ಕಲಬುರಗಿ: ಮರಳು ಸಾಗಾಣಿಕೆಗೆ ಅನುಮತಿ ನೀಡಲು ಲಂಚ ಪಡೆಯುವಾಗ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದ ಪೋಲಿಸ್ ಕಾನ್ ಸ್ಟೇಬಲ್ ಗಳ ನ್ನು ಅಮಾನತ್ತುಗೊಳಿಸಿ ಎಸ್ಪಿ ಇಶಾ ಪಂತ್ ಆದೇಶ ಹೊರಡಿಸಿದ್ದಾರೆ.
ಜೇವರ್ಗಿ ಠಾಣೆಯ ಕಾನ್ ಸ್ಟೇಬಲ್ ಶಿವರಾಯ ಅರಳಗುಂಡಗಿ ಹಾಗೂ ಅವ್ವಣ್ಣ ಅಮಾನತ್ತುಗೊಂಡವರು.
ಮರಳು ಸಾಗಾಣೆಗೆ ಅನುಮತಿ ನೀಡಲು ಶಹಾಪುರ ಮೂಲದ ಅಖಿಲ್ ಎಂಬುವರಿಗೆ ಲಂಚದ ಬೇಡಿಕೆ ಇಟ್ಟು, ಗುರುವಾರ ಹಣ ಪಡೆಯುವಾಗ ಲೋಕಾಯುಕ್ತರು ಟ್ರ್ಯಾಪ್ ಮಾಡಿ ಕಾನ್ ಸ್ಟೇಬಲ್ ಶಿವರಾಯ ಅರಳಗುಂಡಗಿಯನ್ನು ಬಲೆಗೆ ಕೆಡವಿದ್ದರು. ಬಳಿಕ ಅವ್ವಣ್ಣ ಕೂಡಾ ಪ್ರಕರಣದಲ್ಲಿ ತಗುಲಾಕಿಕೊಂಡಿದ್ದರು. ಇಬ್ಬರನ್ನು ಅ.6 ರವರೆಗೂ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಈ ಹಿನ್ನಲೆ ಎಸ್ಪಿ ಇಬ್ಬರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…