Crime

ದೆಹಲಿಯಲ್ಲಿ ಬ್ರಿಟಿಷ್ ಮಹಿಳೆ ಮೇಲೆ ಅತ್ಯಾಚಾರ, ಆರೋಪಿ ಬಂಧನ

ಹಂಪಿಯಲ್ಲಿ ವಿದೇಶಿ ಮಹಿಳೆ ಸೇರಿದಂತೆ ಇಬ್ಬರ ಮೇಲಿನ ಭೀಕರ (Hampi Horror) ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ, ದೇಶವನ್ನು ಮತ್ತೊಮ್ಮೆ ಕಂಗೆಡುವಂತಾದ ಮತ್ತೊಂದು ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ.

ದೆಹಲಿಯಲ್ಲಿ ಬ್ರಿಟಿಷ್ ಮಹಿಳೆ ಮೇಲೆ ಅತ್ಯಾಚಾರ, ಆರೋಪಿ ಬಂಧನ

ಇನ್‌ಸ್ಟಾಗ್ರಾಂ ಮೂಲಕ ಪರಿಚಿತರಾಗಿದ್ದ ವ್ಯಕ್ತಿಯನ್ನು ಭೇಟಿಯಾಗಲು ದೆಹಲಿಗೆ ಬಂದಿದ್ದ ಬ್ರಿಟಿಷ್ ಮಹಿಳೆ ಅತ್ಯಾಚಾರದ ಬಲಿಯಾಗಿದ್ದಾಳೆ. ಮಹಿಪಾಲಪುರದ ಹೋಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಆರೋಪಿಯಾದ ಕೈಲಾಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೃತ್ಯಕ್ಕೆ ಅವನ ಸ್ನೇಹಿತ ವಾಸಿಮ್ ಸಹ ಪಾಲುಗೊಂಡಿದ್ದಾನೆ ಎಂಬ ಆರೋಪವಿದ್ದು, ಅವನ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಪೊಲೀಸರ ಪ್ರಕಾರ, ಈ ಮಹಿಳೆ ಮಹಾರಾಷ್ಟ್ರ ಮತ್ತು ಗೋವಾದಲ್ಲಿ ರಜೆ ಕಳೆಯಲು ಭಾರತಕ್ಕೆ ಬಂದಿದ್ದಳು. ಪ್ರವಾಸದ ನಡುವೆ, ಕೈಲಾಶ್‌ಗೆ ಕರೆ ಮಾಡಿ ತನ್ನೊಂದಿಗೆ ಸಂಪರ್ಕದಲ್ಲಿರಲು ಕೇಳಿದ್ದಳು. ಕೈಲಾಶ್ ತಾನು ಹೊರಡುವ ಸಾಧ್ಯವಿಲ್ಲ ಎಂದು ತಿಳಿಸಿದ್ದರಿಂದ, ಮಹಿಳೆಯನ್ನು ದೆಹಲಿಗೆ ಬರಲು ಹೇಳಿದ್ದಾನೆ. ಮಂಗಳವಾರ, ಈಕೆ ದೆಹಲಿ ತಲುಪಿ ಮಹಿಪಾಲಪುರದ ಹೋಟೆಲ್‌ನಲ್ಲಿ ತಂಗಿದ್ದಳು. ಆಕೆಯ ಕರೆಯಂತೆ, ಕೈಲಾಶ್ ತನ್ನ ಸ್ನೇಹಿತ ವಾಸಿಮ್‌ನೊಂದಿಗೆ ಹೋಟೆಲ್ ತಲುಪಿದ ಬಳಿಕ, ಆ ರಾತ್ರಿ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ.

ಘಟನೆಯ ನಂತರ, ಮಹಿಳೆ ವಸಂತ್ ಕುಂಜ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದಳು. ಪೊಲೀಸರು ಕೂಡಲೇ ಕ್ರಮ ಕೈಗೊಂಡು ಕೈಲಾಶ್‌ನನ್ನು ಬಂಧಿಸಿದರು ಮತ್ತು ಬ್ರಿಟಿಷ್ ಹೈಕಮಿಷನ್‌ಗೆ ಈ ಬಗ್ಗೆ ಮಾಹಿತಿ ನೀಡಿದರು. ತಾನು ಇಂಗ್ಲಿಷ್ ಸರಿಯಾಗಿ ಮಾತನಾಡಲು ಸಾಧ್ಯವಾಗದೇ, ಗೂಗಲ್ ಅನುವಾದದ ಸಹಾಯದಿಂದ ಸಂವಹನ ಮಾಡುತ್ತಿದ್ದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ಹಂಪಿಯಲ್ಲಿ ಕಳೆದ ವಾರ ನಡೆದ ಭೀಕರ ಕೃತ್ಯ

ಇಂತಹದ್ದೇ ಭೀಕರ ಘಟನೆ ಮಾರ್ಚ್ 6ರಂದು ಹಂಪಿಯ ಸಾನಾಪುರ ಕೆರೆ ಸಮೀಪ ನಡೆದಿದೆ. ತುಂಗಭದ್ರಾ ಎಡದಂಡೆ ಕಾಲುವೆ ಬಳಿ ತಡರಾತ್ರಿಯವರೆಗೆ ಸಂಗೀತ ಕೇಳುತ್ತಾ ಕುಳಿತಿದ್ದ ಇಸ್ರೇಲಿ ಮಹಿಳೆ ಮತ್ತು ಹೋಮ್‌ಸ್ಟೇ ಮಾಲಕಿಯ ಮೇಲೆ ಮೂರು ಜನರು ಹಲ್ಲೆ ನಡೆಸಿದ್ದರು. ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದರೆ, ಅಲ್ಲಿದ್ದ ಇನ್ನಿಬ್ಬರು ಪುರುಷರ ಮೇಲೂ ಹಲ್ಲೆ ಮಾಡಿ ಕಾಲುವೆಗೆ ತಳ್ಳಿದ್ದರು.

  • ಈ ದಾಳಿಯಲ್ಲಿ ಒಬ್ಬ ಪ್ರವಾಸಿ ನಾಪತ್ತೆಯಾಗಿದ್ದು, ನಿನ್ನೆ (ಮಾರ್ಚ್ 12) ಅವನ ಶವ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಪತ್ತೆಯಾಗಿದೆ. ಮೃತನನ್ನು ಒಡಿಶಾ ಮೂಲದ ಬೀಬಾಷಾ ಎಂದು ಗುರುತಿಸಲಾಗಿದೆ.
  • ಈ ಪೈಶಾಚಿಕ ಕೃತ್ಯದಲ್ಲಿ ಮೂವರು ಆರೋಪಿಗಳ ಪಾತ್ರವಿರುವುದಾಗಿ ದೃಢಪಟ್ಟಿದ್ದು, ಮಾರ್ಚ್ 8ರಂದು ಇಬ್ಬರನ್ನು ಬಂಧಿಸಲಾಗಿತ್ತು. ಮೂರನೇ ಆರೋಪಿ ಭಾನುವಾರ ಪೊಲೀಸರ ಅತಿಥಿಯಾಗಿದ್ದಾನೆ.

ಈ ರೀತಿಯ ನಿರ್ದಯ ಅಪರಾಧಗಳು ವಿದೇಶಿ ಪ್ರವಾಸಿಗರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದ್ದು, ಸಾರ್ವಜನಿಕರು ಕಠಿಣ ಕ್ರಮಗಳ ಅಗತ್ಯವನ್ನು ಒತ್ತಿಹೇಳುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

14 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

18 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

18 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

18 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

18 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

23 hours ago