Latest

ಕೋಲಾರದಲ್ಲಿ ಲಂಚದ ಜಾಲ ಬಯಲು: ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಕೋಲಾರ: ಭೂಪರಿವರ್ತನೆ ಸಂಬಂಧ ಲಂಚವಹಿಸುತ್ತಿದ್ದ ತ್ರಿವರ್ಣ ದಂಧೆ ಬಯಲಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಂಗಳವಾರ ಸಂಜೆ ನಡೆದ ಈ ಆಪರೇಷನ್‌ನಲ್ಲಿ ಶಿರಸ್ತೇದಾರ್ ಚಂದ್ರಪ್ಪ, ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಅಜಯ್ ಹಾಗೂ ದ್ವಿತೀಯ ದರ್ಜೆ ನೌಕರ ಮುನಿರಾಜು ವಿರುದ್ಧ ಕಾರ್ಯಾಚರಣೆ ನಡೆದಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಮೂವರ ಮೇಲೂ ಪ್ರಕರಣ ದಾಖಲಾಗಿದೆ. ಈ ವೇಳೆ ಚಂದ್ರಪ್ಪ ಹಾಗೂ ಮುನಿರಾಜುವನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದು, ಅಜಯ್ ಕೋರ್ಟ್ ಕೆಲಸಕ್ಕೆಂದು ಹೊರ ಹೋದಿದ್ದರಿಂದ ಬಂಧನ ತಪ್ಪಿಸಿದ್ದಾರೆ.

ಈ ಪ್ರಕರಣದಲ್ಲಿ ಬೆಂಗಳೂರಿನ ಮಂಜುನಾಥ್ ಎಂಬುವವರು ಮುಖ್ಯ ಅರ್ಜಿದಾರ. ಅವರು ಕೋಲಾರದ ತಮ್ಮ ಜಮೀನಿಗೆ ಸಂಬಂಧಿಸಿದ ಭೂಪರಿವರ್ತನೆ ಹಾಗೂ ಖಾತೆ ಸೇರಿಸುವ ಕಾರ್ಯಕ್ಕಾಗಿ ಹಲವು ತಿಂಗಳುಗಳ ಹಿಂದೆ ಅರ್ಜಿ ಸಲ್ಲಿಸಿದ್ದರು. ಕೆಲಸ ಮುಗಿಸಲು ₹25 ಸಾವಿರ ಲಂಚ ಕೇಳಲಾಗಿತ್ತೆಂದು ಆರೋಪಿಸಲಾಗಿದೆ. ಇದೇ ಹಿನ್ನೆಲೆ ಮೊದಲಿಗೆ ₹5 ಸಾವಿರ, ನಂತರ ₹10 ಸಾವಿರವನ್ನು ಅವರು ನೀಡಿದ್ದರು. ಉಳಿದ ಹಣಕ್ಕಾಗಿ ಅಧಿಕಾರಿಗಳು ಒತ್ತಾಯಿಸುತ್ತಿದ್ದರು ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹಸ್ತಾಂತರದ ಆಡಿಯೋ ದಾಖಲೆ ಸಹ ಮಂಜುನಾಥ್ ಬಳಿ ಇದೆ ಎಂದು ತಿಳಿದು ಬಂದಿದೆ.

ಹಣಕ್ಕಾಗಿ ನಿರಂತರ ಒತ್ತಡದೊಂದಿಗೆ ಮನನೊಂದ ಅರ್ಜಿದಾರ, ಲೋಕಾಯುಕ್ತ ಪೊಲೀಸರ ಮೊರೆ ಹೋಗಿದ್ದಾನೆ. ಈ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುತ್ತಿರುವ ಲಂಚದ ಜಾಲವನ್ನು ಭೇದಿಸಲು ಲೋಕಾಯುಕ್ತರು ಸಜ್ಜಾಗಿದ್ದು, ಸೂಚನೆಯಂತೆ ಪ್ಲ್ಯಾನ್ ಮಾಡಿದಂತೆ ₹22 ಸಾವಿರ ಹಣವನ್ನು ನೀಡುವ ವೇಳೆ ಟ್ರ್ಯಾಪ್‌ ಅಡಿಯಲ್ಲಿ ಮೂವರು ಬಿದ್ದಿದ್ದಾರೆ.

₹22 ಸಾವಿರದ ಲಂಚ ಮೊತ್ತದಲ್ಲಿ ಒಂದು ಭಾಗವನ್ನು ‘ಡಿ’ ದರ್ಜೆ ನೌಕರ ಮುನಿರಾಜು ಇಟ್ಟುಕೊಂಡು ಉಳಿದ ಹಣವನ್ನು ಶಿರಸ್ತೇದಾರ್ ಚಂದ್ರಪ್ಪನಿಗೆ ನೀಡಲು ಹೋಗುತ್ತಿದ್ದ ಸಂದರ್ಭದಲ್ಲೇ ಇವರಿಬ್ಬರೂ ಬಂಧನಕ್ಕೊಳಗಾದರು. ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು, ಇನ್ನಷ್ಟು ಮಾಹಿತಿಗಾಗಿ ಅಧಿಕಾರಿಗಳು ಮುಂದಿನ ಹಂತದ ಪರಿಶೀಲನೆ ನಡೆಸುತ್ತಿದ್ದಾರೆ.

nazeer ahamad

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

7 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

7 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

7 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

7 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

23 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

23 hours ago