಟ್ಟ ಯುವತಿ; ಪೊಲೀಸ್ ರಕ್ಷಣೆಗಾಗಿ ಯುವ ಜೋಡಿ ಮೊರೆ.!

ಅಂತರ್‌ಧರ್ಮೀಯ ವಿವಾಹ ಮಾಡಿಕೊಂಡಿರುವ ಯುವ ಜೋಡಿಯೊಂದು ತನ್ನ ಸುರಕ್ಷತೆಗಾಗಿ ಜಿಲ್ಲಾ ಪೊಲೀಸ್ ಅಧಿಕಾರಿಗಳ ನೆರವು ಬೇಡಿರುವ ಘಟನೆ ಇದೀಗ ಗಮನ…

8 hours ago

ಹಗಲು ಹೊತ್ತಿನಲ್ಲೇ ಯುವತಿಗೆ ರಸ್ತೆಯಲ್ಲಿ ಕಿರುಕುಳ: ವೈರಲ್ ವಿಡಿಯೋಗೆ ಸಾರ್ವಜನಿಕರ ಆಕ್ರೋಶ

ದೇಶದಲ್ಲಿ ಮಹಿಳಾ ಸುರಕ್ಷತೆಗೆ ಸಂಬಂಧಿಸಿದಂತೆ ಎಷ್ಟೇ ಕಠಿಣ ಕಾನೂನು ಕ್ರಮಗಳನ್ನು ಕೈಗೊಂಡರೂ, ಸಾರ್ವಜನಿಕ ಸ್ಥಳಗಳಲ್ಲಿ ಕಿರುಕುಳ ನೀಡುವ ಘಟನೆಗಳು ನಿಲ್ಲುವ…

16 hours ago

ಗುಡದನಾಳ ಕೊಲೆ ಪ್ರಕರಣ: 10 ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹19,500 ದಂಡ

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ…

16 hours ago