ಬೆಂಗಳೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ಡಿಸಿಆರ್ಬಿ ಪೊಲೀಸ್ ಇನ್ಸ್ಪೆಕ್ಟರ್ ಗೀತಾ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಫೋನ್ ಪೇ ಮೂಲಕ ಹಣ ಪಡೆಯುವಾಗಲೇ ಅಧಿಕಾರಿಗಳು ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಯಾವ ಪ್ರಕರಣ?
ಸ್ಲಂ ಬೋರ್ಡ್ನಿಂದ ಮನೆ ಪಡೆಯಲು ಅಗತ್ಯವಿರುವ ಜಾತಿ ಪ್ರಮಾಣಪತ್ರಕ್ಕಾಗಿ ಲೋಕೇಶ್ ಎಂಬ ವ್ಯಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ದಾಖಲೆ ನೀಡುವ ಪ್ರತಿಯಾಗಿ ಇನ್ಸ್ಪೆಕ್ಟರ್ ಗೀತಾ 25,000 ರೂ. ಲಂಚದ ಬೇಡಿಕೆ ಇಟ್ಟಿದ್ದರು.
ಫೋನ್ ಪೇ ಮೂಲಕ ಮುಂಗಡ ಲಂಚ
ಲೋಕೇಶ್ ಅವರಿಂದ ಮುಂಗಡವಾಗಿ ₹10,000 ಲಂಚವನ್ನು ಫೋನ್ ಪೇ ಮೂಲಕ ಸ್ವೀಕರಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿತು. ಲಂಚದ ಬಗ್ಗೆ ಅನುಮಾನಗೊಂಡ ಲೋಕೇಶ್ ಕೂಡಲೇ ಲೋಕಾಯುಕ್ತಕ್ಕೆ ದೂರು ನೀಡಿದರು.
ಲೋಕಾಯುಕ್ತ ದಾಳಿ ಮತ್ತು ಬಂಧನ
ಲೋಕೇಶ್ ನೀಡಿದ ಮಾಹಿತಿಯ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಚಲನವಲನಗಳನ್ನು ಗಮನಿಸಿ, ಸೂಕ್ತ ಪ್ಲಾನ್ ಹಾಕಿ ದಾಳಿ ನಡೆಸಿದರು. ಫೋನ್ ಪೇ ಮೂಲಕ ಹಣ ವರ್ಗಾವಣೆ ಆಗುತ್ತಿದ್ದ ಸಂದರ್ಭದಲ್ಲಿಯೇ ಅಧಿಕಾರಿಗಳು ಗೀತಾ ಅವರನ್ನು ಬಂಧಿಸಿದರು.
ಈ ಪ್ರಕರಣದ ಕುರಿತು ಮುಂದಿನ ತನಿಖೆ ಸಾಗುತ್ತಿದೆ. ಅಧಿಕಾರ ದುರುಪಯೋಗ ಮಾಡಿಕೊಂಡು ಲಂಚ ಸ್ವೀಕರಿಸುವ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…