ಕಲಬುರಗಿ: ಮರಳು ಸಾಗಾಣಿಕೆಗೆ ಅನುಮತಿ ನೀಡಲು ಲಂಚ ಪಡೆಯುವಾಗ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದ ಪೋಲಿಸ್ ಕಾನ್ ಸ್ಟೇಬಲ್ ಗಳ ನ್ನು ಅಮಾನತ್ತುಗೊಳಿಸಿ ಎಸ್ಪಿ ಇಶಾ ಪಂತ್ ಆದೇಶ ಹೊರಡಿಸಿದ್ದಾರೆ.
ಜೇವರ್ಗಿ ಠಾಣೆಯ ಕಾನ್ ಸ್ಟೇಬಲ್ ಶಿವರಾಯ ಅರಳಗುಂಡಗಿ ಹಾಗೂ ಅವ್ವಣ್ಣ ಅಮಾನತ್ತುಗೊಂಡವರು.
ಮರಳು ಸಾಗಾಣೆಗೆ ಅನುಮತಿ ನೀಡಲು ಶಹಾಪುರ ಮೂಲದ ಅಖಿಲ್ ಎಂಬುವರಿಗೆ ಲಂಚದ ಬೇಡಿಕೆ ಇಟ್ಟು, ಗುರುವಾರ ಹಣ ಪಡೆಯುವಾಗ ಲೋಕಾಯುಕ್ತರು ಟ್ರ್ಯಾಪ್ ಮಾಡಿ ಕಾನ್ ಸ್ಟೇಬಲ್ ಶಿವರಾಯ ಅರಳಗುಂಡಗಿಯನ್ನು ಬಲೆಗೆ ಕೆಡವಿದ್ದರು. ಬಳಿಕ ಅವ್ವಣ್ಣ ಕೂಡಾ ಪ್ರಕರಣದಲ್ಲಿ ತಗುಲಾಕಿಕೊಂಡಿದ್ದರು. ಇಬ್ಬರನ್ನು ಅ.6 ರವರೆಗೂ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಈ ಹಿನ್ನಲೆ ಎಸ್ಪಿ ಇಬ್ಬರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…
ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…