ರಾಜ್ಯದಲ್ಲಿ ಭ್ರಷ್ಟಾಚಾರ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. “ಸರ್ಕಾರಿ ಕೆಲಸ ದೇವರ ಕೆಲಸ” ಎಂಬ ನಂಬಿಕೆಗೆ ಧಕ್ಕೆ ತರುವಂತೆ, ಜನಸೇವೆಗೆ ಬಂದ ಕೆಲ ಅಧಿಕಾರಿಗಳು ಜನಸಾಮಾನ್ಯರ ಬಳಿ ಲಂಚದ ಬೇಡಿಕೆ ಇಡುವ ಘಟನೆಗಳು ಮುಂದುವರಿಯುತ್ತಿವೆ. ಈಗಾಗಲೇ ಅನೇಕ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರೂ, ಕೆಲವರು ಪಾಠ ಕಲಿಯದೇ ಅದೇ ದಾರಿಯಲ್ಲಿ ಮುಂದುವರಿಯುತ್ತಿರುವುದು ದುಃಖಕರ.
ಇದೇ ಹಿನ್ನೆಲೆದಲ್ಲಿ, ಕೊಪ್ಪಳ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುವಾಗ ಇಬ್ಬರು ಪೊಲೀಸ್ ಪೇದೆಗಳು ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಾರುತಿ ಬ್ಯಾಳಿ ಮತ್ತು ಚಂದಾಲಿಂಗ್ ಮೇಳೆ ಎಂಬ ಪೇದೆಗಳು, ಅಟ್ರಾಸಿಟಿ ಪ್ರಕರಣವೊಂದರಲ್ಲಿ ಜಾಮೀನು ಕೊಡಿಸುವುದಾಗಿ ಹೇಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಮೆಹಬೂಬ್ ಪಾಶಾ ಎಂಬ ವ್ಯಕ್ತಿಯಿಂದ ಫೋನ್ಪೇ ಮೂಲಕ ₹15,000 ಹಣವನ್ನು ಪಡೆದಿದ್ದ ಆರೋಪವೂ ಇವರ ಮೇಲೆ ಇದೆ. ಬಳಿಕ ₹3,000 ಹಣವನ್ನು ಸ್ವೀಕರಿಸುವ ವೇಳೆ, ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತದ ಕಾರ್ಯಾಚರಣೆ ನಿರಂತರವಾಗಿ ಮುಂದುವರಿಯುತ್ತಿದ್ದು, ಇಂತಹ ಘಟನೆಗಳು ಇತರ ಅಧಿಕಾರಿಗಳಿಗೆ ಎಚ್ಚರಿಕೆಯ ಗಂಟೆಯಾಗಬೇಕಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…