Categories: CorruptionLatest

ಜಾಮೀನು ಕೊಡಿಸುವ ಹೆಸರಿನಲ್ಲಿ ಲಂಚ: ಕೊಪ್ಪಳದಲ್ಲಿ ಇಬ್ಬರು ಪೊಲೀಸ್ ಪೇದೆಗಳು ಲೋಕಾಯುಕ್ತ ಬಲೆಗೆ

ರಾಜ್ಯದಲ್ಲಿ ಭ್ರಷ್ಟಾಚಾರ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. “ಸರ್ಕಾರಿ ಕೆಲಸ ದೇವರ ಕೆಲಸ” ಎಂಬ ನಂಬಿಕೆಗೆ ಧಕ್ಕೆ ತರುವಂತೆ, ಜನಸೇವೆಗೆ ಬಂದ ಕೆಲ ಅಧಿಕಾರಿಗಳು ಜನಸಾಮಾನ್ಯರ ಬಳಿ ಲಂಚದ ಬೇಡಿಕೆ ಇಡುವ ಘಟನೆಗಳು ಮುಂದುವರಿಯುತ್ತಿವೆ. ಈಗಾಗಲೇ ಅನೇಕ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರೂ, ಕೆಲವರು ಪಾಠ ಕಲಿಯದೇ ಅದೇ ದಾರಿಯಲ್ಲಿ ಮುಂದುವರಿಯುತ್ತಿರುವುದು ದುಃಖಕರ.

ಇದೇ ಹಿನ್ನೆಲೆದಲ್ಲಿ, ಕೊಪ್ಪಳ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುವಾಗ ಇಬ್ಬರು ಪೊಲೀಸ್ ಪೇದೆಗಳು ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಾರುತಿ ಬ್ಯಾಳಿ ಮತ್ತು ಚಂದಾಲಿಂಗ್ ಮೇಳೆ ಎಂಬ ಪೇದೆಗಳು, ಅಟ್ರಾಸಿಟಿ ಪ್ರಕರಣವೊಂದರಲ್ಲಿ ಜಾಮೀನು ಕೊಡಿಸುವುದಾಗಿ ಹೇಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಮೆಹಬೂಬ್ ಪಾಶಾ ಎಂಬ ವ್ಯಕ್ತಿಯಿಂದ ಫೋನ್‌ಪೇ ಮೂಲಕ ₹15,000 ಹಣವನ್ನು ಪಡೆದಿದ್ದ ಆರೋಪವೂ ಇವರ ಮೇಲೆ ಇದೆ. ಬಳಿಕ ₹3,000 ಹಣವನ್ನು ಸ್ವೀಕರಿಸುವ ವೇಳೆ, ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ರಾಜ್ಯದಲ್ಲಿ ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತದ ಕಾರ್ಯಾಚರಣೆ ನಿರಂತರವಾಗಿ ಮುಂದುವರಿಯುತ್ತಿದ್ದು, ಇಂತಹ ಘಟನೆಗಳು ಇತರ ಅಧಿಕಾರಿಗಳಿಗೆ ಎಚ್ಚರಿಕೆಯ ಗಂಟೆಯಾಗಬೇಕಾಗಿದೆ.

ಭ್ರಷ್ಟರ ಬೇಟೆ

Recent Posts

ಸುಜಾತ ಭೂಮಿ ವಿವಾದಕ್ಕೆ ಹೊಸ ತಿರುವು: ರೈತರ ಪರ ನಿಂತ ಹರತಾಳು ಹಾಲಪ್ಪ, ಡಿಎಫ್‌ಒಗೆ ಮನವಿ

ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ರೈತ ಮಹಿಳೆ ಸುಜಾತ ಅವರ ಭೂಮಿ ವಿವಾದ ಇದೀಗ ಹೊಸ ಹಂತ ತಲುಪಿದ್ದು, ಮಾಜಿ…

21 hours ago

ಕಚೇರಿಯನ್ನೇ ಮದ್ಯಪಾನದ ಅಡ್ಡೆಯನ್ನಾಗಿಸಿದ ಅಧಿಕಾರಿಗಳು; ಎಇಇ ಸೇರಿ ಮೂವರು ಸಸ್ಪೆಂಡ್

ರಾಯಚೂರಿನಲ್ಲಿ ಸರ್ಕಾರಿ ಕಚೇರಿಯಲ್ಲೇ ಗುಂಡು-ತುಂಡಿನ ಪಾರ್ಟಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಮೂವರು ಸಿಬ್ಬಂದಿಯನ್ನು…

21 hours ago

ಕಳ್ಳತನ ನಡೆದ 8 ಗಂಟೆಯೊಳಗೆ ಇಬ್ಬರು ಆರೋಪಿಗಳ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನ-ನಗದು ವಶ

ಭಟ್ಕಳ: ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೇವಲ…

1 day ago

ಕಾರವಾರದಲ್ಲಿ 100 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಂಪುಟ ಅಸ್ತು!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುದಿನಗಳ ಕನಸಿಗೆ ಕೊನೆಗೂ ಜಯ ಸಿಕ್ಕಿದೆ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ…

1 day ago

3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಅರೆಸ್ಟ್!

ಹಳಿಯಾಳ: ಸುಲಿಗೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಕಳೆದ ಮೂರು ವರ್ಷಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್‌ನ್ನು…

2 days ago

ಕುಡಿದ ಅಮಲಿನಲ್ಲಿ ಹೆತ್ತ ಮಗಳ ಮೇಲೆಯೇ ಅತ್ಯಾಚಾರ! ಉತ್ತರಕನ್ನಡದಲ್ಲಿ ಬೆಚ್ಚಿಬೀಳಿಸಿದ ಪಾಪಿ ತಂದೆಯ ಕೃತ್ಯ

ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಮಾನವೀಯತೆಯನ್ನೇ ಮರೆಸುವಂತಹ ಅಮಾನುಷ ಘಟನೆ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ತಂದೆಯೊಬ್ಬ ತನ್ನ 13…

2 days ago